<p><strong>ಬೆಂಗಳೂರು:</strong> ರಾಜ್ಯದಲ್ಲಿ ಈ ವರ್ಷ ಸಾಫ್ಟ್ವೇರ್ ರಫ್ತು ಪ್ರಮಾಣ ₹5.50 ಲಕ್ಷ ಕೋಟಿ ಮೀರುವ ಸಾಧ್ಯತೆ ಇದೆ ಎಂದು ಐಟಿ– ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ವೇದವಾಸ ಕಾಮತ್ ಪ್ರಶ್ನೆಗೆ ಉತ್ತರಿಸಿದ ಅವರು, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ವರದಿ ಪ್ರಕಾರ, 2022–23 ರಲ್ಲಿ ₹3.55 ಲಕ್ಷ ಕೋಟಿ, 2023–24 ರಲ್ಲಿ ₹4.09 ಲಕ್ಷ ಕೋಟಿ, 2024–25 ರಲ್ಲಿ ₹.458 ಲಕ್ಷ ಕೋಟಿ ಮೌಲ್ಯದ ಸಾಫ್ಟ್ವೇರ್ ರಫ್ತು ಮಾಡಲಾಗಿದೆ ಎಂದರು.</p>.<p>ಮಂಗಳೂರು ಭಾಗದಲ್ಲಿ ಉತ್ತಮ ವಾತಾವರಣ ಸೃಷ್ಟಿಯಾದರೆ ಅಲ್ಲಿನ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ. ಮಂಗಳೂರು ಐಟಿ– ಬಿಟಿ ಕ್ಷೇತ್ರದಲ್ಲಿ ವೇಗದ ಬೆಳವಣಿಗೆಯ ಎಲ್ಲ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ತಿಳಿಸಿದರು.</p>.<p>ರಾಜ್ಯದ ಜಿಡಿಪಿಯಲ್ಲಿ ಬೆಂಗಳೂರು ಬಿಟ್ಟರೆ ಎರಡನೇ ಸ್ಥಾನದಲ್ಲಿ ಮಂಗಳೂರು ಇದೆ. ಬೆಂಗಳೂರಿನ ಜಿಡಿಪಿ ಶೇ 39 ಇದ್ದರೆ, ಮಂಗಳೂರು ಜಿಡಿಪಿ ಶೇ 5.4 ಇದೆ. ಇನ್ನೂ ಶೇ 2 ರಷ್ಟು ಹೆಚ್ಚು ಜಿಡಿಪಿ ಸಾಧಿಸುವ ಸಾಮರ್ಥ್ಯ ಹೊಂದಿದೆ. ಬೆಂಗಳೂರು ಗ್ರಾಮಾಂತರ ಜಿಡಿಪಿ ಶೇ 1.2 ಇದೆ ಎಂದು ವಿವರಿಸಿದರು.</p>.<p>ಮಂಗಳೂರು, ಉಡುಪಿ, ಮಣಿಪಾಲವನ್ನು ಸೇರಿಸಿ ಕ್ಲಸ್ಟರ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಹೂಡಿಕೆಗೆ ಇರುವ ಮಾನದಂಡಗಳ ಸರಳೀಕರಣ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸಾಗರ ಕೃಷಿ ಕುರಿತ ನೀತಿಯನ್ನೂ ರೂಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.</p>.<p><strong>ಸುಸ್ಥಿರ ಡೇಟಾ ನೀತಿಗೆ ಚಿಂತನೆ: </strong>ರಾಜ್ಯದಲ್ಲಿ ಸುಸ್ಥಿರ ದತ್ತಾಂಶ ಕೇಂದ್ರ (ಡೇಟಾ ಸೆಂಟರ್ ) ನೀತಿ ರೂಪಿಸಲಾಗುವುದು. ರಾಜ್ಯದಲ್ಲಿ ಒಟ್ಟು 32 ಖಾಸಗಿ ದತ್ತಾಂಶ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಎಐ, ಮೆಷಿನ್ ಲರ್ನಿಂಗ್, ಉದಯೋನ್ಮುಖ ತಂತ್ರಜ್ಞಾನಗಳಿಗೆ ದತ್ತಾಂಶ ಕೇಂದ್ರಗಳ ಅಗತ್ಯವಿದೆ. ಆದರೆ, ಈ ಕೇಂದ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್, ನೀರಿನ ಅಗತ್ಯವಿದೆ. ಸದ್ಯ ರಾಜ್ಯದಲ್ಲಿ 2-3 ವರ್ಷ ಹಳೆಯ ನೀತಿಯಿದ್ದು, ಬದಲಾದ ತಂತ್ರಜ್ಞಾನಕ್ಕೆ ಪೂರಕವಾಗಿ ಸುಸ್ಥಿರ ನೀತಿ ರೂಪಿಸಲು ಚಿಂತಿಸಲಾಗಿದೆ ಎಂದು ಅವರು ಬಿಜೆಪಿ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದರು.<br> <br>‘ಬೆಂಗಳೂರು ಬದಲು ಮಂಗಳೂರು ಇಲ್ಲವೇ ಕರಾವಳಿ ಪ್ರದೇಶದಲ್ಲಿ ದತ್ತಾಂಶ ಕೇಂದ್ರಗಳ ಸ್ಥಾಪನೆಗೆ ನೀಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಕೇಂದ್ರ ದೂರಸಂಪರ್ಕ ಸಚಿವರಿಗೂ ಪತ್ರ ಬರೆದು ಸಬ್ಸೀ ಕೇಬಲ್ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿದೆ. ಖಾಸಗಿ ಸಂಸ್ಥೆಗಳು ಆಸಕ್ತಿ ತೋರಿದರೆ ಸಹಕಾರ ನೀಡುವುದಾಗಿ ಕೇಂದ್ರ ತಿಳಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಈ ವರ್ಷ ಸಾಫ್ಟ್ವೇರ್ ರಫ್ತು ಪ್ರಮಾಣ ₹5.50 ಲಕ್ಷ ಕೋಟಿ ಮೀರುವ ಸಾಧ್ಯತೆ ಇದೆ ಎಂದು ಐಟಿ– ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಬಿಜೆಪಿಯ ವೇದವಾಸ ಕಾಮತ್ ಪ್ರಶ್ನೆಗೆ ಉತ್ತರಿಸಿದ ಅವರು, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ವರದಿ ಪ್ರಕಾರ, 2022–23 ರಲ್ಲಿ ₹3.55 ಲಕ್ಷ ಕೋಟಿ, 2023–24 ರಲ್ಲಿ ₹4.09 ಲಕ್ಷ ಕೋಟಿ, 2024–25 ರಲ್ಲಿ ₹.458 ಲಕ್ಷ ಕೋಟಿ ಮೌಲ್ಯದ ಸಾಫ್ಟ್ವೇರ್ ರಫ್ತು ಮಾಡಲಾಗಿದೆ ಎಂದರು.</p>.<p>ಮಂಗಳೂರು ಭಾಗದಲ್ಲಿ ಉತ್ತಮ ವಾತಾವರಣ ಸೃಷ್ಟಿಯಾದರೆ ಅಲ್ಲಿನ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ. ಮಂಗಳೂರು ಐಟಿ– ಬಿಟಿ ಕ್ಷೇತ್ರದಲ್ಲಿ ವೇಗದ ಬೆಳವಣಿಗೆಯ ಎಲ್ಲ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ತಿಳಿಸಿದರು.</p>.<p>ರಾಜ್ಯದ ಜಿಡಿಪಿಯಲ್ಲಿ ಬೆಂಗಳೂರು ಬಿಟ್ಟರೆ ಎರಡನೇ ಸ್ಥಾನದಲ್ಲಿ ಮಂಗಳೂರು ಇದೆ. ಬೆಂಗಳೂರಿನ ಜಿಡಿಪಿ ಶೇ 39 ಇದ್ದರೆ, ಮಂಗಳೂರು ಜಿಡಿಪಿ ಶೇ 5.4 ಇದೆ. ಇನ್ನೂ ಶೇ 2 ರಷ್ಟು ಹೆಚ್ಚು ಜಿಡಿಪಿ ಸಾಧಿಸುವ ಸಾಮರ್ಥ್ಯ ಹೊಂದಿದೆ. ಬೆಂಗಳೂರು ಗ್ರಾಮಾಂತರ ಜಿಡಿಪಿ ಶೇ 1.2 ಇದೆ ಎಂದು ವಿವರಿಸಿದರು.</p>.<p>ಮಂಗಳೂರು, ಉಡುಪಿ, ಮಣಿಪಾಲವನ್ನು ಸೇರಿಸಿ ಕ್ಲಸ್ಟರ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಹೂಡಿಕೆಗೆ ಇರುವ ಮಾನದಂಡಗಳ ಸರಳೀಕರಣ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸಾಗರ ಕೃಷಿ ಕುರಿತ ನೀತಿಯನ್ನೂ ರೂಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.</p>.<p><strong>ಸುಸ್ಥಿರ ಡೇಟಾ ನೀತಿಗೆ ಚಿಂತನೆ: </strong>ರಾಜ್ಯದಲ್ಲಿ ಸುಸ್ಥಿರ ದತ್ತಾಂಶ ಕೇಂದ್ರ (ಡೇಟಾ ಸೆಂಟರ್ ) ನೀತಿ ರೂಪಿಸಲಾಗುವುದು. ರಾಜ್ಯದಲ್ಲಿ ಒಟ್ಟು 32 ಖಾಸಗಿ ದತ್ತಾಂಶ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಎಐ, ಮೆಷಿನ್ ಲರ್ನಿಂಗ್, ಉದಯೋನ್ಮುಖ ತಂತ್ರಜ್ಞಾನಗಳಿಗೆ ದತ್ತಾಂಶ ಕೇಂದ್ರಗಳ ಅಗತ್ಯವಿದೆ. ಆದರೆ, ಈ ಕೇಂದ್ರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್, ನೀರಿನ ಅಗತ್ಯವಿದೆ. ಸದ್ಯ ರಾಜ್ಯದಲ್ಲಿ 2-3 ವರ್ಷ ಹಳೆಯ ನೀತಿಯಿದ್ದು, ಬದಲಾದ ತಂತ್ರಜ್ಞಾನಕ್ಕೆ ಪೂರಕವಾಗಿ ಸುಸ್ಥಿರ ನೀತಿ ರೂಪಿಸಲು ಚಿಂತಿಸಲಾಗಿದೆ ಎಂದು ಅವರು ಬಿಜೆಪಿ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದರು.<br> <br>‘ಬೆಂಗಳೂರು ಬದಲು ಮಂಗಳೂರು ಇಲ್ಲವೇ ಕರಾವಳಿ ಪ್ರದೇಶದಲ್ಲಿ ದತ್ತಾಂಶ ಕೇಂದ್ರಗಳ ಸ್ಥಾಪನೆಗೆ ನೀಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಕೇಂದ್ರ ದೂರಸಂಪರ್ಕ ಸಚಿವರಿಗೂ ಪತ್ರ ಬರೆದು ಸಬ್ಸೀ ಕೇಬಲ್ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿದೆ. ಖಾಸಗಿ ಸಂಸ್ಥೆಗಳು ಆಸಕ್ತಿ ತೋರಿದರೆ ಸಹಕಾರ ನೀಡುವುದಾಗಿ ಕೇಂದ್ರ ತಿಳಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>