<p><strong>ಮೈಸೂರು</strong>: ಸಂಜೆ ಐದಾದರೂ ಮಂಜು ಮುಸುಕಿದ ಚಳಿಯ ವಾತಾವರಣ ಹೊರಗಿದ್ದರೆ; ಜಾಗತಿಕ ತಾಪಮಾನ ಏರಿಕೆ, ಸಾವಯವ ಕೃಷಿ ಚರ್ಚೆಯ ಕಾವು ಒಳಗೆ. ಜೊತೆಗೆ ದೇಸಿ ಬೀಜ ಸಂರಕ್ಷಕರ ಜಾತ್ರೆ, ವಿವಿಧ ರಾಜ್ಯಗಳ ವೈವಿಧ್ಯಮಯ ಭೋಜನದ ಸವಿ!</p>.<p>–ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಗರಿ ಬಿಚ್ಚಿದ 5ನೇ ಆವೃತ್ತಿಯ ‘ಕಿಸಾನ್ ಸ್ವರಾಜ್ ಸಮ್ಮೇಳನ’ದಲ್ಲಿ ಕಂಡ ಗ್ರಾಮ್ಯ ಭಾರತದ ವೈವಿಧ್ಯಮಯ ಚಿತ್ರಣವಿದು.</p>.<p>‘ಆಶಾ (ಅಲಯನ್ಸ್ ಫಾರ್ ಸಸ್ಟೈನಬಲ್ ಆ್ಯಂಡ್ ಹೋಲಿಸ್ಟಿಕ್ ಅಗ್ರಿಕಲ್ಚರ್) ಕಿಸಾನ್ ಸ್ವರಾಜ್’ ಸಂಸ್ಥೆ ಆಯೋಜಿಸಿದ್ದ ಸಮ್ಮೇಳನಕ್ಕೆ ಕೋಲಾರದ ಬೀಜ ಸಂರಕ್ಷಕಿ ಪಾಪಮ್ಮ ಚಾಲನೆ ನೀಡಿದರು. ಕೇರಳದ ಕೃಷಿ ಸಚಿವ ಪಿ.ಪ್ರಸಾದ್, ‘ಆಶಾ’ ರಾಷ್ಟ್ರೀಯ ಸಂಚಾಲಕ ಕಪಿಲ್ ಶಾ, ಮಾನವಶಾಸ್ತ್ರಜ್ಞೆ ಡಾ.ಎ.ಆರ್.ವಾಸವಿ ಸಾಕ್ಷಿಯಾದರು.</p>.<p>‘ಜನರ ಬಾಯಿಗ್ ಸುಣ್ಣ ಹಾಕಬ್ಯಾಡ್ರಿ’: ಉತ್ಸವ ಉದ್ಘಾಟಿಸಿ ಮಾತನಾಡಿದಪಾಪಮ್ಮ, ‘ಭೂಮಿಗೆ ರಾಸಾಯನಿಕ ಗೊಬ್ಬರ ಹಾಕಿ ಜನರ ಬಾಯಿಗ್ ಸುಣ್ಣ ಹಾಕಬ್ಯಾಡ್ರಿ. ಬದುಕ ಬರಡು ಮಾಡಬ್ಯಾಡ್ರಿ’ ಎಂದು ಕೈ ಮುಗಿದು ಮನವಿ ಮಾಡಿದರು.</p>.<p>‘35 ವರ್ಷದಿಂದ ಸಾವಯವ ಕೃಷಿ ಮಾಡುತ್ತಿದ್ದೇನೆ. 50 ಜಾತಿಯ ಬೀಜಗಳನ್ನು ಉಳಿಸಿದ್ದೇನೆ. ನೀವೂ ಉಳಿಸಿ. ನಮ್ಮ ಮಕ್ಕಳನ್ನ ಬೆಳೆಸೋದು ಅದೇನೆ’ ಎಂದರು.</p>.<p>ಕೇರಳದ ಸಚಿವ ಪ್ರಸಾದ್ ಮಾತನಾಡಿ, ‘ಜಾಗತಿಕ ತಾಪಮಾನ ಏರಿಕೆಯಲ್ಲಿ ಕೃಷಿ ವಲಯದ ಕಾಣಿಕೆಯಿದೆ. ಪರಿಸರ ಕೇಂದ್ರಿತ ಕೃಷಿ ಮರೆಯಾಗಿದೆ. ಹೀಗಾಗಿ ನಮ್ಮ ಸರ್ಕಾರವು ‘ಸಾವಯವ ಕೃಷಿ ಮಿಷನ್– 2022’ ಯೋಜನೆ ಜಾರಿಗೊಳಿಸಿದೆ. ಕುಲಾಂತರಿ ಬೀಜಕ್ಕೆ ಬೆಂಬಲವಿಲ್ಲ’ ಎಂದರು.</p>.<p>ಮಾನವಶಾಸ್ತ್ರಜ್ಞೆ ಡಾ.ಎ.ಆರ್.ವಾಸವಿ, ‘ಎಲ್ಲ ದೇಶಗಳ ಆಹಾರ ಭದ್ರತೆಗೆ ಜಾಗತಿಕ ತಾಪಮಾನ ಏರಿಕೆ ಸವಾಲನ್ನು ಒಡ್ಡಿದೆ. ಕೃಷಿ ವೈವಿಧ್ಯ ಉಳಿಸಿಕೊಳ್ಳುವುದೇ ನಮ್ಮ ಮುಂದಿರುವ ಆಯ್ಕೆ’ ಎಂದರು.</p>.<p>ಆಶಾ ಸಂಸ್ಥೆಯ ರಾಷ್ಟ್ರೀಯ ಸಂಚಾಲಕ ಕಪಿಲ್ ಶಾ ಮಾತನಾಡಿ, ‘1980ಕ್ಕೂ ಮುಂಚೆಯೇ ಸಾವಯವ ಕೃಷಿ ಪದ್ಧತಿ ಕರ್ನಾಟಕದಲ್ಲಿ<br />ಪ್ರವರ್ಧಮಾನಕ್ಕೆ ಬಂದಿತು. ದೇಶಕ್ಕೆ ಸಾವಯವ ಪಾಠಗಳನ್ನು ಹೇಳಿಕೊಟ್ಟಿದೆ. ಸಾವಯವ ಕೃಷಿನೀತಿಯನ್ನು ಮೊದಲು ಜಾರಿಗೊಳಿಸಿದೆ’ ಎಂದರು.</p>.<p>ಪರಿಸರ ತಜ್ಞ ಯು.ಎನ್.ರವಿಕುಮಾರ್, ಕೆಎಸ್ಒಯು ಪ್ರಭಾರ ಕುಲಪತಿ ಖಾದರ್ ಪಾಷಾ, ಕೃಷ್ಣಪ್ರಸಾದ್, ನಿವೃತ್ತ ಮೇಜರ್ ಜನರಲ್ ಎಸ್.ಜಿ.ಒಂಬತ್ಕೆರೆ,ನಚಿಕೇತ್ ಉಡುಪ ಇದ್ದರು.</p>.<p>23 ರಾಜ್ಯಗಳಿಂದ 2,200ಕ್ಕೂ ಹೆಚ್ಚು ಸಾವಯವ ಕೃಷಿಕರು ಭಾಗವಹಿಸಿರುವ ಸಮ್ಮೇಳನದಲ್ಲಿ ಬೀಜ ಉತ್ಸವ, ಸಾಕ್ಷ್ಯಚಿತ್ರ ಪ್ರದರ್ಶನ, ಕೃಷಿಗೋಷ್ಠಿ, 500ಕ್ಕೂ ಹೆಚ್ಚು ತಳಿಯ ಬಾಳೆ ಮೇಳ, ಗೆಡ್ಡೆಗೆಣಸು ಮೇಳ ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸಂಜೆ ಐದಾದರೂ ಮಂಜು ಮುಸುಕಿದ ಚಳಿಯ ವಾತಾವರಣ ಹೊರಗಿದ್ದರೆ; ಜಾಗತಿಕ ತಾಪಮಾನ ಏರಿಕೆ, ಸಾವಯವ ಕೃಷಿ ಚರ್ಚೆಯ ಕಾವು ಒಳಗೆ. ಜೊತೆಗೆ ದೇಸಿ ಬೀಜ ಸಂರಕ್ಷಕರ ಜಾತ್ರೆ, ವಿವಿಧ ರಾಜ್ಯಗಳ ವೈವಿಧ್ಯಮಯ ಭೋಜನದ ಸವಿ!</p>.<p>–ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಗರಿ ಬಿಚ್ಚಿದ 5ನೇ ಆವೃತ್ತಿಯ ‘ಕಿಸಾನ್ ಸ್ವರಾಜ್ ಸಮ್ಮೇಳನ’ದಲ್ಲಿ ಕಂಡ ಗ್ರಾಮ್ಯ ಭಾರತದ ವೈವಿಧ್ಯಮಯ ಚಿತ್ರಣವಿದು.</p>.<p>‘ಆಶಾ (ಅಲಯನ್ಸ್ ಫಾರ್ ಸಸ್ಟೈನಬಲ್ ಆ್ಯಂಡ್ ಹೋಲಿಸ್ಟಿಕ್ ಅಗ್ರಿಕಲ್ಚರ್) ಕಿಸಾನ್ ಸ್ವರಾಜ್’ ಸಂಸ್ಥೆ ಆಯೋಜಿಸಿದ್ದ ಸಮ್ಮೇಳನಕ್ಕೆ ಕೋಲಾರದ ಬೀಜ ಸಂರಕ್ಷಕಿ ಪಾಪಮ್ಮ ಚಾಲನೆ ನೀಡಿದರು. ಕೇರಳದ ಕೃಷಿ ಸಚಿವ ಪಿ.ಪ್ರಸಾದ್, ‘ಆಶಾ’ ರಾಷ್ಟ್ರೀಯ ಸಂಚಾಲಕ ಕಪಿಲ್ ಶಾ, ಮಾನವಶಾಸ್ತ್ರಜ್ಞೆ ಡಾ.ಎ.ಆರ್.ವಾಸವಿ ಸಾಕ್ಷಿಯಾದರು.</p>.<p>‘ಜನರ ಬಾಯಿಗ್ ಸುಣ್ಣ ಹಾಕಬ್ಯಾಡ್ರಿ’: ಉತ್ಸವ ಉದ್ಘಾಟಿಸಿ ಮಾತನಾಡಿದಪಾಪಮ್ಮ, ‘ಭೂಮಿಗೆ ರಾಸಾಯನಿಕ ಗೊಬ್ಬರ ಹಾಕಿ ಜನರ ಬಾಯಿಗ್ ಸುಣ್ಣ ಹಾಕಬ್ಯಾಡ್ರಿ. ಬದುಕ ಬರಡು ಮಾಡಬ್ಯಾಡ್ರಿ’ ಎಂದು ಕೈ ಮುಗಿದು ಮನವಿ ಮಾಡಿದರು.</p>.<p>‘35 ವರ್ಷದಿಂದ ಸಾವಯವ ಕೃಷಿ ಮಾಡುತ್ತಿದ್ದೇನೆ. 50 ಜಾತಿಯ ಬೀಜಗಳನ್ನು ಉಳಿಸಿದ್ದೇನೆ. ನೀವೂ ಉಳಿಸಿ. ನಮ್ಮ ಮಕ್ಕಳನ್ನ ಬೆಳೆಸೋದು ಅದೇನೆ’ ಎಂದರು.</p>.<p>ಕೇರಳದ ಸಚಿವ ಪ್ರಸಾದ್ ಮಾತನಾಡಿ, ‘ಜಾಗತಿಕ ತಾಪಮಾನ ಏರಿಕೆಯಲ್ಲಿ ಕೃಷಿ ವಲಯದ ಕಾಣಿಕೆಯಿದೆ. ಪರಿಸರ ಕೇಂದ್ರಿತ ಕೃಷಿ ಮರೆಯಾಗಿದೆ. ಹೀಗಾಗಿ ನಮ್ಮ ಸರ್ಕಾರವು ‘ಸಾವಯವ ಕೃಷಿ ಮಿಷನ್– 2022’ ಯೋಜನೆ ಜಾರಿಗೊಳಿಸಿದೆ. ಕುಲಾಂತರಿ ಬೀಜಕ್ಕೆ ಬೆಂಬಲವಿಲ್ಲ’ ಎಂದರು.</p>.<p>ಮಾನವಶಾಸ್ತ್ರಜ್ಞೆ ಡಾ.ಎ.ಆರ್.ವಾಸವಿ, ‘ಎಲ್ಲ ದೇಶಗಳ ಆಹಾರ ಭದ್ರತೆಗೆ ಜಾಗತಿಕ ತಾಪಮಾನ ಏರಿಕೆ ಸವಾಲನ್ನು ಒಡ್ಡಿದೆ. ಕೃಷಿ ವೈವಿಧ್ಯ ಉಳಿಸಿಕೊಳ್ಳುವುದೇ ನಮ್ಮ ಮುಂದಿರುವ ಆಯ್ಕೆ’ ಎಂದರು.</p>.<p>ಆಶಾ ಸಂಸ್ಥೆಯ ರಾಷ್ಟ್ರೀಯ ಸಂಚಾಲಕ ಕಪಿಲ್ ಶಾ ಮಾತನಾಡಿ, ‘1980ಕ್ಕೂ ಮುಂಚೆಯೇ ಸಾವಯವ ಕೃಷಿ ಪದ್ಧತಿ ಕರ್ನಾಟಕದಲ್ಲಿ<br />ಪ್ರವರ್ಧಮಾನಕ್ಕೆ ಬಂದಿತು. ದೇಶಕ್ಕೆ ಸಾವಯವ ಪಾಠಗಳನ್ನು ಹೇಳಿಕೊಟ್ಟಿದೆ. ಸಾವಯವ ಕೃಷಿನೀತಿಯನ್ನು ಮೊದಲು ಜಾರಿಗೊಳಿಸಿದೆ’ ಎಂದರು.</p>.<p>ಪರಿಸರ ತಜ್ಞ ಯು.ಎನ್.ರವಿಕುಮಾರ್, ಕೆಎಸ್ಒಯು ಪ್ರಭಾರ ಕುಲಪತಿ ಖಾದರ್ ಪಾಷಾ, ಕೃಷ್ಣಪ್ರಸಾದ್, ನಿವೃತ್ತ ಮೇಜರ್ ಜನರಲ್ ಎಸ್.ಜಿ.ಒಂಬತ್ಕೆರೆ,ನಚಿಕೇತ್ ಉಡುಪ ಇದ್ದರು.</p>.<p>23 ರಾಜ್ಯಗಳಿಂದ 2,200ಕ್ಕೂ ಹೆಚ್ಚು ಸಾವಯವ ಕೃಷಿಕರು ಭಾಗವಹಿಸಿರುವ ಸಮ್ಮೇಳನದಲ್ಲಿ ಬೀಜ ಉತ್ಸವ, ಸಾಕ್ಷ್ಯಚಿತ್ರ ಪ್ರದರ್ಶನ, ಕೃಷಿಗೋಷ್ಠಿ, 500ಕ್ಕೂ ಹೆಚ್ಚು ತಳಿಯ ಬಾಳೆ ಮೇಳ, ಗೆಡ್ಡೆಗೆಣಸು ಮೇಳ ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>