‘ಬಲಿಜ ಸಮುದಾಯಕ್ಕೆ ಸೇರಿರುವ 40 ಲಕ್ಷಕ್ಕೂ ಹೆಚ್ಚು ಜನ ರಾಜ್ಯದಲ್ಲಿದ್ದಾರೆ. ಕೃಷಿ, ಕೂಲಿ, ಹೈನುಗಾರಿಕೆ, ಬಳೆ, ಹೂವು ಹಾಗೂ ದ್ರವ್ಯಗಳ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕ, ಸಾಮಾಜಿಕವಾಗಿ ಸಾಕಷ್ಟು ಹಿಂದುಳಿದಿದ್ದಾರೆ. ಉದ್ಯೋಗ, ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲಿ 2ಎ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು. ‘ಬೇಡಿಕೆ ಈಡೇರಿಸದಿದ್ದರೆ ಜ.16ರಿಂದ ಅನಿರ್ದಿಷ್ಟಾ ವಧಿ ಪ್ರತಿಭಟನೆ ನಡೆಸಲಾಗುವುದು’ ಎಂದರು.