<p><strong>ಬೆಂಗಳೂರು:</strong> ಉದ್ಘಾಟನೆಗೊಂಡ ಒಂದು ತಿಂಗಳ ಅವಧಿಯಲ್ಲೇ ‘ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ’ (ಕೆಎಟಿ) ಬೆಳಗಾವಿ ಪೀಠವು ಆಡಳಿತಾತ್ಮಕ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.</p>.<p>ಈ ಕುರಿತಂತೆ ಕೆಎಟಿ ಅಧಿಸೂಚನೆ ಹೊರಡಿಸಿದ್ದು, ‘ಪೀಠವು 2019ರ ಜನವರಿ 16ರಿಂದ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವುದಿಲ್ಲ. ಶೀಘ್ರವೇ ಪೀಠವು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ’ ಎಂದು ಕೆಎಟಿ ರಿಜಿಸ್ಟ್ರಾರ್ ಕೆ.ಅಮರನಾರಾಯಣ ತಿಳಿಸಿದ್ದಾರೆ.</p>.<p>ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು ಈ ಹಿಂದಿನ ಸರ್ಕಾರ 2015ರಲ್ಲಿ ನಿರ್ಧಾರ ಕೈಗೊಂಡಿತ್ತು. ಈ ದಿಸೆಯಲ್ಲಿ 2018ರ ಡಿಸೆಂಬರ್ 17ರಂದು ಬೆಳಗಾವಿಯಲ್ಲಿ ಕೆಎಟಿ ಪೀಠವನ್ನು ಉದ್ಘಾಟಿಸಲಾಗಿತ್ತು.</p>.<p>ಈ ಪೀಠಕ್ಕೆ ಪ್ರಧಾನ ಪೀಠದಿಂದ 150 ಪ್ರಕರಣಗಳನ್ನು ವರ್ಗಾವಣೆ ಮಾಡಲಾಗಿತ್ತು. ಏತನ್ಮಧ್ಯೆ ಈ ಪೀಠದಲ್ಲಿ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಮತ್ತು ನ್ಯಾಯಾಂಗ ಸದಸ್ಯ ವಿ.ಪಿ.ಬಳಿಗಾರ್ ಅವರು ಜನವರಿ 7ರಿಂದ 19ರವರೆಗೆ ಕಾರ್ಯ ನಿರ್ವಹಿಸಿದ್ದರು.</p>.<p>ಬೆಳಗಾವಿ ಪೀಠದ ವ್ಯಾಪ್ತಿಗೆ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಾಕಿ ಇರುವ 2,644 ಪ್ರಕರಣಗಳು ವಿಚಾರಣೆಗೆ ಒಳಪಡುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉದ್ಘಾಟನೆಗೊಂಡ ಒಂದು ತಿಂಗಳ ಅವಧಿಯಲ್ಲೇ ‘ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ’ (ಕೆಎಟಿ) ಬೆಳಗಾವಿ ಪೀಠವು ಆಡಳಿತಾತ್ಮಕ ಕಾರಣಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.</p>.<p>ಈ ಕುರಿತಂತೆ ಕೆಎಟಿ ಅಧಿಸೂಚನೆ ಹೊರಡಿಸಿದ್ದು, ‘ಪೀಠವು 2019ರ ಜನವರಿ 16ರಿಂದ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುವುದಿಲ್ಲ. ಶೀಘ್ರವೇ ಪೀಠವು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ’ ಎಂದು ಕೆಎಟಿ ರಿಜಿಸ್ಟ್ರಾರ್ ಕೆ.ಅಮರನಾರಾಯಣ ತಿಳಿಸಿದ್ದಾರೆ.</p>.<p>ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಕೆಎಟಿ ಪೀಠ ಸ್ಥಾಪಿಸಲು ಈ ಹಿಂದಿನ ಸರ್ಕಾರ 2015ರಲ್ಲಿ ನಿರ್ಧಾರ ಕೈಗೊಂಡಿತ್ತು. ಈ ದಿಸೆಯಲ್ಲಿ 2018ರ ಡಿಸೆಂಬರ್ 17ರಂದು ಬೆಳಗಾವಿಯಲ್ಲಿ ಕೆಎಟಿ ಪೀಠವನ್ನು ಉದ್ಘಾಟಿಸಲಾಗಿತ್ತು.</p>.<p>ಈ ಪೀಠಕ್ಕೆ ಪ್ರಧಾನ ಪೀಠದಿಂದ 150 ಪ್ರಕರಣಗಳನ್ನು ವರ್ಗಾವಣೆ ಮಾಡಲಾಗಿತ್ತು. ಏತನ್ಮಧ್ಯೆ ಈ ಪೀಠದಲ್ಲಿ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಮತ್ತು ನ್ಯಾಯಾಂಗ ಸದಸ್ಯ ವಿ.ಪಿ.ಬಳಿಗಾರ್ ಅವರು ಜನವರಿ 7ರಿಂದ 19ರವರೆಗೆ ಕಾರ್ಯ ನಿರ್ವಹಿಸಿದ್ದರು.</p>.<p>ಬೆಳಗಾವಿ ಪೀಠದ ವ್ಯಾಪ್ತಿಗೆ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಾಕಿ ಇರುವ 2,644 ಪ್ರಕರಣಗಳು ವಿಚಾರಣೆಗೆ ಒಳಪಡುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>