<p><strong>ಸುವರ್ಣ ವಿಧಾನಸೌಧ (ಬೆಳಗಾವಿ): ‘</strong>ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ಒಂದು ಘಟಕವಾಗಿ ಆರಂಭಿಸಿರುವ ‘ಮೂಲ ಆದಿವಾಸಿ ಅಧ್ಯಯನ ಕೇಂದ್ರ’ಕ್ಕೆ ಅಗತ್ಯ ಅನುದಾನವನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ ಒತ್ತಾಯಿಸಿದರು.</p>.<p>ಈ ಸಂಬಂಧ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿ ಅವರ ಪರವಾಗಿ ಸಭಾನಾಯಕ ಎನ್.ಎಸ್.ಬೋಸರಾಜು ಅವರು ಉತ್ತರ ನೀಡಿದರು. ‘ಈ ಘಟಕಕ್ಕೆ 2015ರಿಂದ ಈವರೆಗೆ ₹1.88 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ರವಿ ಅವರು, ‘ಈ ಬಾರಿ ಬಜೆಟ್ನಲ್ಲಿ ದೊಡ್ಡ ಮೊತ್ತದ ಅನುದಾನ ಘೋಷಿಸಿದ್ದೀರಿ. ಅದನ್ನು ಬಿಡುಗಡೆ ಮಾಡಿ, ₹3 ಕೋಟಿ ಅನುದಾನ ಒದಗಿಸಿ. ಆದಿವಾಸಿ ಸಮುದಾಯಗಳ ಜನರ ಆರೋಗ್ಯ, ಶಿಕ್ಷಣ, ಜೀವನೋಪಾಯಕ್ಕಾಗಿ ಈ ಅನುದಾನದ ಅಗತ್ಯವಿದೆ’ ಎಂದು ಪಟ್ಟು ಹಿಡಿದರು. ಬಿಜೆಪಿಯ ಶಾಂತರಾಮ ಬುಡ್ನ ಸಿದ್ದಿ ಅವರು ದನಿಗೂಡಿಸಿದರು.</p>.<p>ಬೋಸರಾಜು, ‘ನಿಯಮಾನುಸಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು. ಆದರೆ ರವಿ ಅವರು ತಮ್ಮ ಪಟ್ಟು ಬಿಡಲಿಲ್ಲ. ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು, ‘ಇದು ತುಂಬಾ ಗಂಭೀರವಾದ ವಿಚಾರ. ಈ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಚರ್ಚಿಸಿ, ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಿ’ ಎಂದು ಸಭಾನಾಯಕ ಅವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ): ‘</strong>ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ಒಂದು ಘಟಕವಾಗಿ ಆರಂಭಿಸಿರುವ ‘ಮೂಲ ಆದಿವಾಸಿ ಅಧ್ಯಯನ ಕೇಂದ್ರ’ಕ್ಕೆ ಅಗತ್ಯ ಅನುದಾನವನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ ಒತ್ತಾಯಿಸಿದರು.</p>.<p>ಈ ಸಂಬಂಧ ಅವರು ಕೇಳಿದ್ದ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿ ಅವರ ಪರವಾಗಿ ಸಭಾನಾಯಕ ಎನ್.ಎಸ್.ಬೋಸರಾಜು ಅವರು ಉತ್ತರ ನೀಡಿದರು. ‘ಈ ಘಟಕಕ್ಕೆ 2015ರಿಂದ ಈವರೆಗೆ ₹1.88 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ರವಿ ಅವರು, ‘ಈ ಬಾರಿ ಬಜೆಟ್ನಲ್ಲಿ ದೊಡ್ಡ ಮೊತ್ತದ ಅನುದಾನ ಘೋಷಿಸಿದ್ದೀರಿ. ಅದನ್ನು ಬಿಡುಗಡೆ ಮಾಡಿ, ₹3 ಕೋಟಿ ಅನುದಾನ ಒದಗಿಸಿ. ಆದಿವಾಸಿ ಸಮುದಾಯಗಳ ಜನರ ಆರೋಗ್ಯ, ಶಿಕ್ಷಣ, ಜೀವನೋಪಾಯಕ್ಕಾಗಿ ಈ ಅನುದಾನದ ಅಗತ್ಯವಿದೆ’ ಎಂದು ಪಟ್ಟು ಹಿಡಿದರು. ಬಿಜೆಪಿಯ ಶಾಂತರಾಮ ಬುಡ್ನ ಸಿದ್ದಿ ಅವರು ದನಿಗೂಡಿಸಿದರು.</p>.<p>ಬೋಸರಾಜು, ‘ನಿಯಮಾನುಸಾರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು. ಆದರೆ ರವಿ ಅವರು ತಮ್ಮ ಪಟ್ಟು ಬಿಡಲಿಲ್ಲ. ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು, ‘ಇದು ತುಂಬಾ ಗಂಭೀರವಾದ ವಿಚಾರ. ಈ ಬಗ್ಗೆ ಮುಖ್ಯಮಂತ್ರಿ ಅವರ ಜತೆಗೆ ಚರ್ಚಿಸಿ, ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಿ’ ಎಂದು ಸಭಾನಾಯಕ ಅವರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>