<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಪಂಚಾಯತ್ ರಾಜ್ ಆಯುಕ್ತರ ಅಧ್ಯಕ್ಷತೆಯ ಸಮಿತಿ ವರದಿ ನೀಡಿದ ತಕ್ಷಣ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಯ ಸೇವಾ ವಿಷಯಗಳ ಬೇಡಿಕೆ ಈಡೇರಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಬಿಜೆಪಿಯ ಎನ್. ರವಿಕುಮಾರ್, ಡಿ.ಎಸ್. ಅರುಣ್, ಚಿದಾನಂದಗೌಡ, ಧನಂಜಯ ಸರ್ಜಿ, ಕಾಂಗ್ರೆಸ್ನ ಮಂಜುನಾಥ ಭಂಡಾರಿ ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಮಿತಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಕೇರಳ ಮಾದರಿಯಲ್ಲಿ ಮಾಸಿಕ ಗೌರವಧನ ನೀಡಲು ಸಾಧ್ಯವಿಲ್ಲ. ಅಲ್ಲಿ 942 ಪಂಚಾಯಿತಿಗಳು ಇದ್ದರೆ ರಾಜ್ಯದಲ್ಲಿ 5,950 ಇವೆ. 95 ಸಾವಿರಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಹಾಗಾಗಿ, ಎರಡೂ ರಾಜ್ಯಗಳ ಹೋಲಿಕೆ ಸಾಧ್ಯವಿಲ್ಲ ಎಂದು ಹೇಳಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿ ವಿವಾದ ಕೋರ್ಟ್ನಲ್ಲಿದೆ. ತೀರ್ಪು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳಿಗೆ ಇಲಾಖಾ ಯೋಜನೆಗಳ ಅನುಷ್ಠಾನ ಜವಾಬ್ದಾರಿ ನೀಡುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ನಿರ್ಧರಣೆಗೆ ಒಳಪಟ್ಟ ಎಲ್ಲ ಭೂಮಿ ಮತ್ತು ಕಟ್ಟಡಗಳ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪತ್ತೆ ಮಾಡಿದ 1.41 ಕೋಟಿ ಆಸ್ತಿಯನ್ನು ಪಂಚತಂತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಪಂಚಾಯತ್ ರಾಜ್ ಆಯುಕ್ತರ ಅಧ್ಯಕ್ಷತೆಯ ಸಮಿತಿ ವರದಿ ನೀಡಿದ ತಕ್ಷಣ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಯ ಸೇವಾ ವಿಷಯಗಳ ಬೇಡಿಕೆ ಈಡೇರಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಬಿಜೆಪಿಯ ಎನ್. ರವಿಕುಮಾರ್, ಡಿ.ಎಸ್. ಅರುಣ್, ಚಿದಾನಂದಗೌಡ, ಧನಂಜಯ ಸರ್ಜಿ, ಕಾಂಗ್ರೆಸ್ನ ಮಂಜುನಾಥ ಭಂಡಾರಿ ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಮಿತಿಗೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಕೇರಳ ಮಾದರಿಯಲ್ಲಿ ಮಾಸಿಕ ಗೌರವಧನ ನೀಡಲು ಸಾಧ್ಯವಿಲ್ಲ. ಅಲ್ಲಿ 942 ಪಂಚಾಯಿತಿಗಳು ಇದ್ದರೆ ರಾಜ್ಯದಲ್ಲಿ 5,950 ಇವೆ. 95 ಸಾವಿರಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಹಾಗಾಗಿ, ಎರಡೂ ರಾಜ್ಯಗಳ ಹೋಲಿಕೆ ಸಾಧ್ಯವಿಲ್ಲ ಎಂದು ಹೇಳಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿ ವಿವಾದ ಕೋರ್ಟ್ನಲ್ಲಿದೆ. ತೀರ್ಪು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳಿಗೆ ಇಲಾಖಾ ಯೋಜನೆಗಳ ಅನುಷ್ಠಾನ ಜವಾಬ್ದಾರಿ ನೀಡುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ನಿರ್ಧರಣೆಗೆ ಒಳಪಟ್ಟ ಎಲ್ಲ ಭೂಮಿ ಮತ್ತು ಕಟ್ಟಡಗಳ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪತ್ತೆ ಮಾಡಿದ 1.41 ಕೋಟಿ ಆಸ್ತಿಯನ್ನು ಪಂಚತಂತ್ರದಲ್ಲಿ ಅಳವಡಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>