ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಜಿಲ್ಲೆಗೆ ಎಷ್ಟು ಅನುದಾನ? ಬಜೆಟ್‌ನಲ್ಲಿ ಸಮತೋಲನದ ಸರ್ಕಸ್

ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಮೇಲೆ ಮಮತೆ
Last Updated 9 ಫೆಬ್ರುವರಿ 2019, 1:24 IST
ಅಕ್ಷರ ಗಾತ್ರ

ಬೆಂಗಳೂರು:ಮೈತ್ರಿ ಸರ್ಕಾರದ ಮೊದಲ ಬಜೆಟ್‌ನಲ್ಲಿ ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಮೇಲೆ ಮಮತೆ’ ತೋರಿಸಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಈ ಬಾರಿ ಎಲ್ಲ ಜಿಲ್ಲೆಗಳಿಗೆ ಅನುದಾನ ನೀಡಲು ಯತ್ನಿಸಿದ್ದಾರೆ. ಆದರೆ, ಕೆಲವು ಜಿಲ್ಲೆಗಳಿಗೆ ನೀಡಿರುವ ಅನುದಾನ ಕಡಿಮೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ

* ರಾಮನಗರ

ಖಾಸಗಿ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣಾ ಘಟಕಕ್ಕೆ ₹ 10 ಕೋಟಿ

ಚನ್ನಪಟ್ಟಣದ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್‍ನ ಫಿಲೇಚರ್ ಕಾರ್ಖಾನೆ ಆವರಣದ ಎಂಪೋರಿಯಂನಲ್ಲಿ ಕರ್ನಾಟಕದ ರೇಷ್ಮೆ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲು ₹ 10 ಕೋಟಿ

ರೇಷ್ಮೆ ಘಟಕ ಬಲವರ್ಧನೆಗೆ ₹ 5 ಕೋಟಿ

ಸಿದ್ಧಗಂಗಾಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪಾರಂಪರಿಕ ಕೇಂದ್ರ ಸ್ಥಾಪಿಸಲು ₹ 25 ಕೋಟಿ

* ಹಾಸನ

ಹೊಸ ತಾಂತ್ರಿಕ ವಿಶ್ವವಿದ್ಯಾಲಯ

ಹೊಳೆನರಸೀಪುರದಲ್ಲಿ ಕೆರೆ ತುಂಬಿಸುವ ಯೋಜನೆಗೆ ₹ 50 ಕೋಟಿ

ಹಾಸನ - ಅರಸೀಕೆರೆಯಲ್ಲಿ ಉಪ ಕಾರಾಗೃಹ ನಿರ್ಮಾಣಕ್ಕೆ ₹ 30 ಕೋಟಿ

* ಮಂಡ್ಯ
ಇಸ್ರೇಲ್ ಮಾದರಿ ಕೃಷಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲು ₹ 10 ಕೋಟಿ

ಮೇಲುಕೋಟೆ ಸಮಗ್ರ ಅಭಿವೃದ್ಧಿ ₹ 5 ಕೋಟಿ

ಸಮಗ್ರ ಕೈಗಾರಿಕಾ ಅಭಿವೃದ್ಧಿ ₹ 50 ಕೋಟಿ

ಪಾಂಡವಪುರ ತಾಲ್ಲೂಕಿನ ಬಳಘಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬುವ ಕಾಮಗಾರಿಗೆ ₹ 100ಕೋಟಿ

* ಬೀದರ್

ಜಿಲ್ಲೆಯ ಎಲ್ಲಾ ಕೆರೆಗಳ ಸುಧಾರಣೆಗೆ ₹ 300 ಕೋಟಿ

ನಾಗರಿಕ ವಿಮಾನ ನಿಲ್ದಾಣ ₹ 32 ಕೋಟಿ

ಪ್ರತ್ಯೇಕ ವಿಶಿಷ್ಟ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ₹ 50 ಕೋಟಿ

ಗುರುನಾನಕ್ ಜೀರಾ ಗುರುದ್ವಾರಕ್ಕೆ ₹ 10 ಕೋಟಿ

* ಕೋಲಾರ

ಟೊಮೆಟೋ ಉತ್ಪನ್ನಗಳ ಸಂಸ್ಕರಣಾ ಘಟಕ ಸ್ಥಾಪನೆಗೆ ₹ 20 ಕೋಟಿ

ಶಿವಾರಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ ₹ 10 ಕೋಟಿ

* ಉಡುಪಿ
ಜಟ್ಟಿ ಹಾಗೂ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ₹ 15 ಕೋಟಿ

ಕಾರ್ಕಳದಲ್ಲಿ ಎಣ್ಣೆ ಹೊಳೆ ಯೋಜನೆಗೆ ₹ 40 ಕೋಟಿ

ಕೆರೆ ತುಂಬಿಸುವ ಯೋಜನೆಗೆ ₹ 40 ಕೋಟಿ

* ಬಳ್ಳಾರಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲ ಮಟ್ಟದ ಕರ್ಮಚಾರಿಗಳಿಗೆ ತರಬೇತಿ ನೀಡಲು ರಾಜ್ಯಮಟ್ಟದ ತರಬೇತಿ ಕೇಂದ್ರ

ಕಂಪ್ಲಿ ನೀರಾವರಿ ಯೋಜನೆಗೆ ₹ 75 ಕೋಟಿ

ಹಂಪಿಯಲ್ಲಿ ‌‘ಹಂಪಿ ವ್ಯಾಖ್ಯಾನ ಕೇಂದ್ರ’ ಸ್ಥಾಪಿಸಲು ₹ 1 ಕೋಟಿ

* ಗದಗ
ಮೆಣಸು, ಹೆಸರುಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ₹ 50 ಕೋಟಿ

* ಧಾರವಾಡ

ಹುಬ್ಬಳ್ಳಿಯಲ್ಲಿ ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ತೃತೀಯ ಹಂತದ ಕ್ಯಾನ್ಸರ್ ಕೇಂದ್ರ ಮೇಲ್ದರ್ಜೆಗೇರಿಸಲು ₹ 4.5 ಕೋಟಿ

ಅಂತರರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣಾ ಘಟಕ

ಹುಬ್ಬಳ್ಳಿಯಲ್ಲಿ ಮೆಣಸು, ಹೆಸರುಕಾಳು ಸಂಸ್ಕರಣಾ ಘಟಕ ₹ 50 ಕೋಟಿ ಅನುದಾನ

* ಶಿವಮೊಗ್ಗ

ಹೊಳೆ ಹನಸವಾಡಿ ಗ್ರಾಮದ ಹತ್ತಿರ ತುಂಗಾ ನದಿಯಿಂದ ಏತ ನೀರಾವರಿ ಮೂಲಕ ಎಂಟು ಕೆರೆಗಳಿಗೆ
ನೀರು ತುಂಬಿಸಲು ₹ 13 ಕೋಟಿ

ಜಿಲ್ಲಾ ಆಸ್ಪತ್ರೆಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ಮಂಗನ ಕಾಯಿಲೆಯ ಸಂಶೋಧನೆ ಮತ್ತು ಚಿಕಿತ್ಸಾ ಘಟಕ

* ಕೊಡಗು

ವಿರಾಜಪೇಟೆಯ ಬಾಳುಗೋಡದಲ್ಲಿರುವ ಕೊಡವ ಸಮಾಜದ ಹಾಕಿ ಕ್ರೀಡಾಂಗಣ ಅಭಿವೃದ್ಧಿಗೆ ₹ 5 ಕೋಟಿ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ₹ 100 ಕೋಟಿ

* ತುಮಕೂರು

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ₹ 60 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ

ಹೊಸ ಉದ್ದಿಮೆಗಳ ಪ್ರೋತ್ಸಾಹಕ್ಕೆ ಕೆ–ಟೆಕ್‌ ನಾವೀನ್ಯತೆ ಕೇಂದ್ರ ಸ್ಥಾಪಿಸಲು ₹ 7 ಕೋಟಿ

ತಿಪಟೂರಿನಲ್ಲಿ ಹಾಸ್ಯ ಚಕ್ರವರ್ತಿ ದಿ. ನರಸಿಂಹರಾಜು ಅವರ ಹೆಸರಿನಲ್ಲಿ ಸ್ಮಾರಕ ಸಭಾ ಮಂದಿರ ನಿರ್ಮಾಣಕ್ಕೆ ₹ 2 ಕೋಟಿ

* ಬಾಗಲಕೋಟೆ

ತೇರದಾಳ ತಾಲ್ಲೂಕು ಘೋಷಣೆ

ಬಾದಾಮಿ ಪ್ರವಾಸಿ ತಾಣ, ಕರಕುಶಲ ಮಾರುಕಟ್ಟೆ ಅಭಿವೃದ್ಧಿಗೆ ₹ 25 ಕೋಟಿ

* ಮೈಸೂರು

ಪ್ರವಾಸಿ ತಾಣಗಳ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿಯ ಡಬಲ್ ಡೆಕ್ಕರ್‌ ಬಸ್ ಸೇವೆ ಆರಂಭಿಸಲು ₹ 5 ಕೋಟಿ‌

* ವಿಜಯಪುರ

‘ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ’ ಸ್ಥಾಪಿಸಲು ₹ 1 ಕೋಟಿ

100 ಹಾಸಿಗೆಗಳ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸಲು ₹ 40 ಕೋಟಿ

ಪ್ರತ್ಯೇಕ ವಿಶಿಷ್ಟ ಕೇಂದ್ರ ಕಾರಾಗೃಹ ₹ 50 ಕೋಟಿ

* ಚಿಕ್ಕಮಗಳೂರು

ಕಳಸ ತಾಲ್ಲೂಕು ರಚನೆ

ಜಿಲ್ಲಾ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ₹ 50 ಕೋಟಿ

ಹೊಸ ಬಾಲಕಿಯರ ಬಾಲಮಂದಿರ

* ಚಿಕ್ಕಬಳ್ಳಾಪುರ

ಚೇಳೂರು ತಾಲ್ಲೂಕು ರಚನೆ

* ಚಾಮರಾಜನಗರ

‌ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಆಧುನೀಕರಣಕ್ಕೆ ₹ 2 ಕೋಟಿ

* ಹಾವೇರಿ

ರೇಷ್ಮೆ ಮಾರುಕಟ್ಟೆ ಆಧುನೀಕರಣ ಮತ್ತು ಬಲವರ್ಧನೆಗೆ ₹ 10 ಕೋಟಿ

* ರಾಯಚೂರು

ಹಾರೋಹಳ್ಳಿ ತಾಲ್ಲೂಕು ರಚನೆ

ಕೃಷಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪನೆ ₹ 10 ಕೋಟಿ

* ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆ ಮೇಲ್ದರ್ಜೆಗೆ ₹ 10 ಕೋಟಿ

* ದಕ್ಷಿಣ ಕನ್ನಡ

ಪಣಂಬೂರು, ಸಸಿಹಿತ್ಲು ಕಡಲತೀರದ ಅಭಿವೃದ್ಧಿಗೆ ₹ 7 ಕೋಟಿ

* ಉತ್ತರ ಕನ್ನಡ

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹಾಗೂ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ₹ 150 ಕೋಟಿ

* ಕಲಬುರ್ಗಿ

ಶ್ರೀ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಯ 300 ಹಾಸಿಗೆ ಸಾಮರ್ಥ್ಯದ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆ

* ಬೆಂಗಳೂರು
117 ತ್ಯಾಜ್ಯ ನೀರು ಸಂಸ್ಕರಣಾ ಘಟಕ ₹ 8,015 ಕೋಟಿ

ವಿಮಾನ ನಿಲ್ದಾಣ ಮಾರ್ಗ ನಿರ್ಮಾಣ ₹ 16, 579 ಕೋಟಿ

ಹಲಸೂರಿನ ಗುರುದ್ವಾರಕ್ಕೆ ₹ 25 ಕೋಟಿ

ಸಂವಿಧಾನ ಮ್ಯೂಸಿಯಂ ಸ್ಥಾಪನೆ ₹ 20 ಕೋಟಿ

ಎಲಿವೇಟೆಡ್ ಕಾರಿಡಾರ್ ಯೋಜನೆ ₹ 1000 ಕೋಟಿ

ಸೈಬರ್ ಎಕಾನಾಮಿಕ್ ನಾರ್ಕೋಟಿಕ್ ವಿಂಗ್ ಆರಂಭಿಸಲು ₹ 4 ಕೋಟಿ

* ಇವನ್ನೂ ಓದಿ...

*ಸಣ್ಣ ನೀರಾವರಿ, ಅಂತರ್ಜಲ ವೃದ್ಧಿಗೆ ಆದ್ಯತೆ

* ‘ಉಕ್ಕುವ ಹಾಲಿಗೆ ನೀರು ಚಿಮುಕಿಸಿದಂತೆ’

*ಅನ್ನದಾತನಿಗೆ ಹತ್ತಾರು ಯೋಜನೆ, ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ಯೋಜನೆ

*ಬಜೆಟ್‌: ಯಾರು ಏನಂತಾರೆ?

*ಉದ್ಯಮ ವಲಯಕ್ಕೆ ಉತ್ತೇಜಕ ಬುತ್ತಿ

*ಬಜೆಟ್: ಪರಿಶಿಷ್ಟ ವರ್ಗಕ್ಕೆ ಭರ್ಜರಿ ಕೊಡುಗೆ

*ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ: ಯಡಿಯೂರಪ್ಪ

*ಸಾಲ ಮನ್ನಾಕ್ಕೆ ಇನ್ನೂ ಹಣ ಕೊಡುವೆ: ಕುಮಾರಸ್ವಾಮಿ

*ಬೆಂಗಳೂರೇ ಮೊದಲು; ಉಳಿದವು ನಂತರ...

*ಪ್ರತಿಭಟನೆ ಮಧ್ಯೆಯೇ ಬಜೆಟ್ ಭಾಷಣ

*ಬಜೆಟ್‌ನಲ್ಲಿ ಜಿಲ್ಲಾವಾರು ಹಂಚಿಕೆ; ಸಮತೋಲನದ ಸರ್ಕಸ್

*ಬರ ಪರಿಸ್ಥಿತಿ: ಆರ್ಥಿಕ ವೃದ್ಧಿ ದರ ಕುಸಿತ

*ಮತ ಫಸಲಿಗಾಗಿ ಕುಮಾರ ಬಿತ್ತನೆ

*ವಿಶ್ವವಿಖ್ಯಾತ ತಾಣವಾಗಿ ಬಾದಾಮಿ ಅಭಿವೃದ್ಧಿ

*ಸಹಸ್ರ ಶಾಲೆಗಳ ಸ್ಥಾಪನೆ

*ಸ್ವಾಮೀಜಿ ಊರುಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳು

*ಹೊಸ ಕ್ರೀಡಾ ವಸತಿ ನಿಲಯಗಳ ಘೋಷಣೆ

*ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಆದ್ಯತೆ

*‘ಮಾತೃಶ್ರೀ’ ಯೋಜನೆ ಸಹಾಯಧನ ಹೆಚ್ಚಳ

*ಆನ್‌ಲೈನ್‌ ಮೂಲಕ ಸಿಇಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್‌ ಅಂಕಪಟ್ಟಿ

*ಬಜೆಟ್‌ನಲ್ಲಿ ಮಠಮಾನ್ಯಗಳ ತೃಪ್ತಿಪಡಿಸುವ ಯತ್ನ

*ಬಜೆಟ್‌: ಯಾರು ಏನಂತಾರೆ?

*ಚಲನಶೀಲ ಬೆಂಗಳೂರಿಗೆ ‘ಮತ್ತೊಂದು ಕಾವೇರಿ’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT