<p><strong>ಬೆಂಗಳೂರು</strong>: ಸಾರಿಗೆ ನೌಕರರ ಮುಷ್ಕರಕ್ಕೆ ಮಂಗಳವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ ಬಸ್ಗಳು ರಸ್ತೆಗಿಳಿಯದೇ ಪ್ರಯಾಣಿಕರಿಗೆ ಸಮಸ್ಯೆಯಾದರೆ, ಸಂಜೆಯ ವೇಳೆಗೆ ಬಸ್ಗಳ ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರು ನಿರಾಳರಾದರು.</p><p>ಕೋಲಾರ, ಹುಬ್ಬಳ್ಳಿಯ ಕೆಲವೆಡೆ ಬಸ್ಗಳಿಗೆ ಕಲ್ಲು ತೂರಲಾಗಿದ್ದು, ಗಾಜುಗಳು ಒಡೆದಿವೆ. ಕೊಪ್ಪಳದಲ್ಲಿ ಪ್ರತಿ ಬಸ್ಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ಒದಗಿಸಲಾಗಿತ್ತು.</p><p>ಬಸ್ ಮುಷ್ಕರ ಕಾರಣದಿಂದ ಕೊಪ್ಪಳ ಮತ್ತು ತುಮಕೂರು ವಿಶ್ವವಿದ್ಯಾ<br>ಲಯವು ಮಂಗಳವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿದವು.</p><p><strong>ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ</strong></p><p>ಮೈಸೂರು ವರದಿ: ಮೈಸೂರು ಭಾಗದ ಜಿಲ್ಲೆಗಳಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಂಡ್ಯ, ಹಾಸನ ಜಿಲ್ಲೆಯಲ್ಲಿ ಬಸ್ಗಳು ರಸ್ತೆಗಿಳಿಯಲಿಲ್ಲ.</p><p>ಈ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಖಾಸಗಿ ಬಸ್ಗಳ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಜಿಲ್ಲೆಗಳಲ್ಲಿ ಸರ್ಕಾರಿ, ಖಾಸಗಿ ಬಸ್ಗಳು ಸಂಚರಿಸಿದವು. ವಿದ್ಯಾರ್ಥಿ<br>ಗಳಿಗೆ ತೊಂದರೆಯಾಯಿತು. ಕೆಲವೆಡೆ ಶಾಲೆ, ಕಾಲೇಜುಗಳು ಮಧ್ಯಾಹ್ನದ ಬಳಿಕ ರಜೆ ನೀಡಿದ್ದವು.</p><p><strong>ಬಸ್ಗೆ ಕಲ್ಲು– ಪರೀಕ್ಷೆ ಮುಂದೂಡಿಕೆ</strong></p><p>ಕಲಬುರಗಿ ವರದಿ: ಕೊಪ್ಪಳ ಜಿಲ್ಲೆಯ<br>ಯಲಬುರ್ಗಾದಲ್ಲಿ ಸೋಮವಾರ ರಾತ್ರಿ ಬೆಂಗಳೂರಿಗೆ ಹೊರಟಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಿಟ್ಟರೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಮುಷ್ಕರ ಬಹತೇಕ ಶಾಂತಿಯುತವಾಗಿತ್ತು.</p><p>ಯಲಬುರ್ಗಾದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಕುಕನೂರು ಸಮೀಪ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಬಸ್ ಗಾಜು ಒಡೆದಿದೆ. ಮುಂಜಾಗ್ರತೆಯಾಗಿ ಪ್ರತಿ ಬಸ್ನಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ನೀಡಲಾಯಿತು.</p><p>ಬಸ್ಗಳ ಸೇವೆ ಇಲ್ಲದ್ದರಿಂದ ಮಂಗಳವಾರ ನಿಗದಿಯಾಗಿದ್ದ ಕೊಪ್ಪಳ ವಿ.ವಿ.ಯ ಸ್ನಾತಕೋತ್ತರ ಪದವಿಯ 2ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಯಿತು.</p><p><strong>ಬಸ್ಗಳಿಗೆ ಕಲ್ಲು, ಹಾನಿ</strong></p><p>ಹುಬ್ಬಳ್ಳಿ ವರದಿ: ಧಾರವಾಡ, ಬಾಗಲಕೋಟೆ, ವಿಜಯಪುರ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಬಹುತೇಕ ಮಂದಿ ಖಾಸಗಿ ಬಸ್ಗಳಲ್ಲಿ ಸಂಚರಿಸಿದರು.</p><p>ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ಗೆ ಗದಗ ಬಳಿ ಮುಖಕ್ಕೆ ಮಾಸ್ಕ್ ಧರಿಸಿದ್ದ ಕಿಡಿಗೇಡಿಗಳು ಕಲ್ಲು ತೂರಿದರು. ವಿದ್ಯಾನಗರದ ಗ್ರಾಮಾಂತರ ಘಟಕಕ್ಕೆ ಸೇರಿದ ಒಂದು ಬಸ್ಗೆ ಕಿಡಿಗೇಡಿಗಳು ಕಲ್ಲು ಎಸೆದು, ಗಾಜು ಜಖಂಗೊಳಿಸಿದರು.</p><p><strong>ಕೋಲಾರ ವರದಿ:</strong> ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎರಡು ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳ ಗುಂಪೊಂದು ಕಲ್ಲು ಎಸೆದಿದ್ದು, ಕಿಟಕಿಯ ಗಾಜುಗಳು ಪುಡಿಯಾಗಿವೆ. </p><p>ಕೋಲಾರ ತಾಲ್ಲೂಕಿನ ಹರಟಿ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಕೆಲವರು ಬೇತಮಂಗಲದಿಂದ ಕೋಲಾರದತ್ತ ಹೊರಟಿದ್ದ ಬಸ್ ಮೇಲೆ ಕಲ್ಲು ತೂರಿದರು. ಚಾಲಕನ ಮುಂದಿನ ಗಾಜು ಒಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p><p><strong>ಸಾರಿಗೆ ನೌಕರರ ಜತೆ ಮಾತುಕತೆಗೆ ಬಿಜೆಪಿ ಆಗ್ರಹ</strong></p><p>‘ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಸಮಸ್ಯೆಗಳನ್ನು ಬಗೆಹರಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ನೌಕರರ ಜತೆ ಮಾತುಕತೆ ನಡೆಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ<br>ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.</p><p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಾರಿಗೆ ನೌಕರರ ಮುಷ್ಕರದಿಂದಾಗಿ ಸಾರ್ವಜನಿಕರು ಮತ್ತು ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ’ ಎಂದರು.</p><p>‘ಗ್ಯಾರಂಟಿ’ ಯೋಜನೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಬಸ್ಗಳ ಸಂಖ್ಯೆಯನ್ನೂ ಕಡಿಮೆ ಮಾಡಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಗಳ ಆರ್ಥಿಕ ಸಮಸ್ಯೆ ಉಲ್ಬಣಿಸಿದ್ದು, ಇದರಿಂದಾಗಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ದೂರಿದರು.</p><p>ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಅಧಿಕಾರಕ್ಕೆ ಬಂದ ದಿನವೇ ಸಾರಿಗೆ ನೌಕರರ ಬಗ್ಗೆ ಆಡಿದ ಮಾತನ್ನು ಮರೆತಿದ್ದಾರೆ. ನೌಕರರ ಸಮಸ್ಯೆ ಪರಿಹರಿಸುವುದಾಗಿ ಸದನದಲ್ಲೂ ಮಾತುಕೊಟ್ಟಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ’ ಎಂದು ಹೇಳಿದರು.</p><p>ನೌಕರರ ವೇತನ ಹಿಂಬಾಕಿಯನ್ನೂ ಕೊಡುತ್ತಿಲ್ಲ. ನಿವೃತ್ತರಿಗೆ ಗ್ರಾಚ್ಯುಯಿಟಿ ಮತ್ತಿತರ ಸೌಲಭ್ಯಗಳನ್ನು ಕೊಟ್ಟಿಲ್ಲ. ಖಜಾನೆ ತುಂಬಿ ತುಳುಕುತ್ತಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಸಾರಿಗೆ ನೌಕರರ ಸಮಸ್ಯೆಗೆ ಸ್ಪಂದಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.</p><p><strong>ಕರಾವಳಿ: ಎಲ್ಲ ಬಸ್ ಸಂಚಾರ</strong></p><p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್, ಮಿನಿ ಬಸ್, ಜೀಪುಗಳನ್ನು ನಿಲ್ಲಿಸಲು ಅವಕಾಶ ನೀಡಲಾಗಿತ್ತು. ಅವುಗಳಲ್ಲಿ ಜನ ಪ್ರಯಾಣಿಸಿದರು. </p><p>ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಗಳಲ್ಲಿ ಮುಷ್ಕರ ಪರಿಣಾಮ ಬೀರಲಿಲ್ಲ. ಉಡುಪಿ ,<br>ಕುಂದಾಪುರ ಬಸ್ನಿಲ್ದಾಣಗಳಲ್ಲಿ ಬೆಳಿಗ್ಗೆ 7.30ರ ವರೆಗೆ ಬಸ್ ಸಂಚಾರ ಇರಲಿಲ್ಲ.ನಂತರ ಸಹಜ ಸ್ಥಿತಿಗೆ ಬಂತು ಎಂದು ಅಧಿಕಾರಿಗಳು ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಾರಿಗೆ ನೌಕರರ ಮುಷ್ಕರಕ್ಕೆ ಮಂಗಳವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ ಬಸ್ಗಳು ರಸ್ತೆಗಿಳಿಯದೇ ಪ್ರಯಾಣಿಕರಿಗೆ ಸಮಸ್ಯೆಯಾದರೆ, ಸಂಜೆಯ ವೇಳೆಗೆ ಬಸ್ಗಳ ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರು ನಿರಾಳರಾದರು.</p><p>ಕೋಲಾರ, ಹುಬ್ಬಳ್ಳಿಯ ಕೆಲವೆಡೆ ಬಸ್ಗಳಿಗೆ ಕಲ್ಲು ತೂರಲಾಗಿದ್ದು, ಗಾಜುಗಳು ಒಡೆದಿವೆ. ಕೊಪ್ಪಳದಲ್ಲಿ ಪ್ರತಿ ಬಸ್ಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ಒದಗಿಸಲಾಗಿತ್ತು.</p><p>ಬಸ್ ಮುಷ್ಕರ ಕಾರಣದಿಂದ ಕೊಪ್ಪಳ ಮತ್ತು ತುಮಕೂರು ವಿಶ್ವವಿದ್ಯಾ<br>ಲಯವು ಮಂಗಳವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿದವು.</p><p><strong>ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ</strong></p><p>ಮೈಸೂರು ವರದಿ: ಮೈಸೂರು ಭಾಗದ ಜಿಲ್ಲೆಗಳಲ್ಲಿ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಂಡ್ಯ, ಹಾಸನ ಜಿಲ್ಲೆಯಲ್ಲಿ ಬಸ್ಗಳು ರಸ್ತೆಗಿಳಿಯಲಿಲ್ಲ.</p><p>ಈ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಖಾಸಗಿ ಬಸ್ಗಳ ವ್ಯವಸ್ಥೆ ಮಾಡಲಾಗಿತ್ತು. ಉಳಿದ ಜಿಲ್ಲೆಗಳಲ್ಲಿ ಸರ್ಕಾರಿ, ಖಾಸಗಿ ಬಸ್ಗಳು ಸಂಚರಿಸಿದವು. ವಿದ್ಯಾರ್ಥಿ<br>ಗಳಿಗೆ ತೊಂದರೆಯಾಯಿತು. ಕೆಲವೆಡೆ ಶಾಲೆ, ಕಾಲೇಜುಗಳು ಮಧ್ಯಾಹ್ನದ ಬಳಿಕ ರಜೆ ನೀಡಿದ್ದವು.</p><p><strong>ಬಸ್ಗೆ ಕಲ್ಲು– ಪರೀಕ್ಷೆ ಮುಂದೂಡಿಕೆ</strong></p><p>ಕಲಬುರಗಿ ವರದಿ: ಕೊಪ್ಪಳ ಜಿಲ್ಲೆಯ<br>ಯಲಬುರ್ಗಾದಲ್ಲಿ ಸೋಮವಾರ ರಾತ್ರಿ ಬೆಂಗಳೂರಿಗೆ ಹೊರಟಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಿಟ್ಟರೆ, ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಮುಷ್ಕರ ಬಹತೇಕ ಶಾಂತಿಯುತವಾಗಿತ್ತು.</p><p>ಯಲಬುರ್ಗಾದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಕುಕನೂರು ಸಮೀಪ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಬಸ್ ಗಾಜು ಒಡೆದಿದೆ. ಮುಂಜಾಗ್ರತೆಯಾಗಿ ಪ್ರತಿ ಬಸ್ನಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ನೀಡಲಾಯಿತು.</p><p>ಬಸ್ಗಳ ಸೇವೆ ಇಲ್ಲದ್ದರಿಂದ ಮಂಗಳವಾರ ನಿಗದಿಯಾಗಿದ್ದ ಕೊಪ್ಪಳ ವಿ.ವಿ.ಯ ಸ್ನಾತಕೋತ್ತರ ಪದವಿಯ 2ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಯಿತು.</p><p><strong>ಬಸ್ಗಳಿಗೆ ಕಲ್ಲು, ಹಾನಿ</strong></p><p>ಹುಬ್ಬಳ್ಳಿ ವರದಿ: ಧಾರವಾಡ, ಬಾಗಲಕೋಟೆ, ವಿಜಯಪುರ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಬಸ್ಗಳು ರಸ್ತೆಗೆ ಇಳಿಯಲಿಲ್ಲ. ಬಹುತೇಕ ಮಂದಿ ಖಾಸಗಿ ಬಸ್ಗಳಲ್ಲಿ ಸಂಚರಿಸಿದರು.</p><p>ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೊರಟಿದ್ದ ಬಸ್ಗೆ ಗದಗ ಬಳಿ ಮುಖಕ್ಕೆ ಮಾಸ್ಕ್ ಧರಿಸಿದ್ದ ಕಿಡಿಗೇಡಿಗಳು ಕಲ್ಲು ತೂರಿದರು. ವಿದ್ಯಾನಗರದ ಗ್ರಾಮಾಂತರ ಘಟಕಕ್ಕೆ ಸೇರಿದ ಒಂದು ಬಸ್ಗೆ ಕಿಡಿಗೇಡಿಗಳು ಕಲ್ಲು ಎಸೆದು, ಗಾಜು ಜಖಂಗೊಳಿಸಿದರು.</p><p><strong>ಕೋಲಾರ ವರದಿ:</strong> ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎರಡು ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳ ಗುಂಪೊಂದು ಕಲ್ಲು ಎಸೆದಿದ್ದು, ಕಿಟಕಿಯ ಗಾಜುಗಳು ಪುಡಿಯಾಗಿವೆ. </p><p>ಕೋಲಾರ ತಾಲ್ಲೂಕಿನ ಹರಟಿ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಕೆಲವರು ಬೇತಮಂಗಲದಿಂದ ಕೋಲಾರದತ್ತ ಹೊರಟಿದ್ದ ಬಸ್ ಮೇಲೆ ಕಲ್ಲು ತೂರಿದರು. ಚಾಲಕನ ಮುಂದಿನ ಗಾಜು ಒಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p><p><strong>ಸಾರಿಗೆ ನೌಕರರ ಜತೆ ಮಾತುಕತೆಗೆ ಬಿಜೆಪಿ ಆಗ್ರಹ</strong></p><p>‘ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಸಮಸ್ಯೆಗಳನ್ನು ಬಗೆಹರಿಸಿ, ಅವರ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ನೌಕರರ ಜತೆ ಮಾತುಕತೆ ನಡೆಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ<br>ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.</p><p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಾರಿಗೆ ನೌಕರರ ಮುಷ್ಕರದಿಂದಾಗಿ ಸಾರ್ವಜನಿಕರು ಮತ್ತು ಶಾಲಾ– ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ’ ಎಂದರು.</p><p>‘ಗ್ಯಾರಂಟಿ’ ಯೋಜನೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಬಸ್ಗಳ ಸಂಖ್ಯೆಯನ್ನೂ ಕಡಿಮೆ ಮಾಡಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ಸಂಸ್ಥೆಗಳ ಆರ್ಥಿಕ ಸಮಸ್ಯೆ ಉಲ್ಬಣಿಸಿದ್ದು, ಇದರಿಂದಾಗಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ದೂರಿದರು.</p><p>ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಅಧಿಕಾರಕ್ಕೆ ಬಂದ ದಿನವೇ ಸಾರಿಗೆ ನೌಕರರ ಬಗ್ಗೆ ಆಡಿದ ಮಾತನ್ನು ಮರೆತಿದ್ದಾರೆ. ನೌಕರರ ಸಮಸ್ಯೆ ಪರಿಹರಿಸುವುದಾಗಿ ಸದನದಲ್ಲೂ ಮಾತುಕೊಟ್ಟಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ’ ಎಂದು ಹೇಳಿದರು.</p><p>ನೌಕರರ ವೇತನ ಹಿಂಬಾಕಿಯನ್ನೂ ಕೊಡುತ್ತಿಲ್ಲ. ನಿವೃತ್ತರಿಗೆ ಗ್ರಾಚ್ಯುಯಿಟಿ ಮತ್ತಿತರ ಸೌಲಭ್ಯಗಳನ್ನು ಕೊಟ್ಟಿಲ್ಲ. ಖಜಾನೆ ತುಂಬಿ ತುಳುಕುತ್ತಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ, ಸಾರಿಗೆ ನೌಕರರ ಸಮಸ್ಯೆಗೆ ಸ್ಪಂದಿಸಲು ಏಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.</p><p><strong>ಕರಾವಳಿ: ಎಲ್ಲ ಬಸ್ ಸಂಚಾರ</strong></p><p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್, ಮಿನಿ ಬಸ್, ಜೀಪುಗಳನ್ನು ನಿಲ್ಲಿಸಲು ಅವಕಾಶ ನೀಡಲಾಗಿತ್ತು. ಅವುಗಳಲ್ಲಿ ಜನ ಪ್ರಯಾಣಿಸಿದರು. </p><p>ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಗಳಲ್ಲಿ ಮುಷ್ಕರ ಪರಿಣಾಮ ಬೀರಲಿಲ್ಲ. ಉಡುಪಿ ,<br>ಕುಂದಾಪುರ ಬಸ್ನಿಲ್ದಾಣಗಳಲ್ಲಿ ಬೆಳಿಗ್ಗೆ 7.30ರ ವರೆಗೆ ಬಸ್ ಸಂಚಾರ ಇರಲಿಲ್ಲ.ನಂತರ ಸಹಜ ಸ್ಥಿತಿಗೆ ಬಂತು ಎಂದು ಅಧಿಕಾರಿಗಳು ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>