<p><strong>ಬೆಂಗಳೂರು</strong>: ‘ಬಾಹ್ಯಾಕಾಶ ಕ್ಷೇತ್ರದ ಉದ್ಯಮಗಳು ಮತ್ತು ವಿದ್ಯುನ್ಮಾನ ಉಪಕರಣಗಳ ಬಿಡಿಭಾಗಗಳ ತಯಾರಿಕಾ ಪಾರ್ಕ್ಗಳಿಗೆ ಸರ್ಕಾರದ ಕಡೆಯಿಂದ ನೀಡಬಹುದಾದ ರಿಯಾಯಿತಿ ಮತ್ತು ವಿನಾಯಿತಿಗಳಿಗೆ ಸಂಬಂಧಿಸಿದಂತೆ ನೀತಿ ರೂಪಿಸಲಾಗುತ್ತಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ತಿಳಿಸಿದ್ದಾರೆ.</p><p>ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಎರಡು ಇಲಾಖೆಗಳ ಅಧಿಕಾರಿಗಳ ಜತೆಗೆ ಬುಧವಾರ ಖನಿಜ ಭವನದಲ್ಲಿ ಸಭೆ ನಡೆಸಿದರು.</p>.<p>‘ಬಂಡವಾಳ ಆಕರ್ಷಣೆ ಮತ್ತು ಹೂಡಿಕೆ ಉತ್ತೇಜನಕ್ಕೆ ಪೂರಕವಾಗಿರುವಂತೆ ನೀತಿ ರೂಪಿಸುವ ಬಗ್ಗೆ ಒಂದು ವರದಿ ಸಿದ್ಧಪಡಿಸಿ ಎಂದು ಎರಡೂ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ, ಇಬ್ಬರು ಸಚಿವರೂ ಸೂಚಿಸಿದ್ದಾರೆ. ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಹೇಳಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.</p>.<p>‘ಈ ವಲಯಗಳ ಉದ್ಯಮಕ್ಕೆ ಪೂರಕವಾಗಿ ನೀಡಬಹುದಾದ ರಿಯಾಯಿತಿಗಳ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆಯು ಪರಿಶೀಲನೆ ನಡೆಸುತ್ತಿದ್ದು, ಕೈಗಾರಿಕಾ ಇಲಾಖೆಯಿಂದ ದೊರೆಯಬಹುದಾದ ವಿನಾಯಿತಿಗಳ ಬಗ್ಗೆ ಇಬ್ಬರು ಸಚಿವರು ಸಭೆಯಲ್ಲಿ ಚರ್ಚಿಸಿದರು. ಒಂದೇ ಕೈಗಾರಿಕೆಗೆ ಎರಡೂ ಇಲಾಖೆಗಳಿಂದ ರಿಯಾಯಿತಿ ದೊರೆಯುತ್ತಿದ್ದು, ಈ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅಗತ್ಯವಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಉದ್ದೇಶಿತ ಡ್ರೋನ್ ಪರೀಕ್ಷಾ ಕೇಂದ್ರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಸ್ಥಾಪಿಸಲು ಸಾಧ್ಯವಿಲ್ಲ. ಹೆಸರಘಟ್ಟ ಪ್ರದೇಶವೂ ಬೆಂಗಳೂರಿನ ವ್ಯಾಪ್ತಿಯಲ್ಲಿ ಬರುವುದರಿಂದ, ಪರೀಕ್ಷಾ ಕೇಂದ್ರಕ್ಕೆ ಬೇರೆ ಸ್ಥಳ ಹುಡುಕಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು’ ಎಂದಿದೆ.</p>.<p>ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮಾಹಿತಿ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಸಭೆಯಲ್ಲಿ ಭಾಗಿಯಾಗಿದ್ದರು.</p>.<p> <strong>‘ನೀರು ಪೂರೈಕೆಗೆ ₹2500 ಕೋಟಿಯ ಯೋಜನೆ’ </strong></p><p>‘ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿರುವ ಪ್ರದೇಶಗಳಿಗೆ ನೀರು ಒದಗಿಸಲು ₹2500 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಕೈಗಾರಿಕೆಗಳಿಗೆ ನೀರಿನ ಭದ್ರತೆಯನ್ನು ಒದಗಿಸಬೇಕಿದೆ. ಇದಕ್ಕಾಗಿ ‘ಕೈಗಾರಿಕಾ ನೀರು ಭದ್ರತಾ ನೀತಿ’ಯನ್ನು ರೂಪಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ’ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.</p><p> ‘ನೀರು ಪೂರೈಕೆ ಯೋಜನೆ ಅಡಿಯಲ್ಲಿ ಉದ್ಯಮಗಳಿಗೆ ಅಗತ್ಯವಿರುವ ಶೇ 50ರಷ್ಟನ್ನು ಸರ್ಕಾರ ಪೂರೈಸಲಿದೆ. ನೀರಿನ ಸಂಸ್ಕರಣೆ ಮತ್ತು ಮರುಬಳಕೆ ಮೂಲಕ ಉಳಿದ ಶೇ 50ರಷ್ಟನ್ನು ಕೈಗಾರಿಕೆಗಳೇ ಒದಗಿಸಿಕೊಳ್ಳಬೇಕು. ಇದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗಿದೆ’ ಎಂದಿದ್ದಾರೆ.</p>.<p><strong>‘ಪಿಸಿಬಿ ಪಾರ್ಕ್ಗೆ ಭೂಮಿ ನೀಡಿ’ </strong></p><p>‘ಮಾಹಿತಿ ತಂತ್ರಜ್ಞಾನ ಇಲಾಖೆಯ ವತಿಯಿಂದ ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್ ಪಾರ್ಕ್ ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಪಾರ್ಕ್ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p><p> ‘ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆ ತಲಾ 100 ಎಕರೆಯಲ್ಲಿ ಗ್ಲೋಬಲ್ ಇನ್ನೋವೇಶನ್ ಸಿಟಿ 100 ಎಕರೆಯಲ್ಲಿ ಕಿಯೋನಿಕ್ಸ್ ಮೂಲಕ ʻಗ್ಲೋಬಲ್ ಕೇಪಬಿಲಿಟಿ ಸೆಂಟರ್ʼಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕೆ ಜಮೀನು ಒದಗಿಸುವಂತೆ ಕೈಗಾರಿಕಾ ಸಚಿವರನ್ನು ಕೋರಲಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಾಹ್ಯಾಕಾಶ ಕ್ಷೇತ್ರದ ಉದ್ಯಮಗಳು ಮತ್ತು ವಿದ್ಯುನ್ಮಾನ ಉಪಕರಣಗಳ ಬಿಡಿಭಾಗಗಳ ತಯಾರಿಕಾ ಪಾರ್ಕ್ಗಳಿಗೆ ಸರ್ಕಾರದ ಕಡೆಯಿಂದ ನೀಡಬಹುದಾದ ರಿಯಾಯಿತಿ ಮತ್ತು ವಿನಾಯಿತಿಗಳಿಗೆ ಸಂಬಂಧಿಸಿದಂತೆ ನೀತಿ ರೂಪಿಸಲಾಗುತ್ತಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ತಿಳಿಸಿದ್ದಾರೆ.</p><p>ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಎರಡು ಇಲಾಖೆಗಳ ಅಧಿಕಾರಿಗಳ ಜತೆಗೆ ಬುಧವಾರ ಖನಿಜ ಭವನದಲ್ಲಿ ಸಭೆ ನಡೆಸಿದರು.</p>.<p>‘ಬಂಡವಾಳ ಆಕರ್ಷಣೆ ಮತ್ತು ಹೂಡಿಕೆ ಉತ್ತೇಜನಕ್ಕೆ ಪೂರಕವಾಗಿರುವಂತೆ ನೀತಿ ರೂಪಿಸುವ ಬಗ್ಗೆ ಒಂದು ವರದಿ ಸಿದ್ಧಪಡಿಸಿ ಎಂದು ಎರಡೂ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ, ಇಬ್ಬರು ಸಚಿವರೂ ಸೂಚಿಸಿದ್ದಾರೆ. ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಹೇಳಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.</p>.<p>‘ಈ ವಲಯಗಳ ಉದ್ಯಮಕ್ಕೆ ಪೂರಕವಾಗಿ ನೀಡಬಹುದಾದ ರಿಯಾಯಿತಿಗಳ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆಯು ಪರಿಶೀಲನೆ ನಡೆಸುತ್ತಿದ್ದು, ಕೈಗಾರಿಕಾ ಇಲಾಖೆಯಿಂದ ದೊರೆಯಬಹುದಾದ ವಿನಾಯಿತಿಗಳ ಬಗ್ಗೆ ಇಬ್ಬರು ಸಚಿವರು ಸಭೆಯಲ್ಲಿ ಚರ್ಚಿಸಿದರು. ಒಂದೇ ಕೈಗಾರಿಕೆಗೆ ಎರಡೂ ಇಲಾಖೆಗಳಿಂದ ರಿಯಾಯಿತಿ ದೊರೆಯುತ್ತಿದ್ದು, ಈ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅಗತ್ಯವಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು’ ಎಂದು ಪ್ರಕಟಣೆ ತಿಳಿಸಿದೆ.</p>.<p>‘ಉದ್ದೇಶಿತ ಡ್ರೋನ್ ಪರೀಕ್ಷಾ ಕೇಂದ್ರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಸ್ಥಾಪಿಸಲು ಸಾಧ್ಯವಿಲ್ಲ. ಹೆಸರಘಟ್ಟ ಪ್ರದೇಶವೂ ಬೆಂಗಳೂರಿನ ವ್ಯಾಪ್ತಿಯಲ್ಲಿ ಬರುವುದರಿಂದ, ಪರೀಕ್ಷಾ ಕೇಂದ್ರಕ್ಕೆ ಬೇರೆ ಸ್ಥಳ ಹುಡುಕಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು’ ಎಂದಿದೆ.</p>.<p>ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮಾಹಿತಿ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಸಭೆಯಲ್ಲಿ ಭಾಗಿಯಾಗಿದ್ದರು.</p>.<p> <strong>‘ನೀರು ಪೂರೈಕೆಗೆ ₹2500 ಕೋಟಿಯ ಯೋಜನೆ’ </strong></p><p>‘ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿರುವ ಪ್ರದೇಶಗಳಿಗೆ ನೀರು ಒದಗಿಸಲು ₹2500 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಕೈಗಾರಿಕೆಗಳಿಗೆ ನೀರಿನ ಭದ್ರತೆಯನ್ನು ಒದಗಿಸಬೇಕಿದೆ. ಇದಕ್ಕಾಗಿ ‘ಕೈಗಾರಿಕಾ ನೀರು ಭದ್ರತಾ ನೀತಿ’ಯನ್ನು ರೂಪಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ’ ಎಂದು ಎಂ.ಬಿ.ಪಾಟೀಲ ತಿಳಿಸಿದ್ದಾರೆ.</p><p> ‘ನೀರು ಪೂರೈಕೆ ಯೋಜನೆ ಅಡಿಯಲ್ಲಿ ಉದ್ಯಮಗಳಿಗೆ ಅಗತ್ಯವಿರುವ ಶೇ 50ರಷ್ಟನ್ನು ಸರ್ಕಾರ ಪೂರೈಸಲಿದೆ. ನೀರಿನ ಸಂಸ್ಕರಣೆ ಮತ್ತು ಮರುಬಳಕೆ ಮೂಲಕ ಉಳಿದ ಶೇ 50ರಷ್ಟನ್ನು ಕೈಗಾರಿಕೆಗಳೇ ಒದಗಿಸಿಕೊಳ್ಳಬೇಕು. ಇದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗಿದೆ’ ಎಂದಿದ್ದಾರೆ.</p>.<p><strong>‘ಪಿಸಿಬಿ ಪಾರ್ಕ್ಗೆ ಭೂಮಿ ನೀಡಿ’ </strong></p><p>‘ಮಾಹಿತಿ ತಂತ್ರಜ್ಞಾನ ಇಲಾಖೆಯ ವತಿಯಿಂದ ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್ ಪಾರ್ಕ್ ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಪಾರ್ಕ್ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p><p> ‘ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆ ತಲಾ 100 ಎಕರೆಯಲ್ಲಿ ಗ್ಲೋಬಲ್ ಇನ್ನೋವೇಶನ್ ಸಿಟಿ 100 ಎಕರೆಯಲ್ಲಿ ಕಿಯೋನಿಕ್ಸ್ ಮೂಲಕ ʻಗ್ಲೋಬಲ್ ಕೇಪಬಿಲಿಟಿ ಸೆಂಟರ್ʼಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕೆ ಜಮೀನು ಒದಗಿಸುವಂತೆ ಕೈಗಾರಿಕಾ ಸಚಿವರನ್ನು ಕೋರಲಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>