<p><strong>ಬೆಂಗಳೂರು</strong>: ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಮುಟ್ಟಾದರೆ, ಪಕ್ಕದಲ್ಲಿನ ದೇವಾಲಯಕ್ಕೆ ಮೈಲಿಗೆಯಾಗುತ್ತದೆ ಎಂದು ತುಮಕೂರಿನ ಗ್ರಾಮವೊಂದರಲ್ಲಿ ವಿದ್ಯಾರ್ಥಿ ನಿಲಯವನ್ನೇ ಬಳಸುತ್ತಿಲ್ಲ ಎಂದು ಬಿಜೆಪಿಯ ಭಾರತಿ ಶೆಟ್ಟಿ ಹೇಳಿದರು.</p>.<p>ಶುಕ್ರವಾರ ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿಯಲ್ಲಿ ಎಂಟು ವರ್ಷಗಳ ಹಿಂದೆ ಕಸ್ತೂರಬಾ ಬಾಲಿಕಾ ನಿಲಯ ನಿರ್ಮಿಸಲಾಗಿದೆ. ಆದರೆ ಈವರೆಗೂ ಅದನ್ನು ಬಳಸಿಲ್ಲ’ ಎಂದರು.</p>.<p>‘ಹೊಳವನಹಳ್ಳಿಯ ಗ್ರಾಮದೇವತೆ ದೇವಾಲಯದ ಪಕ್ಕದಲ್ಲೇ ವಿದ್ಯಾರ್ಥಿ ನಿಲಯವಿದೆ. ದೇವಾಲಯದ ಮುಂಭಾಗದಿಂದಲೇ ನಿಲಯಕ್ಕೆ ಹೋಗಬೇಕು. ಆದರೆ ಮುಟ್ಟಾದವರು ದೇವಾಲಯದ ಮುಂದೆ ಹೋದರೆ, ದೇವರಿಗೆ ಮೈಲಿಗೆಯಾಗುತ್ತದೆ ಎಂಬ ಮೂಢನಂಬಿಕೆ ಆ ಗ್ರಾಮದ ಜನರಲ್ಲಿದೆ. ಹೀಗಾಗಿ ವಿದ್ಯಾರ್ಥಿ ನಿಲಯಕ್ಕೆ ವಿದ್ಯಾರ್ಥಿನಿಯರ ದಾಖಲಾತಿಗೆ ಅವಕಾಶ ನೀಡಿಲ್ಲ’ ಎಂದರು.</p>.<p>‘ದಾಖಲಾತಿ ಇಲ್ಲದೇ ಇರುವುದಕ್ಕೆ, ವಿದ್ಯಾರ್ಥಿ ನಿಲಯವು ಎಂಟು ವರ್ಷಗಳಿಂದ ಖಾಲಿ ಬಿದ್ದಿದೆ. ಮೂಢನಂಬಿಕೆಯ ಕಾರಣಕ್ಕೆ ಕೋಟ್ಯಂತರ ರೂಪಾಯಿ ವ್ಯರ್ಥವಾಗುತ್ತಿದೆ’ ಎಂದರು. </p>.<p>ಸಭಾನಾಯಕ ಎನ್.ಎಸ್.ಬೋಸರಾಜು ಅವರು, ‘ಸಂಬಂಧಪಟ್ಟ ಸಚಿವರ ಗಮನಕ್ಕೆ ತರುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿನಿಯರು ಮುಟ್ಟಾದರೆ, ಪಕ್ಕದಲ್ಲಿನ ದೇವಾಲಯಕ್ಕೆ ಮೈಲಿಗೆಯಾಗುತ್ತದೆ ಎಂದು ತುಮಕೂರಿನ ಗ್ರಾಮವೊಂದರಲ್ಲಿ ವಿದ್ಯಾರ್ಥಿ ನಿಲಯವನ್ನೇ ಬಳಸುತ್ತಿಲ್ಲ ಎಂದು ಬಿಜೆಪಿಯ ಭಾರತಿ ಶೆಟ್ಟಿ ಹೇಳಿದರು.</p>.<p>ಶುಕ್ರವಾರ ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿಯಲ್ಲಿ ಎಂಟು ವರ್ಷಗಳ ಹಿಂದೆ ಕಸ್ತೂರಬಾ ಬಾಲಿಕಾ ನಿಲಯ ನಿರ್ಮಿಸಲಾಗಿದೆ. ಆದರೆ ಈವರೆಗೂ ಅದನ್ನು ಬಳಸಿಲ್ಲ’ ಎಂದರು.</p>.<p>‘ಹೊಳವನಹಳ್ಳಿಯ ಗ್ರಾಮದೇವತೆ ದೇವಾಲಯದ ಪಕ್ಕದಲ್ಲೇ ವಿದ್ಯಾರ್ಥಿ ನಿಲಯವಿದೆ. ದೇವಾಲಯದ ಮುಂಭಾಗದಿಂದಲೇ ನಿಲಯಕ್ಕೆ ಹೋಗಬೇಕು. ಆದರೆ ಮುಟ್ಟಾದವರು ದೇವಾಲಯದ ಮುಂದೆ ಹೋದರೆ, ದೇವರಿಗೆ ಮೈಲಿಗೆಯಾಗುತ್ತದೆ ಎಂಬ ಮೂಢನಂಬಿಕೆ ಆ ಗ್ರಾಮದ ಜನರಲ್ಲಿದೆ. ಹೀಗಾಗಿ ವಿದ್ಯಾರ್ಥಿ ನಿಲಯಕ್ಕೆ ವಿದ್ಯಾರ್ಥಿನಿಯರ ದಾಖಲಾತಿಗೆ ಅವಕಾಶ ನೀಡಿಲ್ಲ’ ಎಂದರು.</p>.<p>‘ದಾಖಲಾತಿ ಇಲ್ಲದೇ ಇರುವುದಕ್ಕೆ, ವಿದ್ಯಾರ್ಥಿ ನಿಲಯವು ಎಂಟು ವರ್ಷಗಳಿಂದ ಖಾಲಿ ಬಿದ್ದಿದೆ. ಮೂಢನಂಬಿಕೆಯ ಕಾರಣಕ್ಕೆ ಕೋಟ್ಯಂತರ ರೂಪಾಯಿ ವ್ಯರ್ಥವಾಗುತ್ತಿದೆ’ ಎಂದರು. </p>.<p>ಸಭಾನಾಯಕ ಎನ್.ಎಸ್.ಬೋಸರಾಜು ಅವರು, ‘ಸಂಬಂಧಪಟ್ಟ ಸಚಿವರ ಗಮನಕ್ಕೆ ತರುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>