ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ, ತಮಿಳನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ನಡುವಣ ಜಲವಿವಾದದ ಇತ್ಯರ್ಥಕ್ಕೆ 1990ರಲ್ಲಿ ಕಾವೇರಿ ಜಲವಿವಾದ ನ್ಯಾಯಮಂಡಳಿ ರಚಿಸಲಾಗಿದೆ. ಪ್ರಾರಂಭದಿಂದ 2017ರ ಜುಲೈ 10ರವರೆಗೆ ಒಟ್ಟು 580 ಸಿಟ್ಟಿಂಗ್ಗಳು ನಡೆದಿವೆ. ಈ ಪ್ರಕರಣದಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ ವಕೀಲರಿಗೆ ₹54.13 ಕೋಟಿಗೂ ಅಧಿಕ ಶುಲ್ಕ ಪಾವತಿಸಲಾಗಿದೆ’ ಎಂದರು.