<p><strong>ಬೆಂಗಳೂರು: </strong>ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ 170ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲಿ ಯೋಜನೆ ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿ.ಐ.ಎಲ್) ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಲಾಗಿದೆ.</p>.<p>ಈ ಕುರಿತಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>"ಬೆಳ್ಳಂದೂರು ಕೆರೆಗೆ ಕಲುಷಿತ ನೀರು ಹರಿಸಲಾಗುತ್ತಿದೆ ಎಂದು ಆಕ್ಷೇಪಿಸಿ ಇದೇ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಪಿಐಎಲ್ ಜೊತೆಯಲ್ಲೇ ಈ ಪ್ರಕರಣದ ವಿಚಾರಣೆಯೂ ನಡೆಯಲಿ" ಎಂದು ನ್ಯಾಯಪೀಠ ಅರ್ಜಿ ವರ್ಗಾವಣೆಗೆ ಆದೇಶಿಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಅವರು, 'ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ.ಇದು ಅವೈಜ್ಞಾನಿಕ ಕ್ರಮದಿಂದ ಕೂಡಿದ್ದು ಈ ಜಿಲ್ಲೆಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಮಧ್ಯಂತರ ಆದೇಶ ನೀಡಬೇಕು" ಎಂದು ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಹಾಗಾದರೆ ಈ ನೀರು ಮೊದಲು ಎಲ್ಲಿಗೆ ಹೋಗುತ್ತಿತ್ತು? ಈಗ ಎಲ್ಲಿಗೆ ಹೋಗಬೇಕು" ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಉತ್ತರಿಸಿದ ಐಸಾಕ್, "ಮೊದಲು ಇಲ್ಲಿನ ಸ್ಥಳೀಯ ಕೆರೆಗಳಿಗೆ ಈ ನೀರು ಹರಿದು ಹೋಗುತ್ತಿತ್ತು" ಎಂದರು.</p>.<p>"ಹಾಗಾದರೆ ಈ ಸ್ಥಳೀಯ ಕೆರೆಗಳು ಕಲುಷಿತ ಆಗಬೇಕೆ" ಎಂದು ನ್ಯಾಯಪೀಠ ಮರುಪ್ರಶ್ನೆ ಮಾಡಿತು.</p>.<p>ಬೆಳ್ಳಂದೂರು ಕೆರೆಗೆ ಸಂಬಂಧಿಸಿದ ಪ್ರಕರಣ ಹಸಿರು ನ್ಯಾಯ ಮಂಡಳಿ (ಎನ್ ಜಿ ಟಿ) ಮುಂದಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಕೀಲ ಗುರುರಾಜ್ ಜೋಷಿ ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಹಾಗಾದರೆ ಈ ಪ್ರಕರಣವನ್ನೂ ಹಸಿರು ನ್ಯಾಯ ಮಂಡಳಿ ಮುಂದೆ ಯಾಕೆ ಯಾರೂ ಪ್ರಶ್ನಿಸಿಲ್ಲವೇ" ಎಂದು ನ್ಯಾಯಮೂರ್ತಿಗಳು ಕೇಳಿದರು.</p>.<p>ಇದಕ್ಕೆ ಜೋಷಿ, "ಯಾರೂ ಪ್ರಶ್ನಿಸಿಲ್ಲ" ಎಂದು ಉತ್ತರಿಸಿದರು.</p>.<p>ಇದನ್ನು ಆಲಿಸಿದ ನ್ಯಾಯ ಪೀಠ, "ಈ ಪ್ರಕರಣವನ್ನು ಬೆಳ್ಳಂದೂರು ಕೆರೆ ಪ್ರಕರಣ ಸಂಬಂಧ ಇದೇ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಪಿಐಎಲ್ ಜೊತೆಗೆ ವಿಚಾರಣೆ ನಡೆಸಲಿ" ಎಂದು ನಿರ್ದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ 170ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲಿ ಯೋಜನೆ ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿ.ಐ.ಎಲ್) ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಲಾಗಿದೆ.</p>.<p>ಈ ಕುರಿತಂತೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>"ಬೆಳ್ಳಂದೂರು ಕೆರೆಗೆ ಕಲುಷಿತ ನೀರು ಹರಿಸಲಾಗುತ್ತಿದೆ ಎಂದು ಆಕ್ಷೇಪಿಸಿ ಇದೇ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಪಿಐಎಲ್ ಜೊತೆಯಲ್ಲೇ ಈ ಪ್ರಕರಣದ ವಿಚಾರಣೆಯೂ ನಡೆಯಲಿ" ಎಂದು ನ್ಯಾಯಪೀಠ ಅರ್ಜಿ ವರ್ಗಾವಣೆಗೆ ಆದೇಶಿಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಅವರು, 'ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೆರೆಗಳಿಗೆ ನೀರು ಹರಿಸಲಾಗುತ್ತಿದೆ.ಇದು ಅವೈಜ್ಞಾನಿಕ ಕ್ರಮದಿಂದ ಕೂಡಿದ್ದು ಈ ಜಿಲ್ಲೆಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಮಧ್ಯಂತರ ಆದೇಶ ನೀಡಬೇಕು" ಎಂದು ಕೋರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಹಾಗಾದರೆ ಈ ನೀರು ಮೊದಲು ಎಲ್ಲಿಗೆ ಹೋಗುತ್ತಿತ್ತು? ಈಗ ಎಲ್ಲಿಗೆ ಹೋಗಬೇಕು" ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಉತ್ತರಿಸಿದ ಐಸಾಕ್, "ಮೊದಲು ಇಲ್ಲಿನ ಸ್ಥಳೀಯ ಕೆರೆಗಳಿಗೆ ಈ ನೀರು ಹರಿದು ಹೋಗುತ್ತಿತ್ತು" ಎಂದರು.</p>.<p>"ಹಾಗಾದರೆ ಈ ಸ್ಥಳೀಯ ಕೆರೆಗಳು ಕಲುಷಿತ ಆಗಬೇಕೆ" ಎಂದು ನ್ಯಾಯಪೀಠ ಮರುಪ್ರಶ್ನೆ ಮಾಡಿತು.</p>.<p>ಬೆಳ್ಳಂದೂರು ಕೆರೆಗೆ ಸಂಬಂಧಿಸಿದ ಪ್ರಕರಣ ಹಸಿರು ನ್ಯಾಯ ಮಂಡಳಿ (ಎನ್ ಜಿ ಟಿ) ಮುಂದಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಕೀಲ ಗುರುರಾಜ್ ಜೋಷಿ ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಹಾಗಾದರೆ ಈ ಪ್ರಕರಣವನ್ನೂ ಹಸಿರು ನ್ಯಾಯ ಮಂಡಳಿ ಮುಂದೆ ಯಾಕೆ ಯಾರೂ ಪ್ರಶ್ನಿಸಿಲ್ಲವೇ" ಎಂದು ನ್ಯಾಯಮೂರ್ತಿಗಳು ಕೇಳಿದರು.</p>.<p>ಇದಕ್ಕೆ ಜೋಷಿ, "ಯಾರೂ ಪ್ರಶ್ನಿಸಿಲ್ಲ" ಎಂದು ಉತ್ತರಿಸಿದರು.</p>.<p>ಇದನ್ನು ಆಲಿಸಿದ ನ್ಯಾಯ ಪೀಠ, "ಈ ಪ್ರಕರಣವನ್ನು ಬೆಳ್ಳಂದೂರು ಕೆರೆ ಪ್ರಕರಣ ಸಂಬಂಧ ಇದೇ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಪಿಐಎಲ್ ಜೊತೆಗೆ ವಿಚಾರಣೆ ನಡೆಸಲಿ" ಎಂದು ನಿರ್ದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>