<p>ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.</p>.<p>ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ (ಈಗಿನ ಎಂಡಿಎ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಲೋಕಾಯುಕ್ತ ಪೊಲೀಸರು ಇನ್ನಷ್ಟು ಮಂದಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.</p>.MUDA | 134 ಪ್ರಕರಣ ದಾಖಲು: ಮತ್ತಷ್ಟು ಮಂದಿಗೆ ಲೋಕಾಯುಕ್ತ ನೋಟಿಸ್.<p><strong>ಮಂಗಳೂರು:</strong> ಮ್ಯಾಟ್ರಮೋನಿ ಆನ್ಲೈನ್ ವೇದಿಕೆಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ಒಂಬತ್ತು ಯುವತಿಯರಿಗೆ ವಂಚಿಸಿರುವ ಆರೋಪಿಯನ್ನು ಇಲ್ಲಿಯ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. </p> .ಇಬ್ಬರೊಂದಿಗೆ ಮದುವೆ, ಏಳು ಯುವತಿಯರಿಗೆ ವಂಚನೆ: ಆರೋಪಿಯ ಬಂಧನ.<p><strong>ಮಂಗಳೂರು:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ (ಎಂಎನ್ಆರ್ಇಜಿ) ಯೋಜನೆ ರದ್ದುಗೊಳಿಸಿ, ವಿಕಸಿತ ಭಾರತ – ಉದ್ಯೋಗ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತರಿ (ವಿಬಿ – ಜಿ ರಾಮ್ ಜಿ) ಕಾಯ್ದೆ ಜಾರಿಗೊಳಿಸುವ ಪ್ರಕ್ರಿಯೆಯ ಗೊಂದಲದಿಂದಾಗಿ ಗ್ರಾಮೀಣ ಜನರಿಗೆ ಉದ್ಯೋಗ ಖಾತರಿ ನೀಡುವ ಯೋಜನೆಯ ಬಜೆಟ್ ರೂಪಿಸುವ ಪ್ರಕ್ರಿಯೆ ಇನ್ನೂ ನಡೆದಿಲ್ಲ.</p> .‘ಉದ್ಯೋಗ ಖಾತರಿ’ ಬಜೆಟ್ ಸಂಕಟ: ಸರ್ಕಾರದಿಂದ ಬಾರದ ಆದೇಶ.<p><strong>ಬೆಳ್ತಂಗಡಿ (ದಕ್ಷಿಣ ಕನ್ನಡ):</strong> ಕಾರಿನಲ್ಲಿ ಬಂದ ಮೂವರು ಮುಸುಕುಧಾರಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು ಎನ್ನಲಾದ ಪ್ರಕರಣ ತಿರುವು ಪಡೆದುಕೊಂಡಿದೆ. ಕಾಲೇಜಿಗೆ ಹೋಗಲು ಇಷ್ಟವಿಲ್ಲದೇ ವಿದ್ಯಾರ್ಥಿನಿಯೇ ಹೆಣೆದ ಕಟ್ಟು ಕಥೆ ಇದು ಎಂಬುದು ತನಿಖೆಯಿಂದ ಬಯಲಾಗಿದೆ.</p> .ಕಾಲೇಜಿಗೆ ಹೋಗಲು ಇಷ್ಟವಿಲ್ಲದ್ದಕ್ಕೆ ಅಪಹರಣದ ಕಥೆ ಹೆಣೆದಳು!.<p><strong>ಬೆಂಗಳೂರು:</strong> 20 ತಿಂಗಳ ಹಿಂದೆಯೇ ಅಧಿಕಾರ ಅವಧಿ ಮುಗಿದಿದ್ದರೂ ಕಾನೂನು ತೊಡಕುಗಳ ಕಾರಣದಿಂದ ಮುಂದೆ ಹೋಗುತ್ತಲೇ ಇದ್ದ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷರ ಚುನಾವಣೆ ಮಾ.6ರಂದು ನಡೆಯುವ ಸಾಧ್ಯತೆ ಇದೆ.</p> .ಮಾ.6ಕ್ಕೆ ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷರ ಚುನಾವಣೆ.<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಾದರೂ, ಮಾಲೀಕತ್ವ ಕೇಂದ್ರಕ್ಕೇ ಸೇರಿದೆ. ಇಂತಹ ವಿಷಯಗಳ ಮಾಹಿತಿ ಇಲ್ಲದವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಬಿಜೆಪಿ ನೇಮಿಸಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದರು.</p> .ಮೆಟ್ರೊ ಮಾಲೀಕತ್ವ ಕೇಂದ್ರದ್ದೇ: ಕಾಂಗ್ರೆಸ್.<p>ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ರಾಯಭಾರಿಯ ಹೊಣೆಯನ್ನು ಮಂಗಳವಾರ ಹೊತ್ತ ನಟಿ ತಮನ್ನಾ ಭಾಟಿಯಾ ಅವರು, ನಿಗಮದ 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.</p>.ಕೆಎಸ್ಡಿಎಲ್ ಪ್ರಚಾರಕ್ಕಿಳಿದ ನಟಿ ತಮನ್ನಾ: 57 ಹೊಸ ಉತ್ಪನ್ನಗಳ ಬಿಡುಗಡೆ.<p>ನಾನು ಮತ್ತು ಸಿದ್ದರಾಮಯ್ಯ ಅವರು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಸೇರಿಕೊಂಡೇ ಮಾತನಾಡಿದ್ದೆವು‘ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್</p>.ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್.<p>ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಶಾಸಕ ಬೈರತಿ ಬಸವರಾಜ್ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.</p>.ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ.<p>‘ಕೆಲವು ದ್ವಿದಳ ಧಾನ್ಯಗಳು ಸೇರಿದಂತೆ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಿಶಾಲ ಶ್ರೇಣಿಯ ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿತ ಮಾಡಲು ಅಥವಾ ಶೂನ್ಯಕ್ಕಿಳಿಸಲು ಭಾರತ ಮುಂದಾಗಿದೆ’ ಎಂದು ಶ್ವೇತಭವನ ಸೋಮವಾರ ಬಿಡುಗಡೆ ಮಾಡಿರುವ ಫ್ಯಾಕ್ಟ್ ಶೀಟ್ ವರದಿ ಹೇಳಿದೆ. </p>.ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕದ ಕೃಷಿ ಉತ್ಪನ್ನಕ್ಕೆ ಸುಂಕ ಕಡಿತ? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.</p>.<p>ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ (ಈಗಿನ ಎಂಡಿಎ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಲೋಕಾಯುಕ್ತ ಪೊಲೀಸರು ಇನ್ನಷ್ಟು ಮಂದಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.</p>.MUDA | 134 ಪ್ರಕರಣ ದಾಖಲು: ಮತ್ತಷ್ಟು ಮಂದಿಗೆ ಲೋಕಾಯುಕ್ತ ನೋಟಿಸ್.<p><strong>ಮಂಗಳೂರು:</strong> ಮ್ಯಾಟ್ರಮೋನಿ ಆನ್ಲೈನ್ ವೇದಿಕೆಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ಒಂಬತ್ತು ಯುವತಿಯರಿಗೆ ವಂಚಿಸಿರುವ ಆರೋಪಿಯನ್ನು ಇಲ್ಲಿಯ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. </p> .ಇಬ್ಬರೊಂದಿಗೆ ಮದುವೆ, ಏಳು ಯುವತಿಯರಿಗೆ ವಂಚನೆ: ಆರೋಪಿಯ ಬಂಧನ.<p><strong>ಮಂಗಳೂರು:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ (ಎಂಎನ್ಆರ್ಇಜಿ) ಯೋಜನೆ ರದ್ದುಗೊಳಿಸಿ, ವಿಕಸಿತ ಭಾರತ – ಉದ್ಯೋಗ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತರಿ (ವಿಬಿ – ಜಿ ರಾಮ್ ಜಿ) ಕಾಯ್ದೆ ಜಾರಿಗೊಳಿಸುವ ಪ್ರಕ್ರಿಯೆಯ ಗೊಂದಲದಿಂದಾಗಿ ಗ್ರಾಮೀಣ ಜನರಿಗೆ ಉದ್ಯೋಗ ಖಾತರಿ ನೀಡುವ ಯೋಜನೆಯ ಬಜೆಟ್ ರೂಪಿಸುವ ಪ್ರಕ್ರಿಯೆ ಇನ್ನೂ ನಡೆದಿಲ್ಲ.</p> .‘ಉದ್ಯೋಗ ಖಾತರಿ’ ಬಜೆಟ್ ಸಂಕಟ: ಸರ್ಕಾರದಿಂದ ಬಾರದ ಆದೇಶ.<p><strong>ಬೆಳ್ತಂಗಡಿ (ದಕ್ಷಿಣ ಕನ್ನಡ):</strong> ಕಾರಿನಲ್ಲಿ ಬಂದ ಮೂವರು ಮುಸುಕುಧಾರಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು ಎನ್ನಲಾದ ಪ್ರಕರಣ ತಿರುವು ಪಡೆದುಕೊಂಡಿದೆ. ಕಾಲೇಜಿಗೆ ಹೋಗಲು ಇಷ್ಟವಿಲ್ಲದೇ ವಿದ್ಯಾರ್ಥಿನಿಯೇ ಹೆಣೆದ ಕಟ್ಟು ಕಥೆ ಇದು ಎಂಬುದು ತನಿಖೆಯಿಂದ ಬಯಲಾಗಿದೆ.</p> .ಕಾಲೇಜಿಗೆ ಹೋಗಲು ಇಷ್ಟವಿಲ್ಲದ್ದಕ್ಕೆ ಅಪಹರಣದ ಕಥೆ ಹೆಣೆದಳು!.<p><strong>ಬೆಂಗಳೂರು:</strong> 20 ತಿಂಗಳ ಹಿಂದೆಯೇ ಅಧಿಕಾರ ಅವಧಿ ಮುಗಿದಿದ್ದರೂ ಕಾನೂನು ತೊಡಕುಗಳ ಕಾರಣದಿಂದ ಮುಂದೆ ಹೋಗುತ್ತಲೇ ಇದ್ದ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಅಧ್ಯಕ್ಷರ ಚುನಾವಣೆ ಮಾ.6ರಂದು ನಡೆಯುವ ಸಾಧ್ಯತೆ ಇದೆ.</p> .ಮಾ.6ಕ್ಕೆ ಕರ್ನಾಟಕ ಹಾಲು ಮಹಾಮಂಡಳದ ಅಧ್ಯಕ್ಷರ ಚುನಾವಣೆ.<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಾದರೂ, ಮಾಲೀಕತ್ವ ಕೇಂದ್ರಕ್ಕೇ ಸೇರಿದೆ. ಇಂತಹ ವಿಷಯಗಳ ಮಾಹಿತಿ ಇಲ್ಲದವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಬಿಜೆಪಿ ನೇಮಿಸಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದರು.</p> .ಮೆಟ್ರೊ ಮಾಲೀಕತ್ವ ಕೇಂದ್ರದ್ದೇ: ಕಾಂಗ್ರೆಸ್.<p>ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ರಾಯಭಾರಿಯ ಹೊಣೆಯನ್ನು ಮಂಗಳವಾರ ಹೊತ್ತ ನಟಿ ತಮನ್ನಾ ಭಾಟಿಯಾ ಅವರು, ನಿಗಮದ 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.</p>.ಕೆಎಸ್ಡಿಎಲ್ ಪ್ರಚಾರಕ್ಕಿಳಿದ ನಟಿ ತಮನ್ನಾ: 57 ಹೊಸ ಉತ್ಪನ್ನಗಳ ಬಿಡುಗಡೆ.<p>ನಾನು ಮತ್ತು ಸಿದ್ದರಾಮಯ್ಯ ಅವರು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಸೇರಿಕೊಂಡೇ ಮಾತನಾಡಿದ್ದೆವು‘ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್</p>.ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್.<p>ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಶಾಸಕ ಬೈರತಿ ಬಸವರಾಜ್ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.</p>.ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ.<p>‘ಕೆಲವು ದ್ವಿದಳ ಧಾನ್ಯಗಳು ಸೇರಿದಂತೆ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಿಶಾಲ ಶ್ರೇಣಿಯ ಆಹಾರ ಮತ್ತು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿತ ಮಾಡಲು ಅಥವಾ ಶೂನ್ಯಕ್ಕಿಳಿಸಲು ಭಾರತ ಮುಂದಾಗಿದೆ’ ಎಂದು ಶ್ವೇತಭವನ ಸೋಮವಾರ ಬಿಡುಗಡೆ ಮಾಡಿರುವ ಫ್ಯಾಕ್ಟ್ ಶೀಟ್ ವರದಿ ಹೇಳಿದೆ. </p>.ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೆರಿಕದ ಕೃಷಿ ಉತ್ಪನ್ನಕ್ಕೆ ಸುಂಕ ಕಡಿತ? .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>