<p>ಮಾನ್ವಿ (ರಾಯಚೂರು ಜಿಲ್ಲೆ): ಪಟ್ಟಣದ ಪ್ರಾರ್ಥನಾ ದತ್ತಿ ಸಂಸ್ಥೆಯ 2022ನೇ ಸಾಲಿನ ರಾಜ್ಯಮಟ್ಟದ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ ಚಿದಾನಂದ ಸಾಲಿ, ಕವಿಗಳಾದ ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣವರ ಆಯ್ಕೆಯಾಗಿದ್ದಾರೆ.</p>.<p>ಅತ್ಯುತ್ತಮ ಕಥಾ ಸಂಕಲನ ಪ್ರಶಸ್ತಿಗೆ ಚಿದಾನಂದ ಸಾಲಿ ಅವರ ‘ಹೊಗೆಯ ಹೊಳೆಯಿದು ತಿಳಿಯದು’ ಕೃತಿ, ಅತ್ಯುತ್ತಮ ಕವನ ಸಂಕಲನ ಪ್ರಶಸ್ತಿಗೆ ಚೈತ್ರಾ ಶಿವಯೋಗಿಮಠ ಅವರ ‘ಪೆಟ್ರಿಕೋರ್’ ಮತ್ತು ಸಿದ್ದು ಸತ್ಯಣ್ಣನವರ ಅವರ ‘ಗಾಳಿಯ ಮಡಿಲು’ ಕೃತಿಗಳು ಆಯ್ಕೆಯಾಗಿದೆ.</p>.<p>ಕಥಾ ವಿಭಾಗದಲ್ಲಿ ಸಾಹಿತಿ ಜಿ.ಪಿ.ಬಸವರಾಜು, ಕತೆಗಾರ ಟಿ.ಎಸ್.ಗೊರವರ ಹಾಗೂ ಕಾವ್ಯ ವಿಭಾಗದಲ್ಲಿ ಸಾಹಿತಿಗಳಾದ ವಿಕ್ರಮ್ ವಿಸಾಜಿ ಹಾಗೂ ಸಬಿತಾ ಬನ್ನಾಡಿ ತೀರ್ಪುಗಾರರಾಗಿದ್ದರು.</p>.<p>‘ಮಾರ್ಚ್ ತಿಂಗಳಲ್ಲಿ ಮಾನ್ವಿಯಲ್ಲಿ ಪ್ರಶಸ್ತಿ ಪ್ರದಾನ ಸಮಾಂಭ ನಡೆಯಲಿದೆ. ಸಾಲಿ ಅವರಿಗೆ ₹10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ, ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣನವರ ಅವರಿಗೆ ತಲಾ ₹5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಯಂಕನಗೌಡ ಬೊಮ್ಮನಹಾಳ<br />ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ (ರಾಯಚೂರು ಜಿಲ್ಲೆ): ಪಟ್ಟಣದ ಪ್ರಾರ್ಥನಾ ದತ್ತಿ ಸಂಸ್ಥೆಯ 2022ನೇ ಸಾಲಿನ ರಾಜ್ಯಮಟ್ಟದ ಸಾಹಿತ್ಯ ಪುರಸ್ಕಾರಕ್ಕೆ ಸಾಹಿತಿ ಚಿದಾನಂದ ಸಾಲಿ, ಕವಿಗಳಾದ ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣವರ ಆಯ್ಕೆಯಾಗಿದ್ದಾರೆ.</p>.<p>ಅತ್ಯುತ್ತಮ ಕಥಾ ಸಂಕಲನ ಪ್ರಶಸ್ತಿಗೆ ಚಿದಾನಂದ ಸಾಲಿ ಅವರ ‘ಹೊಗೆಯ ಹೊಳೆಯಿದು ತಿಳಿಯದು’ ಕೃತಿ, ಅತ್ಯುತ್ತಮ ಕವನ ಸಂಕಲನ ಪ್ರಶಸ್ತಿಗೆ ಚೈತ್ರಾ ಶಿವಯೋಗಿಮಠ ಅವರ ‘ಪೆಟ್ರಿಕೋರ್’ ಮತ್ತು ಸಿದ್ದು ಸತ್ಯಣ್ಣನವರ ಅವರ ‘ಗಾಳಿಯ ಮಡಿಲು’ ಕೃತಿಗಳು ಆಯ್ಕೆಯಾಗಿದೆ.</p>.<p>ಕಥಾ ವಿಭಾಗದಲ್ಲಿ ಸಾಹಿತಿ ಜಿ.ಪಿ.ಬಸವರಾಜು, ಕತೆಗಾರ ಟಿ.ಎಸ್.ಗೊರವರ ಹಾಗೂ ಕಾವ್ಯ ವಿಭಾಗದಲ್ಲಿ ಸಾಹಿತಿಗಳಾದ ವಿಕ್ರಮ್ ವಿಸಾಜಿ ಹಾಗೂ ಸಬಿತಾ ಬನ್ನಾಡಿ ತೀರ್ಪುಗಾರರಾಗಿದ್ದರು.</p>.<p>‘ಮಾರ್ಚ್ ತಿಂಗಳಲ್ಲಿ ಮಾನ್ವಿಯಲ್ಲಿ ಪ್ರಶಸ್ತಿ ಪ್ರದಾನ ಸಮಾಂಭ ನಡೆಯಲಿದೆ. ಸಾಲಿ ಅವರಿಗೆ ₹10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ, ಚೈತ್ರಾ ಶಿವಯೋಗಿಮಠ ಹಾಗೂ ಸಿದ್ದು ಸತ್ಯಣ್ಣನವರ ಅವರಿಗೆ ತಲಾ ₹5 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಯಂಕನಗೌಡ ಬೊಮ್ಮನಹಾಳ<br />ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>