<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆಗೆ (2000) ತಿದ್ದುಪಡಿ ತರುವ ಕುರಿತು ಪರಿಶೀಲಿಸಲು ನಿವೃತ್ತ ಐಎಎಸ್ ಅಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುತ್ತಿದೆ.</p>.<p>ವಿಶ್ರಾಂತ ಕುಲಪತಿಗಳು, ನಿವೃತ್ತ ಕುಲಸಚಿವರು, ಅಧ್ಯಾಪಕರನ್ನು ಒಳಗೊಂಡ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಕಾಯ್ದೆಯಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ, ತಿದ್ದಪಡಿ ಮಾಡಬೇಕಿರುವ ಅಂಶಗಳ ಕುರಿತು ಒಂದು ತಿಂಗಳ ಒಳಗಾಗಿ ವರದಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ಸೂಚಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳಲ್ಲಿ ಉನ್ನತ ಗುಣಮಟ್ಟದ ಸುಧಾರಣೆ, ಶಿಕ್ಷಣದ ಶ್ರೇಷ್ಠತೆಯ ಸಾಧನೆಗಾಗಿ ಬೋಧನೆ, ಕಲಿಕೆ, ಸಂಶೋಧನಾ ಕ್ಷೇತ್ರಗಳಲ್ಲಿ ಸುಧಾರಣೆ ತರಲು, ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ದೊರಕಿಸಲು, ಆಡಳಿತದಲ್ಲಿ ಸುಧಾರಣೆ ತರಲು 2020ರಲ್ಲಿ ಕಾಯ್ದೆ ರೂಪಿಸಲಾಗಿತ್ತು. ಈ ಕಾಯ್ದೆ ಹಲವು ನ್ಯೂನತೆಗಳಿಂದ ಕೂಡಿದೆ ಎಂಬ ಬಗ್ಗೆ ಹಲವು ದೂರುಗಳು ಸಲ್ಲಿಕೆಯಾಗಿರುವ ಕಾರಣ ತಿದ್ದುಪಡಿ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆಗೆ (2000) ತಿದ್ದುಪಡಿ ತರುವ ಕುರಿತು ಪರಿಶೀಲಿಸಲು ನಿವೃತ್ತ ಐಎಎಸ್ ಅಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುತ್ತಿದೆ.</p>.<p>ವಿಶ್ರಾಂತ ಕುಲಪತಿಗಳು, ನಿವೃತ್ತ ಕುಲಸಚಿವರು, ಅಧ್ಯಾಪಕರನ್ನು ಒಳಗೊಂಡ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಕಾಯ್ದೆಯಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ, ತಿದ್ದಪಡಿ ಮಾಡಬೇಕಿರುವ ಅಂಶಗಳ ಕುರಿತು ಒಂದು ತಿಂಗಳ ಒಳಗಾಗಿ ವರದಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ಸೂಚಿಸಿದ್ದಾರೆ.</p>.<p>ವಿಶ್ವವಿದ್ಯಾಲಯಗಳಲ್ಲಿ ಉನ್ನತ ಗುಣಮಟ್ಟದ ಸುಧಾರಣೆ, ಶಿಕ್ಷಣದ ಶ್ರೇಷ್ಠತೆಯ ಸಾಧನೆಗಾಗಿ ಬೋಧನೆ, ಕಲಿಕೆ, ಸಂಶೋಧನಾ ಕ್ಷೇತ್ರಗಳಲ್ಲಿ ಸುಧಾರಣೆ ತರಲು, ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆ ದೊರಕಿಸಲು, ಆಡಳಿತದಲ್ಲಿ ಸುಧಾರಣೆ ತರಲು 2020ರಲ್ಲಿ ಕಾಯ್ದೆ ರೂಪಿಸಲಾಗಿತ್ತು. ಈ ಕಾಯ್ದೆ ಹಲವು ನ್ಯೂನತೆಗಳಿಂದ ಕೂಡಿದೆ ಎಂಬ ಬಗ್ಗೆ ಹಲವು ದೂರುಗಳು ಸಲ್ಲಿಕೆಯಾಗಿರುವ ಕಾರಣ ತಿದ್ದುಪಡಿ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>