<p><strong>ಬೆಂಗಳೂರು:</strong> ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು ಅಧ್ಯಯನ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ.</p>.<p>ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು, ಸಮಿತಿಗೆ ಸಂಚಾಲಕರು ಮತ್ತು ಸದಸ್ಯರನ್ನು ನೇಮಕ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಅವರನ್ನು ಸಮಿತಿಯ ಸಂಚಾಲಕರಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಒಳಗೊಂಡು ಒಟ್ಟು ಎಂಟು ಸದಸ್ಯರನ್ನು ಸಮಿತಿಗೆ ನೇಮಕ ಮಾಡಲಾಗಿದೆ. </p>.<p>ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಬಿ. ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಮಂಜುನಾಥ್, ಎಸ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಈ ಸಮಿತಿಯ ಸದಸ್ಯರು.</p>.<p>‘ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯ, ನಾಯಕತ್ವ ಗುಣ ಉತ್ತೇಜಿಸುವಲ್ಲಿ ವಿದ್ಯಾರ್ಥಿ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಬೇಕು ಎಂದು ಕಾರ್ಯಕರ್ತರಿಂದ ಬೇಡಿಕೆ ಬಂದಿತ್ತು. ಈ ಬಗ್ಗೆ ಅಧ್ಯಯನ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿ ಸಂಘಗಳ ಚುನಾವಣೆಯ ಕಾರ್ಯಸಾಧ್ಯತೆ ಮತ್ತು ಅಗತ್ಯ, ಅವುಗಳ ಪರಿಣಾಮಗಳು, ಚುನಾವಣೆಯ ಸ್ವರೂಪ, ಮೀಸಲಾತಿ ನೀಡುವ ಬಗ್ಗೆ ಅಧ್ಯಯನ ನಡೆಸಿ 15 ದಿನಗಳ ಒಳಗೆ ವರದಿ ನೀಡಿ ಎಂದು ಅವರು ಸಮಿತಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಕುರಿತು ಅಧ್ಯಯನ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಉನ್ನತ ಮಟ್ಟದ ಸಮಿತಿ ರಚಿಸಿದೆ.</p>.<p>ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು, ಸಮಿತಿಗೆ ಸಂಚಾಲಕರು ಮತ್ತು ಸದಸ್ಯರನ್ನು ನೇಮಕ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಅವರನ್ನು ಸಮಿತಿಯ ಸಂಚಾಲಕರಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಒಳಗೊಂಡು ಒಟ್ಟು ಎಂಟು ಸದಸ್ಯರನ್ನು ಸಮಿತಿಗೆ ನೇಮಕ ಮಾಡಲಾಗಿದೆ. </p>.<p>ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ರಿಜ್ವಾನ್ ಅರ್ಷದ್, ಬಿ. ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಮಂಜುನಾಥ್, ಎಸ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಈ ಸಮಿತಿಯ ಸದಸ್ಯರು.</p>.<p>‘ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯ, ನಾಯಕತ್ವ ಗುಣ ಉತ್ತೇಜಿಸುವಲ್ಲಿ ವಿದ್ಯಾರ್ಥಿ ಸಂಘಗಳು ಮಹತ್ವದ ಪಾತ್ರ ವಹಿಸುತ್ತವೆ. ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಬೇಕು ಎಂದು ಕಾರ್ಯಕರ್ತರಿಂದ ಬೇಡಿಕೆ ಬಂದಿತ್ತು. ಈ ಬಗ್ಗೆ ಅಧ್ಯಯನ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿ ಸಂಘಗಳ ಚುನಾವಣೆಯ ಕಾರ್ಯಸಾಧ್ಯತೆ ಮತ್ತು ಅಗತ್ಯ, ಅವುಗಳ ಪರಿಣಾಮಗಳು, ಚುನಾವಣೆಯ ಸ್ವರೂಪ, ಮೀಸಲಾತಿ ನೀಡುವ ಬಗ್ಗೆ ಅಧ್ಯಯನ ನಡೆಸಿ 15 ದಿನಗಳ ಒಳಗೆ ವರದಿ ನೀಡಿ ಎಂದು ಅವರು ಸಮಿತಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>