<p><strong>ಬೆಂಗಳೂರು: </strong>ಸಾರಿಗೆ ನಿಗಮಗಳ ನೌಕರರ ಮುಷ್ಕರ ಭಾನುವಾರವೂ ರಾಜ್ಯದಾದ್ಯಂತ ಮುಂದುವರಿದಿದೆ. ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ಬಹುತೇಕ ಬಸ್ ಗಳು ರಸ್ತೆಗೆ ಇಳಿದಿಲ್ಲ.</p>.<p>ತಮ್ಮನ್ನೂ ಸರ್ಕಾರಿ ನೌಕರೆರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಗುರುವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಪ್ರತಿಭಟನೆ ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಗಳು ಫಲ ನೀಡಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/district/bengaluru-city/transport-strike-nine-arrested-assaults-bmtc-staff-786788.html" itemprop="url">ಬಿಎಂಟಿಸಿ ನೌಕರರ ಮೇಲೆ ಹಲ್ಲೆ; 9 ಮಂದಿ ಬಂಧನ </a></p>.<p>ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನೌಕರರ ಮನವೊಲಿಕೆಗಾಗಿ ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ವಿಕಾಸಸೌಧದಲ್ಲಿ ಭಾನುವಾರ ಬೆಳಿಗ್ಗೆ ಸಭೆ ನಿಗದಿಯಾಗಿದೆ.</p>.<p>ಆದರೆ, ತಮಗೆ ಈವರೆಗೂ ಅಧಿಕೃತ ಆಹ್ವಾನ ಬಂದಿಲ್ಲ ಎಂದು ಮುಷ್ಕರದ ನೇತೃತ್ವ ವಹಿಸಿರುವ ಸಾರಿಗೆ ನೌಕರರ ಕೂಟದ ಮುಖಂಡರು ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/district/belagavi/transport-strike-continues-786785.html" itemprop="url">ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾರಿಗೆ ನಿಗಮಗಳ ನೌಕರರ ಮುಷ್ಕರ ಭಾನುವಾರವೂ ರಾಜ್ಯದಾದ್ಯಂತ ಮುಂದುವರಿದಿದೆ. ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ಬಹುತೇಕ ಬಸ್ ಗಳು ರಸ್ತೆಗೆ ಇಳಿದಿಲ್ಲ.</p>.<p>ತಮ್ಮನ್ನೂ ಸರ್ಕಾರಿ ನೌಕರೆರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಗುರುವಾರದಿಂದ ಮುಷ್ಕರ ನಡೆಸುತ್ತಿದ್ದಾರೆ. ನೌಕರರ ಪ್ರತಿಭಟನೆ ಅಂತ್ಯಗೊಳಿಸಲು ರಾಜ್ಯ ಸರ್ಕಾರ ನಡೆಸಿದ ಪ್ರಯತ್ನಗಳು ಫಲ ನೀಡಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/district/bengaluru-city/transport-strike-nine-arrested-assaults-bmtc-staff-786788.html" itemprop="url">ಬಿಎಂಟಿಸಿ ನೌಕರರ ಮೇಲೆ ಹಲ್ಲೆ; 9 ಮಂದಿ ಬಂಧನ </a></p>.<p>ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ನೌಕರರ ಮನವೊಲಿಕೆಗಾಗಿ ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ವಿಕಾಸಸೌಧದಲ್ಲಿ ಭಾನುವಾರ ಬೆಳಿಗ್ಗೆ ಸಭೆ ನಿಗದಿಯಾಗಿದೆ.</p>.<p>ಆದರೆ, ತಮಗೆ ಈವರೆಗೂ ಅಧಿಕೃತ ಆಹ್ವಾನ ಬಂದಿಲ್ಲ ಎಂದು ಮುಷ್ಕರದ ನೇತೃತ್ವ ವಹಿಸಿರುವ ಸಾರಿಗೆ ನೌಕರರ ಕೂಟದ ಮುಖಂಡರು ತಿಳಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/district/belagavi/transport-strike-continues-786785.html" itemprop="url">ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>