‘ತೆರಿಗೆ ಪಾಲು, ನೆರೆ ಪರಿಹಾರ, ಅನುದಾನದ ಹಂಚಿಕೆಯಲ್ಲಿ ಕೇಂದ್ರದ ಎನ್ಡಿಎ ಸರ್ಕಾರ ಅನ್ಯಾಯ ಮಾಡುತ್ತಿದೆ’ ಎಂಬ ಕಾಂಗ್ರೆಸ್ ಸರ್ಕಾರದ ಪ್ರಹಾರಕ್ಕೆ ತಿರುಗೇಟು ನೀಡಿರುವ ವಿರೋಧ ಪಕ್ಷ ಬಿಜೆಪಿ, ‘ತೆರಿಗೆ ಪಾಲಿನ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ’ ಎಂದು ಹರಿಹಾಯ್ದಿದೆ. ಪಾಲಿನ ವಿಷಯ ಎರಡೂ ಪಕ್ಷಗಳ ನಾಯಕರ ಮಧ್ಯೆ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.
ಜಿಎಸ್ಟಿ ಪಾಲಿನ ಹಂಚಿಕೆಯಲ್ಲಿ ಅನ್ಯಾಯವಾಗಿದ್ದರೂ ಮೋದಿ ಅವರಿಗೆ ಮತ ಹಾಕಿ ತಲೆ ಮೇಲೆ ಕೈ ಇಟ್ಟುಕೊಳ್ಳುವ ಸನ್ನಿವೇಶ ಮತದಾರರು ತಂದುಕೊಂಡಿದ್ದೀರಿ. ಮುಂದೆ ಎಚ್ಚರಿಕೆಯಿಂದಲೇ ಮತ ಹಾಕಿಸಿದ್ದರಾಮಯ್ಯ, ಮುಖ್ಯಮಂತ್ರಿ
ಕರ್ನಾಟಕದಲ್ಲಿ ನಡೆಯುತ್ತಿರುವ ತೆರಿಗೆ ಕಳ್ಳತನದ ಬಗ್ಗೆ ಯಾವಾಗ ಮಾತನಾಡುತ್ತೀರಿ? ಕೆಲಸಕ್ಕೆ ಕರೀಬೇಡಿ, ಊಟಕ್ಕೆ ಮಾತ್ರ ಮರೀಬೇಡಿ ಎನ್ನುವಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆಆರ್. ಅಶೋಕ, ವಿರೋಧ ಪಕ್ಷದ ನಾಯಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.