<p><strong>ಬೆಂಗಳೂರು</strong>: ‘ಹನಿಗವನಗಳ ಜನಕ, ಚುಟುಕು ಕವಿ ಜರಗನಹಳ್ಳಿ ಶಿವಶಂಕರ್ ಅವರ ನೆನಪಾರ್ಥಕವಾಗಿ ಪ್ರತಿ ವರ್ಷ ಮೇ 5ರಂದು ‘ಹನಿಗವನ ಸಾಹಿತ್ಯ ಪ್ರಶಸ್ತಿ’ ನೀಡಲಾಗುವುದು’ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ ತಿಳಿಸಿದರು.</p>.<p>ಶಿವಶಂಕರ್ ಅವರ ಸಮಾಧಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.</p>.<p>‘ಶ್ರೇಷ್ಠ ಹನಿಗವನ ಕೃತಿಕಾರರಿಗೆ ಈ ಪ್ರಶಸ್ತಿ ಕೊಡಲಾಗುತ್ತದೆ. ಇದು₹5 ಸಾವಿರ ನಗದು ಒಳಗೊಂಡಿರುತ್ತದೆ’ ಎಂದರು.</p>.<p>ಸಾಹಿತಿ ರಾ.ನಂ.ಚಂದ್ರಶೇಖರ್ ‘ಶಿವಶಂಕರ್ ಅವರು ಮಾತೃಹೃದಯಿ. ಅಜಾತ ಶತ್ರು. ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದರು. ತಮ್ಮ ಹನಿಗವನಗಳ ಮೂಲಕ ಪರಿಸರದ ಕುರಿತು ಜಾಗೃತಿ ಮೂಡಿಸಿದ್ದರು. ಸಮಾಜದ ನ್ಯೂನತೆಗಳನ್ನು ತಿದ್ದುತಿದ್ದರು. ಕನ್ನಡಕ್ಕೆ ಅನ್ಯಾಯವಾದಾಗಲೆಲ್ಲಾ ಗಟ್ಟಿ ಧ್ವನಿ ಎತ್ತುತ್ತಿದ್ದರು’ ಎಂದು ಸ್ಮರಿಸಿದರು.</p>.<p>ಶಿವಶಂಕರ್ ಅವರ ಪುತ್ರಿ ಶುಭದ ‘ಅಪ್ಪನ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ವರ್ಷವಿಡೀ ಸಾಹಿತ್ಯದ ಚಟುವಟಿಕೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದರು.</p>.<p>ರಫಾಯಲ್ ರಾಜ್, ಪ.ಗಜಣ್ಣ, ವೀರಭದ್ರಪ್ಪ, ಜಯಣ್ಣ ಹಾಗೂ ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹನಿಗವನಗಳ ಜನಕ, ಚುಟುಕು ಕವಿ ಜರಗನಹಳ್ಳಿ ಶಿವಶಂಕರ್ ಅವರ ನೆನಪಾರ್ಥಕವಾಗಿ ಪ್ರತಿ ವರ್ಷ ಮೇ 5ರಂದು ‘ಹನಿಗವನ ಸಾಹಿತ್ಯ ಪ್ರಶಸ್ತಿ’ ನೀಡಲಾಗುವುದು’ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ.ಚನ್ನೇಗೌಡ ತಿಳಿಸಿದರು.</p>.<p>ಶಿವಶಂಕರ್ ಅವರ ಸಮಾಧಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.</p>.<p>‘ಶ್ರೇಷ್ಠ ಹನಿಗವನ ಕೃತಿಕಾರರಿಗೆ ಈ ಪ್ರಶಸ್ತಿ ಕೊಡಲಾಗುತ್ತದೆ. ಇದು₹5 ಸಾವಿರ ನಗದು ಒಳಗೊಂಡಿರುತ್ತದೆ’ ಎಂದರು.</p>.<p>ಸಾಹಿತಿ ರಾ.ನಂ.ಚಂದ್ರಶೇಖರ್ ‘ಶಿವಶಂಕರ್ ಅವರು ಮಾತೃಹೃದಯಿ. ಅಜಾತ ಶತ್ರು. ಎಲ್ಲರನ್ನು ಪ್ರೀತಿಯಿಂದ ಕಾಣುತ್ತಿದ್ದರು. ತಮ್ಮ ಹನಿಗವನಗಳ ಮೂಲಕ ಪರಿಸರದ ಕುರಿತು ಜಾಗೃತಿ ಮೂಡಿಸಿದ್ದರು. ಸಮಾಜದ ನ್ಯೂನತೆಗಳನ್ನು ತಿದ್ದುತಿದ್ದರು. ಕನ್ನಡಕ್ಕೆ ಅನ್ಯಾಯವಾದಾಗಲೆಲ್ಲಾ ಗಟ್ಟಿ ಧ್ವನಿ ಎತ್ತುತ್ತಿದ್ದರು’ ಎಂದು ಸ್ಮರಿಸಿದರು.</p>.<p>ಶಿವಶಂಕರ್ ಅವರ ಪುತ್ರಿ ಶುಭದ ‘ಅಪ್ಪನ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ವರ್ಷವಿಡೀ ಸಾಹಿತ್ಯದ ಚಟುವಟಿಕೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದರು.</p>.<p>ರಫಾಯಲ್ ರಾಜ್, ಪ.ಗಜಣ್ಣ, ವೀರಭದ್ರಪ್ಪ, ಜಯಣ್ಣ ಹಾಗೂ ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>