<p><strong>ಬೆಂಗಳೂರು: </strong>ವಿದ್ಯುತ್ ದರ ಹೆಚ್ಚಳ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳುವಂತೆಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಮನವಿ ಮಾಡಿದೆ.</p>.<p>ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿಯಾಗಿ ಮನವಿ ಸಲ್ಲಿಸಿತು.</p>.<p>‘ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 20 ಪೈಸೆಯಿಂದ 40 ಪೈಸೆಗೆ ಹೆಚ್ಚಿಸಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಅನುಮತಿ ನೀಡಿರುವುದರಿಂದಸಣ್ಣ ಮತ್ತು ಮಧ್ಯಮ (ಎಂಎಸ್ಎಂಇ) ಕೈಗಾರಿಕೆಗಳು ಆಘಾತಕ್ಕೊಳಗಾಗಿವೆ. ಕೊರೊನಾದಿಂದ ನಲುಗಿ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೈಗಾರಿಕೆಗಳಿಗೆ ಈ ನಿರ್ಧಾರ ಮಾರಕವಾಗಲಿದೆ' ಎಂದು ಕೆ.ಬಿ.ಅರಸಪ್ಪ ಕಳವಳ ವ್ಯಕ್ತಪಡಿಸಿದರು.</p>.<p>‘ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕೈಗಾರಿಕೆಗಳ ಸ್ಥಳಾಂತರ ಕಷ್ಟಸಾಧ್ಯ. ಸದರಿ ಕೈಗಾರಿಕೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸುವ ಕುರಿತು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು' ಎಂದರು.</p>.<p>‘ಕೈಗಾರಿಕಾ ನೀತಿ ಜಾರಿಗೆ ಬಂದು ಎರಡು ತಿಂಗಳು ಕಳೆದಿದ್ದರೂ, ಸಂಬಂಧಪಟ್ಟ ಇಲಾಖೆಗಳು ಅಧಿಸೂಚನೆ ಹೊರಡಿ<br />ಸಿಲ್ಲ. ಇದರಿಂದ ಕೈಗಾರಿಕಾ ನೀತಿಯಲ್ಲಿ ಜಾರಿಗೊಳಿಸಲಾದ ರಿಯಾಯಿತಿ ಮತ್ತು ಪ್ರಯೋಜನಗಳನ್ನು ಕೈಗಾರಿಕೋದ್ಯಮಿ<br />ಗಳು ಪಡೆಯಲು ಸಾಧ್ಯವಾಗುತ್ತಿಲ್ಲ. ಕಂದಾಯ, ವಿದ್ಯುತ್ ಮತ್ತು ಇತರೆ ಇಲಾಖೆಗಳು ತ್ವರಿತವಾಗಿ ಅಧಿಸೂಚನೆಗಳನ್ನು ಹೊರಡಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿದ್ಯುತ್ ದರ ಹೆಚ್ಚಳ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳುವಂತೆಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಮನವಿ ಮಾಡಿದೆ.</p>.<p>ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿಯಾಗಿ ಮನವಿ ಸಲ್ಲಿಸಿತು.</p>.<p>‘ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 20 ಪೈಸೆಯಿಂದ 40 ಪೈಸೆಗೆ ಹೆಚ್ಚಿಸಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ಅನುಮತಿ ನೀಡಿರುವುದರಿಂದಸಣ್ಣ ಮತ್ತು ಮಧ್ಯಮ (ಎಂಎಸ್ಎಂಇ) ಕೈಗಾರಿಕೆಗಳು ಆಘಾತಕ್ಕೊಳಗಾಗಿವೆ. ಕೊರೊನಾದಿಂದ ನಲುಗಿ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೈಗಾರಿಕೆಗಳಿಗೆ ಈ ನಿರ್ಧಾರ ಮಾರಕವಾಗಲಿದೆ' ಎಂದು ಕೆ.ಬಿ.ಅರಸಪ್ಪ ಕಳವಳ ವ್ಯಕ್ತಪಡಿಸಿದರು.</p>.<p>‘ವಸತಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಕೈಗಾರಿಕೆಗಳ ಸ್ಥಳಾಂತರ ಕಷ್ಟಸಾಧ್ಯ. ಸದರಿ ಕೈಗಾರಿಕೆಗಳನ್ನು ಸ್ಥಳಾಂತರಿಸಲು ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸುವ ಕುರಿತು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು' ಎಂದರು.</p>.<p>‘ಕೈಗಾರಿಕಾ ನೀತಿ ಜಾರಿಗೆ ಬಂದು ಎರಡು ತಿಂಗಳು ಕಳೆದಿದ್ದರೂ, ಸಂಬಂಧಪಟ್ಟ ಇಲಾಖೆಗಳು ಅಧಿಸೂಚನೆ ಹೊರಡಿ<br />ಸಿಲ್ಲ. ಇದರಿಂದ ಕೈಗಾರಿಕಾ ನೀತಿಯಲ್ಲಿ ಜಾರಿಗೊಳಿಸಲಾದ ರಿಯಾಯಿತಿ ಮತ್ತು ಪ್ರಯೋಜನಗಳನ್ನು ಕೈಗಾರಿಕೋದ್ಯಮಿ<br />ಗಳು ಪಡೆಯಲು ಸಾಧ್ಯವಾಗುತ್ತಿಲ್ಲ. ಕಂದಾಯ, ವಿದ್ಯುತ್ ಮತ್ತು ಇತರೆ ಇಲಾಖೆಗಳು ತ್ವರಿತವಾಗಿ ಅಧಿಸೂಚನೆಗಳನ್ನು ಹೊರಡಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>