ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ‘ಶತಮಾನೋತ್ಸವ ದತ್ತಿ ಪ್ರಶಸ್ತಿ’ಗೆ ಕಸಾಪ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಸಾಧಕರನ್ನು ಆಯ್ಕೆ ಮಾಡಿದೆ. ‘ಶತಮಾನೋತ್ಸವ ದತ್ತಿ ಪ್ರಶಸ್ತಿ’ ₹ 50 ಸಾವಿರ ನಗದು ಒಳಗೊಂಡಿದೆ.
ಕಸಾಪ ಸಿಬ್ಬಂದಿಗೆ ಮೀಸಲಿಟ್ಟಿರುವ ‘ಎನ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ’ಗೆ ಎಚ್.ಮಂಜುಳಾ, ‘ವಿ.ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿ’ಗೆ ಎನ್.ಕೃಷ್ಣಮೂರ್ತಿ, ಎ.ಅಮರನಾಥ್, ನಾ.ಚಕ್ರಪಾಣಿ ಹಾಗೂ ಕೆ.ರಾಮೇಗೌಡ ಆಯ್ಕೆಯಾಗಿದ್ದಾರೆ.
ಮೇ 5ರಂದು ನಡೆಯುವ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಗುವುದು ಎಂದು ಪ್ರಕಟಣೆ ತಿಳಿಸಿದೆ.