ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ 1,500 ಕಿ.ಮೀ ಕ್ರಮಿಸಲಿದ್ದು, ಸೆ.17ಕ್ಕೆ ಚೆನ್ನೈನಲ್ಲಿ ಮುಕ್ತಾಯವಾಗಲಿದೆ.
ಸದ್ಗುರು ಜಗ್ಗಿ ವಾಸ್ದೇವ್ ಮಾತನಾಡಿ, ‘ಕೊಡಗಿನಲ್ಲಿ ಮಳೆ ಕೊರತೆಯಾಗದಿದ್ದರೂ ದೇಶದ ಹಲವು ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ನೂರು ವರ್ಷದ ಹಿಂದೆ ಬೀಳುತ್ತಿದ್ದ ಮಳೆ ಪ್ರಮಾಣವೇ ಈಗಲೂ ಇದೆ. ಆದರೆ, ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಭೂಮಿಯಲ್ಲಿ ಇಲ್ಲ. ಅದೇ ಕಾರಣದಿಂದ ಪಶ್ಚಿಮಘಟ್ಟದಲ್ಲಿ ಭೂಕುಸಿತ ಸಂಭವಿಸುತ್ತಿದೆ’ ಎಂದು ಎಚ್ಚರಿಸಿದರು.