<p><strong>ಬೆಂಗಳೂರು:</strong> ಪರಿಶಿಷ್ಟ ಪಂಗಡಗಳು ಮತ್ತು ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಒಳಮೀಸಲಾತಿ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಬೇಕು ಎಂಬ ನಿರ್ಣಯವನ್ನು ಆದಿವಾಸಿ ಬುಡಕಟ್ಟು ಸಮುದಾಯಗಳ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.</p>.<p>ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣ ಸಮಿತಿಯು ಶುಕ್ರವಾರ ಗಾಂಧಿ ಭವನದಲ್ಲಿ ಸಭೆ ಆಯೋಜಿಸಿತ್ತು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. </p>.<p>‘ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಇದ್ದರೂ, ಪ್ರಬಲ ಸಮುದಾಯಗಳಿಗೆ ಮಾತ್ರವೇ ಅದು ಸಿಗುತ್ತಿದೆ. ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಮೀಸಲಾತಿಯ ಲಾಭ ಸಿಗಬೇಕು ಅಂದರೆ, ಒಳಮೀಸಲಾತಿ ಜಾರಿಯಾಗಬೇಕು’ ಎಂದರು.</p>.<p>ಸಭೆಯಲ್ಲಿ ಭಾಗಿಯಾಗಿದ್ದ ವಿವಿಧ ಆದಿವಾಸಿ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳು ಒಳಮೀಸಲಾತಿಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರಂತೆ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.</p>.<h2>‘ಪಟ್ಟಿಯಲ್ಲಿಲ್ಲ ಹಲವು ಬುಡಕಟ್ಟು’</h2><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಆದಿವಾಸಿ ನಿಗಮ ಮತ್ತು ಆಯೋಗ ರಚನೆಯನ್ನು ಘೋಷಿಸಿದ್ದಾರೆ. ಈ ನಿಗಮ ರಚನೆ ಸಂಬಂಧ ಜೇನು ಕುರುಬ, ಕೊರಗ, ಇರುಳಿಗ, ಸೋಲಿಗ, ಪಣಿಯ, ಮಲೆಕುಡಿಯ, ಗೌಡಲು, ಹಸಲರು ಸೇರಿ 13 ಬುಡಕಟ್ಟು ಸಮುದಾಯಗಳನ್ನಷ್ಟೇ ಪರಿಗಣಿಸಲಾಗಿದೆ.<br>ಇತರ ಹತ್ತು ಬುಡಕಟ್ಟು ಸಮುದಾಯಗಳನ್ನು ಕೈಬಿಡಲಾಗಿದೆ’ ಎಂದು ಕರ್ನಾಟಕ<br>ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ಅಧ್ಯಕ್ಷ ಜಗ್ಗು ಹೇಳಿದರು. ‘ಆದಿವಾಸಿ ಬುಡಕಟ್ಟು ಸಮುದಾಯಗಳ ಅಡಿಯಲ್ಲಿ ಅರಣ್ಯವಾಸಿ ಹಕ್ಕಿಪಿಕ್ಕಿ, ಹರಿಣಿ ಶಿಕಾರಿ, ವಾಗ್ರಿ ಪಾರ್ಧಿ, ಅಡವಿ ಚಿಂಚಿಲ ಸೇರಿ ಇನ್ನೂ ಹತ್ತು ಸಮುದಾಯ ಗಳಿವೆ. ನಿಗಮ ಮತ್ತು ಆಯೋಗ ರಚನೆ ವೇಳೆ ಈ ಸಮುದಾಯಗಳನ್ನೂ ಪರಿಗಣಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಶೀಘ್ರ ಮನವಿ ಸಲ್ಲಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಿಶಿಷ್ಟ ಪಂಗಡಗಳು ಮತ್ತು ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಒಳಮೀಸಲಾತಿ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಬೇಕು ಎಂಬ ನಿರ್ಣಯವನ್ನು ಆದಿವಾಸಿ ಬುಡಕಟ್ಟು ಸಮುದಾಯಗಳ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.</p>.<p>ಕರ್ನಾಟಕ ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣ ಸಮಿತಿಯು ಶುಕ್ರವಾರ ಗಾಂಧಿ ಭವನದಲ್ಲಿ ಸಭೆ ಆಯೋಜಿಸಿತ್ತು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. </p>.<p>‘ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಇದ್ದರೂ, ಪ್ರಬಲ ಸಮುದಾಯಗಳಿಗೆ ಮಾತ್ರವೇ ಅದು ಸಿಗುತ್ತಿದೆ. ಆದಿವಾಸಿ ಬುಡಕಟ್ಟು ಸಮುದಾಯಗಳಿಗೂ ಮೀಸಲಾತಿಯ ಲಾಭ ಸಿಗಬೇಕು ಅಂದರೆ, ಒಳಮೀಸಲಾತಿ ಜಾರಿಯಾಗಬೇಕು’ ಎಂದರು.</p>.<p>ಸಭೆಯಲ್ಲಿ ಭಾಗಿಯಾಗಿದ್ದ ವಿವಿಧ ಆದಿವಾಸಿ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳು ಒಳಮೀಸಲಾತಿಗಾಗಿ ರಾಜ್ಯ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರಂತೆ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.</p>.<h2>‘ಪಟ್ಟಿಯಲ್ಲಿಲ್ಲ ಹಲವು ಬುಡಕಟ್ಟು’</h2><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಆದಿವಾಸಿ ನಿಗಮ ಮತ್ತು ಆಯೋಗ ರಚನೆಯನ್ನು ಘೋಷಿಸಿದ್ದಾರೆ. ಈ ನಿಗಮ ರಚನೆ ಸಂಬಂಧ ಜೇನು ಕುರುಬ, ಕೊರಗ, ಇರುಳಿಗ, ಸೋಲಿಗ, ಪಣಿಯ, ಮಲೆಕುಡಿಯ, ಗೌಡಲು, ಹಸಲರು ಸೇರಿ 13 ಬುಡಕಟ್ಟು ಸಮುದಾಯಗಳನ್ನಷ್ಟೇ ಪರಿಗಣಿಸಲಾಗಿದೆ.<br>ಇತರ ಹತ್ತು ಬುಡಕಟ್ಟು ಸಮುದಾಯಗಳನ್ನು ಕೈಬಿಡಲಾಗಿದೆ’ ಎಂದು ಕರ್ನಾಟಕ<br>ಅಲೆಮಾರಿ ಹಕ್ಕಿಪಿಕ್ಕಿ ಬುಡಕಟ್ಟು ಸಂರಕ್ಷಣಾ ಸಮಿತಿ ಅಧ್ಯಕ್ಷ ಜಗ್ಗು ಹೇಳಿದರು. ‘ಆದಿವಾಸಿ ಬುಡಕಟ್ಟು ಸಮುದಾಯಗಳ ಅಡಿಯಲ್ಲಿ ಅರಣ್ಯವಾಸಿ ಹಕ್ಕಿಪಿಕ್ಕಿ, ಹರಿಣಿ ಶಿಕಾರಿ, ವಾಗ್ರಿ ಪಾರ್ಧಿ, ಅಡವಿ ಚಿಂಚಿಲ ಸೇರಿ ಇನ್ನೂ ಹತ್ತು ಸಮುದಾಯ ಗಳಿವೆ. ನಿಗಮ ಮತ್ತು ಆಯೋಗ ರಚನೆ ವೇಳೆ ಈ ಸಮುದಾಯಗಳನ್ನೂ ಪರಿಗಣಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಶೀಘ್ರ ಮನವಿ ಸಲ್ಲಿಸಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>