<p><strong>ಚಿತ್ರದುರ್ಗ</strong>: ಅಕ್ರಮ ಮದ್ಯ ಮಾರಾಟ ಮಾಡುವವರ ಮನೆಗೆ ಬೆಂಕಿ ಇಡಿ, ಏಕೆ ಯೋಚನೆ ಮಾಡುತ್ತೀರಿ ಎಂದು ಶಾಸಕ ಕೆ.ಸಿ.ವೀರೇಂದ್ರ ಮಹಿಳೆಯರಿಗೆ ಹೇಳಿದ ವಿಡಿಯೊ ಚರ್ಚೆಗೆ ಗ್ರಾಸವಾಗಿದೆ.</p><p>ತಾಲ್ಲೂಕಿನ ಹಿರೇಗುಂಟನೂರು ಗ್ರಾಮಕ್ಕೆ ಈಚೆಗೆ ಭೇಟಿ ನೀಡಿದಾಗ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳೆಯರು ನೀಡಿದ ದೂರು ಆಲಿಸಿ ಶಾಸಕರು ಹೀಗೆ ಮಾತನಾಡಿದ್ದಾರೆ.</p><p>'ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ತೊಂದರೆ ಉಂಟಾಗಿದೆ. ಕುಡಿದು ಬಂದು ಗಂಡಂದಿರು ನಿತ್ಯ ಮನೆಗಳಲ್ಲಿ ಗಲಾಟೆ ಮಾಡುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟ ತಡೆಯಲು ಈವರೆಗೆ ಯಾರೂ ಕ್ರಮ ಕೈಗೊಂಡಿಲ್ಲ. ಕೈಮುಗಿಯುತ್ತೇವೆ ಅಕ್ರಮ ಮದ್ಯ ಮಾರಾಟ ತಡೆಯಿರಿ' ಎಂದು ಮಹಿಳೆಯರು ಮನವಿ ಮಾಡಿದ್ದಾರೆ.</p><p>'ಇಷ್ಟು ಹೇಳಿದ್ದೇವೆ ಮುಂದೆ ಅವರ ಮನೆಗೆ ಬೆಂಕಿಯಿಡುತ್ತೇವೆ' ಎಂದು ಮಹಿಳೆಯೊಬ್ಬರು ಹೇಳಿದಾಗ, 'ನೀನು ಇಡಮ್ಮ ನಾನಿದ್ದೇನೆ, ಯಾಕೆ ಯೋಚನೆ ಮಾಡ್ತಿಯಾ' ಎಂದ ಶಾಸಕರು ಪ್ರತಿಕ್ರಿಸಿದ ಮಾತು ವಿಡಿಯೊದಲ್ಲಿದೆ.</p><p>'ಹಾಸ್ಟೆಲ್ ವಾರ್ಡನ್ ಗೆ ಬಡಿಯಿರಿ' ಎಂದು ಶಾಸಕ ವೀರೇಂದ್ರ ಪ್ರಚೋದನೆ ನೀಡಿದ ವಿಡಿಯೊ ಶನಿವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಅಕ್ರಮ ಮದ್ಯ ಮಾರಾಟ ಮಾಡುವವರ ಮನೆಗೆ ಬೆಂಕಿ ಇಡಿ, ಏಕೆ ಯೋಚನೆ ಮಾಡುತ್ತೀರಿ ಎಂದು ಶಾಸಕ ಕೆ.ಸಿ.ವೀರೇಂದ್ರ ಮಹಿಳೆಯರಿಗೆ ಹೇಳಿದ ವಿಡಿಯೊ ಚರ್ಚೆಗೆ ಗ್ರಾಸವಾಗಿದೆ.</p><p>ತಾಲ್ಲೂಕಿನ ಹಿರೇಗುಂಟನೂರು ಗ್ರಾಮಕ್ಕೆ ಈಚೆಗೆ ಭೇಟಿ ನೀಡಿದಾಗ ಅಕ್ರಮ ಮದ್ಯ ಮಾರಾಟದ ಬಗ್ಗೆ ಮಹಿಳೆಯರು ನೀಡಿದ ದೂರು ಆಲಿಸಿ ಶಾಸಕರು ಹೀಗೆ ಮಾತನಾಡಿದ್ದಾರೆ.</p><p>'ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ತೊಂದರೆ ಉಂಟಾಗಿದೆ. ಕುಡಿದು ಬಂದು ಗಂಡಂದಿರು ನಿತ್ಯ ಮನೆಗಳಲ್ಲಿ ಗಲಾಟೆ ಮಾಡುತ್ತಿದ್ದಾರೆ. ಅಕ್ರಮ ಮದ್ಯ ಮಾರಾಟ ತಡೆಯಲು ಈವರೆಗೆ ಯಾರೂ ಕ್ರಮ ಕೈಗೊಂಡಿಲ್ಲ. ಕೈಮುಗಿಯುತ್ತೇವೆ ಅಕ್ರಮ ಮದ್ಯ ಮಾರಾಟ ತಡೆಯಿರಿ' ಎಂದು ಮಹಿಳೆಯರು ಮನವಿ ಮಾಡಿದ್ದಾರೆ.</p><p>'ಇಷ್ಟು ಹೇಳಿದ್ದೇವೆ ಮುಂದೆ ಅವರ ಮನೆಗೆ ಬೆಂಕಿಯಿಡುತ್ತೇವೆ' ಎಂದು ಮಹಿಳೆಯೊಬ್ಬರು ಹೇಳಿದಾಗ, 'ನೀನು ಇಡಮ್ಮ ನಾನಿದ್ದೇನೆ, ಯಾಕೆ ಯೋಚನೆ ಮಾಡ್ತಿಯಾ' ಎಂದ ಶಾಸಕರು ಪ್ರತಿಕ್ರಿಸಿದ ಮಾತು ವಿಡಿಯೊದಲ್ಲಿದೆ.</p><p>'ಹಾಸ್ಟೆಲ್ ವಾರ್ಡನ್ ಗೆ ಬಡಿಯಿರಿ' ಎಂದು ಶಾಸಕ ವೀರೇಂದ್ರ ಪ್ರಚೋದನೆ ನೀಡಿದ ವಿಡಿಯೊ ಶನಿವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>