<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ಶಿಕ್ಷಕರಿಗೆ ಹಾಗೂ ಅಂಗನವಾಡಿ ನೌಕರರಿಗೆ ತರಬೇತಿ ನೀಡಿ ಮುಂದಿನ ವರ್ಷ ಆಯ್ದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಮಹಾಂತೇಶ ಕೌಜಲಗಿ ಪ್ರಶ್ನೆಗೆ ಉತ್ತರಿಸಿ, ’ಈ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು‘ ಎಂದರು.</p>.<p>’ಆರಂಭಿಕ ಹಂತದಲ್ಲಿ ಪೂರ್ವ ಪ್ರಾಥಮಿಕ ಹಂತದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಂಗನವಾಡಿ ನೌಕರರಿಗೆ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿನ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಸ್ಥಿತಿಗತಿ ವರದಿ ಸಿದ್ಧಪಡಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ವರದಿ ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು‘ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣ ವಿಧಾನಸೌಧ):</strong> ಶಿಕ್ಷಕರಿಗೆ ಹಾಗೂ ಅಂಗನವಾಡಿ ನೌಕರರಿಗೆ ತರಬೇತಿ ನೀಡಿ ಮುಂದಿನ ವರ್ಷ ಆಯ್ದ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಮಹಾಂತೇಶ ಕೌಜಲಗಿ ಪ್ರಶ್ನೆಗೆ ಉತ್ತರಿಸಿ, ’ಈ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು‘ ಎಂದರು.</p>.<p>’ಆರಂಭಿಕ ಹಂತದಲ್ಲಿ ಪೂರ್ವ ಪ್ರಾಥಮಿಕ ಹಂತದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಅಂಗನವಾಡಿ ನೌಕರರಿಗೆ ತರಬೇತಿ ನೀಡಲಾಗುತ್ತದೆ. ರಾಜ್ಯದಲ್ಲಿನ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಸ್ಥಿತಿಗತಿ ವರದಿ ಸಿದ್ಧಪಡಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಈ ವರದಿ ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು‘ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>