<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಸಿಗದಂತೆ ಏರುಗತಿ ಕಂಡಿರುವ ಬೆನ್ನಲ್ಲೇ, ಪರಿಸ್ಥಿತಿಯನ್ನು ಹದ್ದುಬಸ್ತಿಗೆ ತರಲು ಮುಂದಾಗಿರುವ ಸರ್ಕಾರ ಮೇ 10 ರಿಂದ ಮೇ 24 ರವರೆಗೆ ರಾಜ್ಯದಾದ್ಯಂತ ಲಾಕ್ಡೌನ್ ಘೋಷಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದರು.</p>.<p>ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಸಾರ್ವಜನಿಕರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ಮೇ 10 ರ ಬೆಳಿಗ್ಗೆ 6 ಗಂಟೆಯಿಂದ ಮೇ 24 ರ ಬೆಳಿಗ್ಗೆ 6 ರವರೆಗೆ ಲಾಕ್ಡೌನ್ ಘೋಷಿಸಲಾಗಿದೆ’ ಎಂದರು. ‘ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ಪದಾರ್ಥಗಳನ್ನು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾರಾಟ ಮಾಡಲು ಅವಕಾಶವಿದೆ. ಬೆಳಿಗ್ಗೆ 10 ಗಂಟೆಯ ಬಳಿಕ ಓಡಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆದ್ದರಿಂದ ತಮ್ಮ ಮನೆಗಳ ಮುಂದೆ<br />ಯೇ ಹಣ್ಣು–ತರಕಾರಿಗಳನ್ನು ಖರೀದಿಸಬಹುದು. ಆಸ್ಪತ್ರೆಗೆ ಮತ್ತು ಚಿಕಿತ್ಸೆಗೆ ಹೋಗುವವರನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವುದಿಲ್ಲ’ ಎಂದು ಯಡಿಯೂರಪ್ಪ ಹೇಳಿದರು.</p>.<p>‘ಕಟ್ಟಡ ನಿರ್ಮಾಣ, ರಸ್ತೆ ಕಾಮಗಾರಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಅದಕ್ಕಾಗಿ ನಿರ್ಬಂಧಿತ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಆದ ಕಾರಣ ಕಾರ್ಮಿಕರು ಯಾರೂ ಹಳ್ಳಿಗಳಿಗೆ ಹೋಗಬಾರದು’ ಎಂದು ಮನವಿ ಮಾಡಿದರು.</p>.<p><strong>ಯಾವುದಕ್ಕೆಲ್ಲ ಅವಕಾಶ</strong></p>.<p>* ಆಹಾರ, ಹಣ್ಣು–ತರಕಾರಿ, ದಿನಸಿ, ಮೀನು– ಮಾಂಸ, ಪ್ರಾಣಿಗಳ ಆಹಾರಗಳನ್ನು (ಬೆಳಿಗ್ಗೆ 6 ರಿಂದ 10 ವರೆಗೆ ಮಾತ್ರ ಮಾರಾಟ ಮಾಡುವುದು), ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶವಿದೆ. 24x7 ಎಲ್ಲ ಬಗೆಯ ಹೋಂ ಡೆಲಿವರಿಗೆ ಅವಕಾಶ</p>.<p>*ಬೆಳಿಗ್ಗೆ 6 ರಿಂದ 10 ರವರೆಗೆ ಮದ್ಯದಂಗಡಿಯಿಂದ ಪಾರ್ಸೆಲ್ ಒಯ್ಯಬಹುದು.</p>.<p>*ತಳ್ಳುವ ಗಾಡಿಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ಹಣ್ಣು ತರಕಾರಿ ಮಾರಬಹುದು</p>.<p>* ಹಾಲಿನ ಬೂತ್ಗಳು ಮತ್ತು ಹಾಪ್ಕಾಮ್ಸ್ಗಳು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ತೆರೆಯಬಹುದು.</p>.<p>*ಆಹಾರ ಸಂಸ್ಕರಣಾ ಘಟಕಗಳು, ಬ್ಯಾಂಕ್, ವಿಮಾ ಕಚೇರಿಗಳು, ಎಟಿಎಂಗಳು, ದೂರಸಂಪರ್ಕ, ಇಂಟರ್ನೆಟ್ ಸೇವೆ</p>.<p>*ಇ–ಕಾರ್ಮಸ್ನವರು ಮನೆಗಳಿಗೆ ವಸ್ತುಗಳನ್ನು ತಲುಪಿಸಲು ಅವಕಾಶ</p>.<p>* ಕೋಲ್ಡ್ ಸ್ಟೋರೇಜ್, ಗೋದಾಮು ಸೇವೆಗಳು</p>.<p>* ವಿಮಾನ ಸಂಚಾರ ಮತ್ತು ರೈಲಿನ ಕಾರ್ಯಾಚರಣೆ ಇದೆ. ಇದರ ಮೂಲಕ ಬಂದವರು ಟಿಕೆಟ್ ತೋರಿಸಿ, ತಮ್ಮ ಮನೆಗಳಿಗೆ ತಾವೇ ಮಾಡಿಕೊಂಡ ಖಾಸಗಿ ವಾಹನ, ಆಟೋ, ಕ್ಯಾಬ್ ಮೂಲಕ ಹೋಗಬಹುದು</p>.<p>* ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳು, ಸಾರ್ವಜನಿಕ ಮತ್ತು ಖಾಸಗಿ ರಂಗದ ಉದ್ಯಮಗಳು ಕೋವಿಡ್ ಮಾರ್ಗಸೂಚಿ ಅನುಸರಿಸಿ ಕಾರ್ಯನಿರ್ವಹಿಸಬಹುದು.</p>.<p>* ಕೋವಿಡ್ ನಿಯಮ ಪಾಲಿಸಿ ನಿರ್ಮಾಣ ಕಾಮಗಾರಿಗಳನ್ನು ನಡೆಸಬಹುದು. ಕಾರ್ಮಿಕರಿಗೆ ವಾಸ್ತವ್ಯಕ್ಕೆ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಬಹುದು.</p>.<p>* ಮದುವೆಗಳಿಗೆ ಅವಕಾಶ ಇದ್ದು, 50 ಜನ ಮೀರುವಂತಿಲ್ಲ.</p>.<p>* ಅಂತ್ಯಕ್ರಿಯೆಗೆ 5 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ</p>.<p>* ಆಸ್ಪತ್ರೆಗಳು, ಆಯುಷ್ ಮತ್ತು ವೆಟರ್ನರಿ ಆಸ್ಪತ್ರೆಗಳು, ಕ್ಲಿನಿಕ್ಗಳು, ಔಷಧದ ಅಂಗಡಿಗಳು, ಲ್ಯಾಬ್ಗಳು, ಜನೌಷಧಿ ಕೇಂದ್ರಗಳು, ರಕ್ತ ನಿಧಿಗಳು</p>.<p>* ಕೃಷಿ ಚಟುವಟಿಕೆಗಳು</p>.<p>* ಅಂಗವಿಕಲರು, ಬುದ್ಧಿಮಾಂದ್ಯರು, ಹಿರಿಯ ನಾಗರಿಕರ ಆರೈಕೆ ವ್ಯವಸ್ಥೆ</p>.<p><strong>ಏನೆಲ್ಲ ಇರುವುದಿಲ್ಲ</strong></p>.<p>* ಮೆಟ್ರೊ ಸೇವೆ</p>.<p>* ತುರ್ತು ಸಂದರ್ಭ ಹೊರತುಪಡಿಸಿ ಟ್ಯಾಕ್ಸಿ, ಕ್ಯಾಬ್, ಆಟೋಗಳಿಗೆ ಹಾಗೂ ನಾಗರಿಕರ ಓಡಾಟ</p>.<p>* ಶಾಲಾ–ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಸೆಂಟರ್ಗಳು ನಡೆಯುವಂತಿಲ್ಲ. ಆನ್ಲೈನ್ ತರಗತಿಗಳಿಗಷ್ಟೇ ಅವಕಾಶ</p>.<p>* ಹೊಟೇಲ್, ರೆಸ್ಟೋರೆಂಟ್ ಮತ್ತು ಆತಿಥ್ಯ ಸೇವೆಗಳು. (ಹೊಟೇಲ್ ಮತ್ತು ರೆಸ್ಟೋರೆಂಟ್ಗಳಿಂದ ಪಾರ್ಸೆಲ್ ಒಯ್ಯಬಹುದು)</p>.<p>* ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಕ್ರೀಡಾ ಕಾಂಪ್ಲೆಕ್ಸ್, ಈಜುಕೊಳ</p>.<p>* ಸಾಮಾಜಿಕ, ರಾಜಕೀಯ, ಧಾರ್ಮಿಕ, ಮನರಂಜನೆಗಾಗಿ ಜನರನ್ನು ಸೇರಿಸುವುದು ನಿಷೇಧ.</p>.<p>ಕಾರ್ಯ ನಿರ್ವಹಿಸುವ ಸರ್ಕಾರಿ ಕಚೇರಿಗಳು:</p>.<p>* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಹೋಮ್ ಗಾರ್ಡ್, ಅಗ್ನಿಶಾಮಕ,ಕಂದಾಯ ವಿದ್ಯುತ್, ನೀರು, ನೈರ್ಮಲ್ಯ</p>.<p>* ಬಿಬಿಎಂಪಿ, ಎಲ್ಲ ನಗರ ಸ್ಥಳೀಯ ಸಂಸ್ಥೆಗಳು.</p>.<p><strong>ಕಟ್ಟುನಿಟ್ಟಿನ ಕ್ರಮಗಳೇನು?</strong></p>.<p>* ಸಾರ್ವಜನಿಕರು ರಸ್ತೆಗೆ ಬರುವಂತಿಲ್ಲ</p>.<p>* ಖಾಸಗಿ ಮತ್ತು ಸರ್ಕಾರಿ ಬಸ್ಗಳು, ವಾಹನಗಳು ಸಂಚಾರ ಇಲ್ಲ.</p>.<p>*ಅಂತರ ಜಿಲ್ಲೆ ಮತ್ತು ಅಂತರ ರಾಜ್ಯಗಳ ವಾಹನ ಸಂಚಾರವಿಲ್ಲ. ತುರ್ತು ಸಂದರ್ಭದಲ್ಲಿ ಮಾತ್ರ ಅವಕಾಶ ನೀಡಲಾಗುವುದು.</p>.<p>* ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಹೈಕೋರ್ಟ್ ನ್ಯಾಯಮೂರ್ತಿಗಳು, ಅಧಿಕಾರಿಗಳು ಸಿಬ್ಬಂದಿ ಗುರುತಿನ ಚೀಟಿ ಇಟ್ಟುಕೊಂಡರೆ ಮಾತ್ರ ಸಂಚಾರಕ್ಕೆ ಅವಕಾಶ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಸಿಗದಂತೆ ಏರುಗತಿ ಕಂಡಿರುವ ಬೆನ್ನಲ್ಲೇ, ಪರಿಸ್ಥಿತಿಯನ್ನು ಹದ್ದುಬಸ್ತಿಗೆ ತರಲು ಮುಂದಾಗಿರುವ ಸರ್ಕಾರ ಮೇ 10 ರಿಂದ ಮೇ 24 ರವರೆಗೆ ರಾಜ್ಯದಾದ್ಯಂತ ಲಾಕ್ಡೌನ್ ಘೋಷಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದರು.</p>.<p>ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಕರ್ಫ್ಯೂ ವಿಧಿಸಿರುವುದು ಹೆಚ್ಚಿನ ಪರಿಣಾಮ ಬೀರಿಲ್ಲ. ಸಾರ್ವಜನಿಕರು ನಿಯಮ ಉಲ್ಲಂಘಿಸಿ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ಮೇ 10 ರ ಬೆಳಿಗ್ಗೆ 6 ಗಂಟೆಯಿಂದ ಮೇ 24 ರ ಬೆಳಿಗ್ಗೆ 6 ರವರೆಗೆ ಲಾಕ್ಡೌನ್ ಘೋಷಿಸಲಾಗಿದೆ’ ಎಂದರು. ‘ಹಾಲು, ಹಣ್ಣು, ತರಕಾರಿ, ಮಾಂಸ, ದಿನಸಿ ಪದಾರ್ಥಗಳನ್ನು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾರಾಟ ಮಾಡಲು ಅವಕಾಶವಿದೆ. ಬೆಳಿಗ್ಗೆ 10 ಗಂಟೆಯ ಬಳಿಕ ಓಡಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>‘ತಳ್ಳುಗಾಡಿಗಳಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆದ್ದರಿಂದ ತಮ್ಮ ಮನೆಗಳ ಮುಂದೆ<br />ಯೇ ಹಣ್ಣು–ತರಕಾರಿಗಳನ್ನು ಖರೀದಿಸಬಹುದು. ಆಸ್ಪತ್ರೆಗೆ ಮತ್ತು ಚಿಕಿತ್ಸೆಗೆ ಹೋಗುವವರನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವುದಿಲ್ಲ’ ಎಂದು ಯಡಿಯೂರಪ್ಪ ಹೇಳಿದರು.</p>.<p>‘ಕಟ್ಟಡ ನಿರ್ಮಾಣ, ರಸ್ತೆ ಕಾಮಗಾರಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಅದಕ್ಕಾಗಿ ನಿರ್ಬಂಧಿತ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಆದ ಕಾರಣ ಕಾರ್ಮಿಕರು ಯಾರೂ ಹಳ್ಳಿಗಳಿಗೆ ಹೋಗಬಾರದು’ ಎಂದು ಮನವಿ ಮಾಡಿದರು.</p>.<p><strong>ಯಾವುದಕ್ಕೆಲ್ಲ ಅವಕಾಶ</strong></p>.<p>* ಆಹಾರ, ಹಣ್ಣು–ತರಕಾರಿ, ದಿನಸಿ, ಮೀನು– ಮಾಂಸ, ಪ್ರಾಣಿಗಳ ಆಹಾರಗಳನ್ನು (ಬೆಳಿಗ್ಗೆ 6 ರಿಂದ 10 ವರೆಗೆ ಮಾತ್ರ ಮಾರಾಟ ಮಾಡುವುದು), ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶವಿದೆ. 24x7 ಎಲ್ಲ ಬಗೆಯ ಹೋಂ ಡೆಲಿವರಿಗೆ ಅವಕಾಶ</p>.<p>*ಬೆಳಿಗ್ಗೆ 6 ರಿಂದ 10 ರವರೆಗೆ ಮದ್ಯದಂಗಡಿಯಿಂದ ಪಾರ್ಸೆಲ್ ಒಯ್ಯಬಹುದು.</p>.<p>*ತಳ್ಳುವ ಗಾಡಿಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 6 ರವರೆಗೆ ಹಣ್ಣು ತರಕಾರಿ ಮಾರಬಹುದು</p>.<p>* ಹಾಲಿನ ಬೂತ್ಗಳು ಮತ್ತು ಹಾಪ್ಕಾಮ್ಸ್ಗಳು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ತೆರೆಯಬಹುದು.</p>.<p>*ಆಹಾರ ಸಂಸ್ಕರಣಾ ಘಟಕಗಳು, ಬ್ಯಾಂಕ್, ವಿಮಾ ಕಚೇರಿಗಳು, ಎಟಿಎಂಗಳು, ದೂರಸಂಪರ್ಕ, ಇಂಟರ್ನೆಟ್ ಸೇವೆ</p>.<p>*ಇ–ಕಾರ್ಮಸ್ನವರು ಮನೆಗಳಿಗೆ ವಸ್ತುಗಳನ್ನು ತಲುಪಿಸಲು ಅವಕಾಶ</p>.<p>* ಕೋಲ್ಡ್ ಸ್ಟೋರೇಜ್, ಗೋದಾಮು ಸೇವೆಗಳು</p>.<p>* ವಿಮಾನ ಸಂಚಾರ ಮತ್ತು ರೈಲಿನ ಕಾರ್ಯಾಚರಣೆ ಇದೆ. ಇದರ ಮೂಲಕ ಬಂದವರು ಟಿಕೆಟ್ ತೋರಿಸಿ, ತಮ್ಮ ಮನೆಗಳಿಗೆ ತಾವೇ ಮಾಡಿಕೊಂಡ ಖಾಸಗಿ ವಾಹನ, ಆಟೋ, ಕ್ಯಾಬ್ ಮೂಲಕ ಹೋಗಬಹುದು</p>.<p>* ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳು, ಸಾರ್ವಜನಿಕ ಮತ್ತು ಖಾಸಗಿ ರಂಗದ ಉದ್ಯಮಗಳು ಕೋವಿಡ್ ಮಾರ್ಗಸೂಚಿ ಅನುಸರಿಸಿ ಕಾರ್ಯನಿರ್ವಹಿಸಬಹುದು.</p>.<p>* ಕೋವಿಡ್ ನಿಯಮ ಪಾಲಿಸಿ ನಿರ್ಮಾಣ ಕಾಮಗಾರಿಗಳನ್ನು ನಡೆಸಬಹುದು. ಕಾರ್ಮಿಕರಿಗೆ ವಾಸ್ತವ್ಯಕ್ಕೆ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಬಹುದು.</p>.<p>* ಮದುವೆಗಳಿಗೆ ಅವಕಾಶ ಇದ್ದು, 50 ಜನ ಮೀರುವಂತಿಲ್ಲ.</p>.<p>* ಅಂತ್ಯಕ್ರಿಯೆಗೆ 5 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ</p>.<p>* ಆಸ್ಪತ್ರೆಗಳು, ಆಯುಷ್ ಮತ್ತು ವೆಟರ್ನರಿ ಆಸ್ಪತ್ರೆಗಳು, ಕ್ಲಿನಿಕ್ಗಳು, ಔಷಧದ ಅಂಗಡಿಗಳು, ಲ್ಯಾಬ್ಗಳು, ಜನೌಷಧಿ ಕೇಂದ್ರಗಳು, ರಕ್ತ ನಿಧಿಗಳು</p>.<p>* ಕೃಷಿ ಚಟುವಟಿಕೆಗಳು</p>.<p>* ಅಂಗವಿಕಲರು, ಬುದ್ಧಿಮಾಂದ್ಯರು, ಹಿರಿಯ ನಾಗರಿಕರ ಆರೈಕೆ ವ್ಯವಸ್ಥೆ</p>.<p><strong>ಏನೆಲ್ಲ ಇರುವುದಿಲ್ಲ</strong></p>.<p>* ಮೆಟ್ರೊ ಸೇವೆ</p>.<p>* ತುರ್ತು ಸಂದರ್ಭ ಹೊರತುಪಡಿಸಿ ಟ್ಯಾಕ್ಸಿ, ಕ್ಯಾಬ್, ಆಟೋಗಳಿಗೆ ಹಾಗೂ ನಾಗರಿಕರ ಓಡಾಟ</p>.<p>* ಶಾಲಾ–ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಸೆಂಟರ್ಗಳು ನಡೆಯುವಂತಿಲ್ಲ. ಆನ್ಲೈನ್ ತರಗತಿಗಳಿಗಷ್ಟೇ ಅವಕಾಶ</p>.<p>* ಹೊಟೇಲ್, ರೆಸ್ಟೋರೆಂಟ್ ಮತ್ತು ಆತಿಥ್ಯ ಸೇವೆಗಳು. (ಹೊಟೇಲ್ ಮತ್ತು ರೆಸ್ಟೋರೆಂಟ್ಗಳಿಂದ ಪಾರ್ಸೆಲ್ ಒಯ್ಯಬಹುದು)</p>.<p>* ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಕ್ರೀಡಾ ಕಾಂಪ್ಲೆಕ್ಸ್, ಈಜುಕೊಳ</p>.<p>* ಸಾಮಾಜಿಕ, ರಾಜಕೀಯ, ಧಾರ್ಮಿಕ, ಮನರಂಜನೆಗಾಗಿ ಜನರನ್ನು ಸೇರಿಸುವುದು ನಿಷೇಧ.</p>.<p>ಕಾರ್ಯ ನಿರ್ವಹಿಸುವ ಸರ್ಕಾರಿ ಕಚೇರಿಗಳು:</p>.<p>* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಹೋಮ್ ಗಾರ್ಡ್, ಅಗ್ನಿಶಾಮಕ,ಕಂದಾಯ ವಿದ್ಯುತ್, ನೀರು, ನೈರ್ಮಲ್ಯ</p>.<p>* ಬಿಬಿಎಂಪಿ, ಎಲ್ಲ ನಗರ ಸ್ಥಳೀಯ ಸಂಸ್ಥೆಗಳು.</p>.<p><strong>ಕಟ್ಟುನಿಟ್ಟಿನ ಕ್ರಮಗಳೇನು?</strong></p>.<p>* ಸಾರ್ವಜನಿಕರು ರಸ್ತೆಗೆ ಬರುವಂತಿಲ್ಲ</p>.<p>* ಖಾಸಗಿ ಮತ್ತು ಸರ್ಕಾರಿ ಬಸ್ಗಳು, ವಾಹನಗಳು ಸಂಚಾರ ಇಲ್ಲ.</p>.<p>*ಅಂತರ ಜಿಲ್ಲೆ ಮತ್ತು ಅಂತರ ರಾಜ್ಯಗಳ ವಾಹನ ಸಂಚಾರವಿಲ್ಲ. ತುರ್ತು ಸಂದರ್ಭದಲ್ಲಿ ಮಾತ್ರ ಅವಕಾಶ ನೀಡಲಾಗುವುದು.</p>.<p>* ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಹೈಕೋರ್ಟ್ ನ್ಯಾಯಮೂರ್ತಿಗಳು, ಅಧಿಕಾರಿಗಳು ಸಿಬ್ಬಂದಿ ಗುರುತಿನ ಚೀಟಿ ಇಟ್ಟುಕೊಂಡರೆ ಮಾತ್ರ ಸಂಚಾರಕ್ಕೆ ಅವಕಾಶ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>