<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ಸೋಮವಾರ ನಡೆದಿದ್ದು, ಶೇ 97.93ರಷ್ಟು ಹಾಜರಾತಿ ದಾಖಲಾಗಿದೆ. ಪರೀಕ್ಷೆ ಅಕ್ರಮದಲ್ಲಿ ತೊಡಗಿದ್ದ ಮೂವರನ್ನು ಡಿಬಾರ್ ಮಾಡಲಾಗಿದೆ.</p>.<p>‘ವಿಜ್ಞಾನ, ರಾಜ್ಯಶಾಸ್ತ್ರ ಹಾಗೂ ಸಂಗೀತ ಪರೀಕ್ಷೆಗಳಿಗೆ ನೋಂದಾಯಿತ 7,91,102 ವಿದ್ಯಾರ್ಥಿಗಳ (ವಿಜ್ಞಾನ-7,90,681, ರಾಜ್ಯಶಾಸ್ತ್ರ-419, ಸಂಗೀತ- 02) ಪೈಕಿ 7,74,729 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಶೇ 98.69 ಹಾಜರಾತಿ ಇತ್ತು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಪರೀಕ್ಷೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘7,45,033 ರೆಗ್ಯುಲರ್ ವಿದ್ಯಾರ್ಥಿಗಳು ಹಾಗೂ 20,976 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ಧಾರವಾಡದ ಇಬ್ಬರು ಹಾಗೂ ರಾಯಚೂರಿನ ಒಬ್ಬರು ಡಿಬಾರ್ ಆಗಿದ್ದಾರೆ’ ಎಂದರು.</p>.<p>‘ಹೋಂ ಕ್ವಾರಂಟೈನ್ನಲ್ಲಿ ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಹಾಸನ ಜಿಲ್ಲೆಯ ಅರಸೀಕೆರೆಯ ಸೇಂಟ್ ಮೆರಿಸ್ ಹಾಗೂ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಪೋಷಕರು ಭಾನುವಾರ ಕೋವಿಡ್ ಸೋಂಕಿಗೆ ಒಳಗಾದ ಕಾರಣ ಅವರಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಕೊಟ್ಟಿಲ್ಲ. ಈ ಹಿಂದಿನ ಪರೀಕ್ಷೆಗಳಲ್ಲಿ ಅವರ ಜತೆಯಲ್ಲಿ ಪರೀಕ್ಷೆ ಬರೆದಿದ್ದ ಇತರ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸಲಾಗಿದೆ. ಬಾಗಲಕೋಟೆ ನವನಗರದ ಪರೀಕ್ಷಾ ಕೇಂದ್ರದಲ್ಲಿ ಗಣಿತ ಪರೀಕ್ಷೆ ದಿನ ಕೊಠಡಿ ಮೇಲ್ವಿಚಾರಕಿಯಾಗಿದ್ದ ಶಿಕ್ಷಕಿಯೊಬ್ಬರಿಗೆ ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಶಿಕ್ಷಕಿ ಸೇರಿದಂತೆ ಪರೀಕ್ಷೆಗೆ ನಿಯುಕ್ತರಾಗಿದ್ದ ಎಲ್ಲ ಪರೀಕ್ಷಾ ಸಿಬ್ಬಂದಿಯನ್ನು ಪರೀಕ್ಷಾ ಕೆಲಸದಿಂದ ವಿಮುಕ್ತಿಗೊಳಿಸಿ ಇಡೀ ಕೇಂದ್ರಕ್ಕೆ ಬೇರೆ ಸಿಬ್ಬಂದಿ ನೇಮಕ ಮಾಡಲಾಗಿದೆ’ ಎಂದು ಸಚಿವರು ವಿವರಿಸಿದರು.</p>.<p>‘ಶಿಕ್ಷಣ ಇಲಾಖೆ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವ ವಾತಾವರಣವನ್ನು ಕಲ್ಪಿಸಿದ್ದು, ಯಾವುದೇ ವಿದ್ಯಾರ್ಥಿಗಳು ವಿಚಲಿತಗೊಳ್ಳದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು’ ಎಂದು ಕೋರಿಕೊಂಡರು.</p>.<p><strong>ಜಿಲ್ಲಾಡಳಿತಗಳ ಬಗ್ಗೆ ಮೆಚ್ಚುಗೆ</strong><br />‘ಪರೀಕ್ಷೆ ಸಿದ್ಧತೆ ಕುರಿತಂತೆ ನಾನು ಎಲ್ಲ ಜಿಲ್ಲಾಡಳಿತಗಳೊಂದಿಗೆ ಈ ಸಂಬಂಧದಲ್ಲಿ ಸಂಪರ್ಕದಲ್ಲಿದ್ದೇನೆ. ಹಲವಾರು ಬಾರಿ ಅವರೊಂದಿಗೆ ಸಭೆ ನಡೆಸಿದ್ದೇನೆ. ಕೊರೊನಾ ಮೊದಲು ಮತ್ತು ನಂತರದ ಸಾಮಾಜಿಕ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವ ಕುರಿತಂತೆ ಜಿಲ್ಲಾಡಳಿತಗಳು ಕೈಗೊಂಡ ಕ್ರಮಗಳು, ವಿದ್ಯಾರ್ಥಿಗಳ ಪ್ರತಿಸ್ಪಂದನೆ ಇಡೀ ದೇಶಕ್ಕೇ ಮಾದರಿಯಾಗಿದೆ’ ಎಂದು ಸಚಿವರು ತಿಳಿಸಿದರು.</p>.<p><strong>ಪೋಷಕರ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು</strong><br />* ಶಿರಸಿ ತಾಲ್ಲೂಕಿನ ದೇವನಹಳ್ಳಿಯಲ್ಲಿ ವಿದ್ಯಾರ್ಥಿಯೊಬ್ಬನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರೂ, ಆತ ಶಿರಸಿಯ ಮಾರಿಕಾಂಬ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ.</p>.<p>* ಕಾರವಾರ ನಗರದ ಹಿಂದೂ ಪ್ರೌಢಶಾಲೆ ವಿದ್ಯಾರ್ಥಿ ನಿತಿನ್ ಕಾರವಾರ ತಂದೆ ಇತ್ತೀಚಿಗೆ ನಿಧನರಾಗಿದ್ದು, ಸೋಮವಾರ ತಂದೆಯವರ ಉತ್ತರಕ್ರಿಯೆ ಇತ್ತು. ಅದನ್ನು ಬೇಗ ಮುಗಿಸಿ ಪರೀಕ್ಷೆ ಬರೆದ ವಿದ್ಯಾರ್ಥಿ.</p>.<p>* ಶಿರಸಿ ತಾಲ್ಲೂಕಿನ ದನಗನಹಳ್ಳಿಯ ವಿದ್ಯಾರ್ಥಿನಿಯ ಪೋಷಕರು ಕೋವಿಡ್ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಪರೀಕ್ಷೆಗೆ ಕಳುಹಿಸಲು ಹಿಂದೇಟು ಹಾಕಿದ್ದರು. ಮನವೊಲಿಸಿ ವಿಜ್ಞಾನ ಪರೀಕ್ಷೆ ಬರೆಸಿದ್ದು, ಎರಡು ಪರೀಕ್ಷೆಗಳು ತಪ್ಪಿ ಹೋದುದಕ್ಕೆ ಈಗ ಪಶ್ಚಾತ್ತಾಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆ ಸೋಮವಾರ ನಡೆದಿದ್ದು, ಶೇ 97.93ರಷ್ಟು ಹಾಜರಾತಿ ದಾಖಲಾಗಿದೆ. ಪರೀಕ್ಷೆ ಅಕ್ರಮದಲ್ಲಿ ತೊಡಗಿದ್ದ ಮೂವರನ್ನು ಡಿಬಾರ್ ಮಾಡಲಾಗಿದೆ.</p>.<p>‘ವಿಜ್ಞಾನ, ರಾಜ್ಯಶಾಸ್ತ್ರ ಹಾಗೂ ಸಂಗೀತ ಪರೀಕ್ಷೆಗಳಿಗೆ ನೋಂದಾಯಿತ 7,91,102 ವಿದ್ಯಾರ್ಥಿಗಳ (ವಿಜ್ಞಾನ-7,90,681, ರಾಜ್ಯಶಾಸ್ತ್ರ-419, ಸಂಗೀತ- 02) ಪೈಕಿ 7,74,729 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ವರ್ಷ ಶೇ 98.69 ಹಾಜರಾತಿ ಇತ್ತು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಪರೀಕ್ಷೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘7,45,033 ರೆಗ್ಯುಲರ್ ವಿದ್ಯಾರ್ಥಿಗಳು ಹಾಗೂ 20,976 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ಧಾರವಾಡದ ಇಬ್ಬರು ಹಾಗೂ ರಾಯಚೂರಿನ ಒಬ್ಬರು ಡಿಬಾರ್ ಆಗಿದ್ದಾರೆ’ ಎಂದರು.</p>.<p>‘ಹೋಂ ಕ್ವಾರಂಟೈನ್ನಲ್ಲಿ ಹಾಗೂ ಕೋವಿಡ್ ಪಾಸಿಟಿವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಹಾಸನ ಜಿಲ್ಲೆಯ ಅರಸೀಕೆರೆಯ ಸೇಂಟ್ ಮೆರಿಸ್ ಹಾಗೂ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜುಗಳಿಗೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಪೋಷಕರು ಭಾನುವಾರ ಕೋವಿಡ್ ಸೋಂಕಿಗೆ ಒಳಗಾದ ಕಾರಣ ಅವರಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಕೊಟ್ಟಿಲ್ಲ. ಈ ಹಿಂದಿನ ಪರೀಕ್ಷೆಗಳಲ್ಲಿ ಅವರ ಜತೆಯಲ್ಲಿ ಪರೀಕ್ಷೆ ಬರೆದಿದ್ದ ಇತರ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸಲಾಗಿದೆ. ಬಾಗಲಕೋಟೆ ನವನಗರದ ಪರೀಕ್ಷಾ ಕೇಂದ್ರದಲ್ಲಿ ಗಣಿತ ಪರೀಕ್ಷೆ ದಿನ ಕೊಠಡಿ ಮೇಲ್ವಿಚಾರಕಿಯಾಗಿದ್ದ ಶಿಕ್ಷಕಿಯೊಬ್ಬರಿಗೆ ಸೋಂಕಿನ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಶಿಕ್ಷಕಿ ಸೇರಿದಂತೆ ಪರೀಕ್ಷೆಗೆ ನಿಯುಕ್ತರಾಗಿದ್ದ ಎಲ್ಲ ಪರೀಕ್ಷಾ ಸಿಬ್ಬಂದಿಯನ್ನು ಪರೀಕ್ಷಾ ಕೆಲಸದಿಂದ ವಿಮುಕ್ತಿಗೊಳಿಸಿ ಇಡೀ ಕೇಂದ್ರಕ್ಕೆ ಬೇರೆ ಸಿಬ್ಬಂದಿ ನೇಮಕ ಮಾಡಲಾಗಿದೆ’ ಎಂದು ಸಚಿವರು ವಿವರಿಸಿದರು.</p>.<p>‘ಶಿಕ್ಷಣ ಇಲಾಖೆ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವ ವಾತಾವರಣವನ್ನು ಕಲ್ಪಿಸಿದ್ದು, ಯಾವುದೇ ವಿದ್ಯಾರ್ಥಿಗಳು ವಿಚಲಿತಗೊಳ್ಳದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು’ ಎಂದು ಕೋರಿಕೊಂಡರು.</p>.<p><strong>ಜಿಲ್ಲಾಡಳಿತಗಳ ಬಗ್ಗೆ ಮೆಚ್ಚುಗೆ</strong><br />‘ಪರೀಕ್ಷೆ ಸಿದ್ಧತೆ ಕುರಿತಂತೆ ನಾನು ಎಲ್ಲ ಜಿಲ್ಲಾಡಳಿತಗಳೊಂದಿಗೆ ಈ ಸಂಬಂಧದಲ್ಲಿ ಸಂಪರ್ಕದಲ್ಲಿದ್ದೇನೆ. ಹಲವಾರು ಬಾರಿ ಅವರೊಂದಿಗೆ ಸಭೆ ನಡೆಸಿದ್ದೇನೆ. ಕೊರೊನಾ ಮೊದಲು ಮತ್ತು ನಂತರದ ಸಾಮಾಜಿಕ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವ ಕುರಿತಂತೆ ಜಿಲ್ಲಾಡಳಿತಗಳು ಕೈಗೊಂಡ ಕ್ರಮಗಳು, ವಿದ್ಯಾರ್ಥಿಗಳ ಪ್ರತಿಸ್ಪಂದನೆ ಇಡೀ ದೇಶಕ್ಕೇ ಮಾದರಿಯಾಗಿದೆ’ ಎಂದು ಸಚಿವರು ತಿಳಿಸಿದರು.</p>.<p><strong>ಪೋಷಕರ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು</strong><br />* ಶಿರಸಿ ತಾಲ್ಲೂಕಿನ ದೇವನಹಳ್ಳಿಯಲ್ಲಿ ವಿದ್ಯಾರ್ಥಿಯೊಬ್ಬನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದರೂ, ಆತ ಶಿರಸಿಯ ಮಾರಿಕಾಂಬ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ.</p>.<p>* ಕಾರವಾರ ನಗರದ ಹಿಂದೂ ಪ್ರೌಢಶಾಲೆ ವಿದ್ಯಾರ್ಥಿ ನಿತಿನ್ ಕಾರವಾರ ತಂದೆ ಇತ್ತೀಚಿಗೆ ನಿಧನರಾಗಿದ್ದು, ಸೋಮವಾರ ತಂದೆಯವರ ಉತ್ತರಕ್ರಿಯೆ ಇತ್ತು. ಅದನ್ನು ಬೇಗ ಮುಗಿಸಿ ಪರೀಕ್ಷೆ ಬರೆದ ವಿದ್ಯಾರ್ಥಿ.</p>.<p>* ಶಿರಸಿ ತಾಲ್ಲೂಕಿನ ದನಗನಹಳ್ಳಿಯ ವಿದ್ಯಾರ್ಥಿನಿಯ ಪೋಷಕರು ಕೋವಿಡ್ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಪರೀಕ್ಷೆಗೆ ಕಳುಹಿಸಲು ಹಿಂದೇಟು ಹಾಕಿದ್ದರು. ಮನವೊಲಿಸಿ ವಿಜ್ಞಾನ ಪರೀಕ್ಷೆ ಬರೆಸಿದ್ದು, ಎರಡು ಪರೀಕ್ಷೆಗಳು ತಪ್ಪಿ ಹೋದುದಕ್ಕೆ ಈಗ ಪಶ್ಚಾತ್ತಾಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>