<p>ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕಾರ್ಯಕಾರಿ ಸಮಿತಿ ಅಧಿಕಾರದ ಅವಧಿ ವಿಸ್ತರಣೆ ನಿರ್ಣಯ ವಿರೋಧಿಸಿ ಹೈಕೋರ್ಟ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಅರ್ಜಿದಾರರು ಹಿಂಪಡೆದಿದ್ದು, ಅಧ್ಯಕ್ಷರ ಚುನಾವಣೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ.</p>.<p>ಹಾಲಿ ಕಾರ್ಯಕಾರಿ ಸಮಿತಿ ಬೈಲಾಗೆ ತಿದ್ದುಪಡಿ ತಂದು ಅಧಿಕಾರವಧಿಯನ್ನು 3 ರಿಂದ 5 ವರ್ಷಗಳಿಗೆ ವಿಸ್ತರಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ<br />ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ. ರಾಮಕೃಷ್ಣೇಗೌಡ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.</p>.<p>ತಿದ್ದುಪಡಿ ಪ್ರಕಾರ ಅಧ್ಯಕ್ಷರ ಅಧಿಕಾರದ ಅವಧಿ 2021ರ ಮಾರ್ಚ್ಗೆ ಅಂತ್ಯವಾಗಲಿದೆ. ಆದರೆ, ಬೈಲಾದ ಪ್ರಕಾರ ಅನಿವಾರ್ಯ ಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿಯ ಅವಧಿಯನ್ನು 6 ತಿಂಗಳು ವಿಸ್ತರಿಸಿಕೊಳ್ಳಲು ಸಮಿತಿಗೆ ಅವಕಾಶವಿದೆ.</p>.<p>‘ಅರ್ಜಿಯನ್ನು ಪರಿಷತ್ತಿನ ಹಿತದೃಷ್ಟಿ<br />ಯಿಂದ ಹಿಂದಕ್ಕೆ ಪಡೆದುಕೊಂಡಿದ್ದೇನೆ. ಈಗ ಚುನಾವಣೆಗೆ ದಾರಿ ಸುಗಮ<br />ವಾಗಿದೆ. ಕೂಡಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಕೋ.ವೆಂ. ರಾಮಕೃಷ್ಣೇಗೌಡ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಕಾರ್ಯಕಾರಿ ಸಮಿತಿ ಅಧಿಕಾರದ ಅವಧಿ ವಿಸ್ತರಣೆ ನಿರ್ಣಯ ವಿರೋಧಿಸಿ ಹೈಕೋರ್ಟ್ಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಅರ್ಜಿದಾರರು ಹಿಂಪಡೆದಿದ್ದು, ಅಧ್ಯಕ್ಷರ ಚುನಾವಣೆಗೆ ಇದ್ದ ತೊಡಕು ನಿವಾರಣೆಯಾದಂತಾಗಿದೆ.</p>.<p>ಹಾಲಿ ಕಾರ್ಯಕಾರಿ ಸಮಿತಿ ಬೈಲಾಗೆ ತಿದ್ದುಪಡಿ ತಂದು ಅಧಿಕಾರವಧಿಯನ್ನು 3 ರಿಂದ 5 ವರ್ಷಗಳಿಗೆ ವಿಸ್ತರಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ<br />ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೋ.ವೆಂ. ರಾಮಕೃಷ್ಣೇಗೌಡ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.</p>.<p>ತಿದ್ದುಪಡಿ ಪ್ರಕಾರ ಅಧ್ಯಕ್ಷರ ಅಧಿಕಾರದ ಅವಧಿ 2021ರ ಮಾರ್ಚ್ಗೆ ಅಂತ್ಯವಾಗಲಿದೆ. ಆದರೆ, ಬೈಲಾದ ಪ್ರಕಾರ ಅನಿವಾರ್ಯ ಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿಯ ಅವಧಿಯನ್ನು 6 ತಿಂಗಳು ವಿಸ್ತರಿಸಿಕೊಳ್ಳಲು ಸಮಿತಿಗೆ ಅವಕಾಶವಿದೆ.</p>.<p>‘ಅರ್ಜಿಯನ್ನು ಪರಿಷತ್ತಿನ ಹಿತದೃಷ್ಟಿ<br />ಯಿಂದ ಹಿಂದಕ್ಕೆ ಪಡೆದುಕೊಂಡಿದ್ದೇನೆ. ಈಗ ಚುನಾವಣೆಗೆ ದಾರಿ ಸುಗಮ<br />ವಾಗಿದೆ. ಕೂಡಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಕೋ.ವೆಂ. ರಾಮಕೃಷ್ಣೇಗೌಡ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>