<p><strong>ಬೆಂಗಳೂರು:</strong> ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲು ತಜ್ಞರ ಸಮಿತಿ ರಚಿಸಿ ಮಾರ್ಗಸೂಚಿಗಳನ್ನು ರೂಪಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಅವರು ಸೋಮವಾರ ಉತ್ತರಿಸಿದರು. ನಿಷೇಧ ಜಾರಿ ಮಾಡುವ ಕುರಿತು ಪೋಷಕರೊಂದಿಗೂ ಚರ್ಚೆ ನಡೆಸಲಾಗುವುದು. ಮಕ್ಕಳ ಭವಿಷ್ಯ ಹಾಳಾಗಬಾರದು ಎಂಬ ಕಾಳಜಿಯಿಂದ ನಿಷೇಧಕ್ಕೆ ಮುಂದಾಗಿದ್ದು, ಈಗಾಗಲೇ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ ಎಂದರು.</p>.<p>ಮೊಬೈಲ್ ಬಳಕೆಯು ಮಕ್ಕಳ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಜಾಲತಾಣಗಳ ಬಳಕೆ ಮೇಲೆ ನಿಷೇಧ ಹೇರುವ ಅವಶ್ಯ ಇದೆ. ಶಾಲಾ–ಕಾಲೇಜುಗಳಿಗೆ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂದು ಹೇಳಿದರೂ ಪಾಲನೆಯಾಗುತ್ತಿಲ್ಲ. ಈ ಬಗ್ಗೆ ಅರಿವು ಮೂಡಿಸಲು ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದನ್ನು 2026–27ನೇ ಸಾಲಿನಿಂದ ಜಾರಿಗೊಳಿಸಲಾಗುವುದು. ಇದಕ್ಕೆ ಸಂಬಂಧಿಸಿದ ಪುಸ್ತಕವನ್ನೂ ನೀಡಲಾಗುವುದು. ವಾರಕ್ಕೆ ಎಷ್ಟು ಗಂಟೆ ನೈತಿಕ ಶಿಕ್ಷಣ ಬೋಧನೆಗೆ ಅವಕಾಶ ನೀಡಬೇಕು ಎಂಬುದನ್ನು ಜೂನ್ನಲ್ಲಿ ಶಾಲೆಗಳು ಆರಂಭವಾಗುವುದಕ್ಕೂ ಮೊದಲೇ ತಿಳಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲು ತಜ್ಞರ ಸಮಿತಿ ರಚಿಸಿ ಮಾರ್ಗಸೂಚಿಗಳನ್ನು ರೂಪಿಸಲಾಗುವುದು. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಅವರು ಸೋಮವಾರ ಉತ್ತರಿಸಿದರು. ನಿಷೇಧ ಜಾರಿ ಮಾಡುವ ಕುರಿತು ಪೋಷಕರೊಂದಿಗೂ ಚರ್ಚೆ ನಡೆಸಲಾಗುವುದು. ಮಕ್ಕಳ ಭವಿಷ್ಯ ಹಾಳಾಗಬಾರದು ಎಂಬ ಕಾಳಜಿಯಿಂದ ನಿಷೇಧಕ್ಕೆ ಮುಂದಾಗಿದ್ದು, ಈಗಾಗಲೇ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ ಎಂದರು.</p>.<p>ಮೊಬೈಲ್ ಬಳಕೆಯು ಮಕ್ಕಳ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಜಾಲತಾಣಗಳ ಬಳಕೆ ಮೇಲೆ ನಿಷೇಧ ಹೇರುವ ಅವಶ್ಯ ಇದೆ. ಶಾಲಾ–ಕಾಲೇಜುಗಳಿಗೆ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂದು ಹೇಳಿದರೂ ಪಾಲನೆಯಾಗುತ್ತಿಲ್ಲ. ಈ ಬಗ್ಗೆ ಅರಿವು ಮೂಡಿಸಲು ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದನ್ನು 2026–27ನೇ ಸಾಲಿನಿಂದ ಜಾರಿಗೊಳಿಸಲಾಗುವುದು. ಇದಕ್ಕೆ ಸಂಬಂಧಿಸಿದ ಪುಸ್ತಕವನ್ನೂ ನೀಡಲಾಗುವುದು. ವಾರಕ್ಕೆ ಎಷ್ಟು ಗಂಟೆ ನೈತಿಕ ಶಿಕ್ಷಣ ಬೋಧನೆಗೆ ಅವಕಾಶ ನೀಡಬೇಕು ಎಂಬುದನ್ನು ಜೂನ್ನಲ್ಲಿ ಶಾಲೆಗಳು ಆರಂಭವಾಗುವುದಕ್ಕೂ ಮೊದಲೇ ತಿಳಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>