<p><strong>ಬೆಂಗಳೂರು:</strong> ಕಂದಾಯ ಇಲಾಖೆಯ ಅಧಿಕಾರಿಗಳನ್ನು ಮಾತ್ರ ತಹಶೀಲ್ದಾರ್ ಆಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕೆಎಎಸ್ ಅಧಿಕಾರಿಗಳ ಸಂಘವು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಪತ್ರ ಬರೆದಿದೆ.</p>.<p>‘ವಿವಿಧ ಸಚಿವಾಲಯದ ಸೆಕ್ಷನ್ ಅಧಿಕಾರಿಗಳು, ಅಧೀನ ಕಾರ್ಯದರ್ಶಿಗಳು, ಇತರ ಶ್ರೇಣಿಯ ಅಧಿಕಾರಿಗಳು ಅಲ್ಲದೆ, ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ವಿವಿಧ ರೀತಿಯ ಪ್ರಭಾವ ಬೀರಿ ತಹಶೀಲ್ದಾರ್ ಆಗಿ ನೇಮಕ ಹೊಂದಿದ್ದಾರೆ. ಈ ಅಧಿಕಾರಿಗಳಿಗೆ ಕಂದಾಯ ಇಲಾಖೆಯ ಪೂರ್ಣ ಮಾಹಿತಿ ಇರುವುದಿಲ್ಲ. ದಕ್ಷತೆಯಿಂದ ಕೆಲಸ ನಿರ್ವಹಿಸಲು ವಿಫಲರಾಗುತ್ತಿದ್ದಾರೆ. ತಾಲ್ಲೂಕು ಕಚೇರಿಯ ಅಧೀನ ಅಧಿಕಾರಿಗಳ ನಿರ್ದೇಶನದಂತೆ ಕೆಲಸ ನಿರ್ವಹಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಇದರಿಂದ ಆಡಳಿತ ವ್ಯವಸ್ಥೆ ಕುಸಿಯುತ್ತಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.</p>.<p>‘ಸದ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಕಂದಾಯ ಇಲಾಖೆಯ ಹಾಗೂ ಚುನಾವಣಾ ಕೆಲಸಗಳ ಅನುಭವ ಇರುವ ಕಂದಾಯ ಇಲಾಖೆಯ ತಹಶೀಲ್ದಾರ್ಗಳ ನೇಮಕಾತಿ ಅತ್ಯವಶ್ಯಕ. ರಾಜ್ಯದಲ್ಲಿ 227 ತಾಲ್ಲೂಕುಗಳಿದ್ದು, ಬೇರೆ ಇಲಾಖೆಯ ಅಧಿಕಾರಿಗಳು ತಹಶೀಲ್ದಾರ್ಗಳಾಗಿ ಕೆಲಸ ಮಾಡುತ್ತಿರುವುದರಿಂದ ನಮಗೆ ಅನ್ಯಾಯವಾಗುತ್ತಿದೆ. ಈ ಅಧಿಕಾರಿಗಳನ್ನು ಮೂಲ ಇಲಾಖೆಗೆ ವಾಪಸು ಕಳುಹಿಸಬೇಕು’ ಎಂದು ಒತ್ತಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಂದಾಯ ಇಲಾಖೆಯ ಅಧಿಕಾರಿಗಳನ್ನು ಮಾತ್ರ ತಹಶೀಲ್ದಾರ್ ಆಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕೆಎಎಸ್ ಅಧಿಕಾರಿಗಳ ಸಂಘವು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಪತ್ರ ಬರೆದಿದೆ.</p>.<p>‘ವಿವಿಧ ಸಚಿವಾಲಯದ ಸೆಕ್ಷನ್ ಅಧಿಕಾರಿಗಳು, ಅಧೀನ ಕಾರ್ಯದರ್ಶಿಗಳು, ಇತರ ಶ್ರೇಣಿಯ ಅಧಿಕಾರಿಗಳು ಅಲ್ಲದೆ, ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ವಿವಿಧ ರೀತಿಯ ಪ್ರಭಾವ ಬೀರಿ ತಹಶೀಲ್ದಾರ್ ಆಗಿ ನೇಮಕ ಹೊಂದಿದ್ದಾರೆ. ಈ ಅಧಿಕಾರಿಗಳಿಗೆ ಕಂದಾಯ ಇಲಾಖೆಯ ಪೂರ್ಣ ಮಾಹಿತಿ ಇರುವುದಿಲ್ಲ. ದಕ್ಷತೆಯಿಂದ ಕೆಲಸ ನಿರ್ವಹಿಸಲು ವಿಫಲರಾಗುತ್ತಿದ್ದಾರೆ. ತಾಲ್ಲೂಕು ಕಚೇರಿಯ ಅಧೀನ ಅಧಿಕಾರಿಗಳ ನಿರ್ದೇಶನದಂತೆ ಕೆಲಸ ನಿರ್ವಹಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಇದರಿಂದ ಆಡಳಿತ ವ್ಯವಸ್ಥೆ ಕುಸಿಯುತ್ತಿದೆ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.</p>.<p>‘ಸದ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಲಿದ್ದು, ಕಂದಾಯ ಇಲಾಖೆಯ ಹಾಗೂ ಚುನಾವಣಾ ಕೆಲಸಗಳ ಅನುಭವ ಇರುವ ಕಂದಾಯ ಇಲಾಖೆಯ ತಹಶೀಲ್ದಾರ್ಗಳ ನೇಮಕಾತಿ ಅತ್ಯವಶ್ಯಕ. ರಾಜ್ಯದಲ್ಲಿ 227 ತಾಲ್ಲೂಕುಗಳಿದ್ದು, ಬೇರೆ ಇಲಾಖೆಯ ಅಧಿಕಾರಿಗಳು ತಹಶೀಲ್ದಾರ್ಗಳಾಗಿ ಕೆಲಸ ಮಾಡುತ್ತಿರುವುದರಿಂದ ನಮಗೆ ಅನ್ಯಾಯವಾಗುತ್ತಿದೆ. ಈ ಅಧಿಕಾರಿಗಳನ್ನು ಮೂಲ ಇಲಾಖೆಗೆ ವಾಪಸು ಕಳುಹಿಸಬೇಕು’ ಎಂದು ಒತ್ತಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>