ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ 2023–24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ.
ಪರೀಕ್ಷೆ ಬರೆದ ಒಟ್ಟು 4,36,138 ಬಾಲಕರಲ್ಲಿ 2,87,416 (ಶೇ 65.90) ಮಂದಿ ಉತ್ತೀರ್ಣರಾಗಿದ್ದಾರೆ. 4,23,829 ವಿದ್ಯಾರ್ಥಿನಿಯರ ಪೈಕಿ 3,41,778 (ಶೇ 81.11) ಮಂದಿ ತೇರ್ಗಡೆಯಾಗಿದ್ದಾರೆ.
ಪರೀಕ್ಷೆ ಬರೆದಿದ್ದ ನಗರ ಪ್ರದೇಶದ 4,93,900 ವಿದ್ಯಾರ್ಥಿಗಳಲ್ಲಿ 3,59,703 (ಶೇ 72.83) ಮಂದಿ ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದ ಒಟ್ಟು 3,66,067 ವಿದ್ಯಾರ್ಥಿಗಳಲ್ಲಿ 2,71,501 (ಶೇ 74.17) ಮಂದಿ ಉತ್ತೀರ್ಣರಾಗಿದ್ದಾರೆ.
625ಕ್ಕೆ 625
ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪಾ ಕನ್ನೂರ ಅವರು 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 7 ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ.
ಒಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿಗಳು: 8,59,967 ಲಕ್ಷ ವಿದ್ಯಾರ್ಥಿಗಳು
ತೇರ್ಗಡೆಯಾದ ವಿದ್ಯಾರ್ಥಿಗಳು: 6,31,204