<p><strong>ಬೆಂಗಳೂರು</strong>: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಿಜಿ–ಸಿಇಟಿ ಪ್ರಕ್ರಿಯೆಯಿಂದ ವಾಸ್ತುಶಿಲ್ಪಶಾಸ್ತ್ರ ಕೋರ್ಸ್ ಅನ್ನು ಕೈಬಿಟ್ಟಿದೆ. </p><p>ಸ್ನಾತಕೋತ್ತರ ಪದವಿಯ ವಾಸ್ತುಶಿಲ್ಪಶಾಸ್ತ್ರ ಕೋರ್ಸ್ ಸೀಟುಗಳನ್ನು ಇದುವರೆಗೂ ಸಿಇಟಿ ಮೂಲಕ ಕೆಇಎ ಭರ್ತಿ ಮಾಡುತ್ತಿತ್ತು. ಈ ವರ್ಷದಿಂದಲೇ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಾಸ್ತುಶಿಲ್ಪಶಾಸ್ತ್ರ ಪರಿಷತ್ತು ನಡೆಸುವ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಯ ಅಂಕಗಳ ಆಧಾರದಲ್ಲೇ ಪ್ರವೇಶ ನೀಡಲು ನಿರ್ಧರಿಸಿದೆ.</p><p>‘ಪ್ರಾಧಿಕಾರ ಇನ್ನುಮುಂದೆ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಆಸಕ್ತ ವಿದ್ಯಾರ್ಥಿಗಳು ವಾಸ್ತುಶಿಲ್ಪಶಾಸ್ತ್ರ ಪರಿಷತ್ತು ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ತೆಗೆದುಕೊಂಡು, ಇಲ್ಲಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.</p><p>ಕಳೆದ ವರ್ಷ ಈ ಕೋರ್ಸ್ನಲ್ಲಿ 136 ಸೀಟು ಲಭ್ಯವಿದ್ದವು. 127 ಅರ್ಜಿ ಸಲ್ಲಿಕೆಯಾಗಿದ್ದವು. ಪ್ರವೇಶ ಪಡೆದಿದ್ದು 28 ವಿದ್ಯಾರ್ಥಿಗಳು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಿಜಿ–ಸಿಇಟಿ ಪ್ರಕ್ರಿಯೆಯಿಂದ ವಾಸ್ತುಶಿಲ್ಪಶಾಸ್ತ್ರ ಕೋರ್ಸ್ ಅನ್ನು ಕೈಬಿಟ್ಟಿದೆ. </p><p>ಸ್ನಾತಕೋತ್ತರ ಪದವಿಯ ವಾಸ್ತುಶಿಲ್ಪಶಾಸ್ತ್ರ ಕೋರ್ಸ್ ಸೀಟುಗಳನ್ನು ಇದುವರೆಗೂ ಸಿಇಟಿ ಮೂಲಕ ಕೆಇಎ ಭರ್ತಿ ಮಾಡುತ್ತಿತ್ತು. ಈ ವರ್ಷದಿಂದಲೇ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಾಸ್ತುಶಿಲ್ಪಶಾಸ್ತ್ರ ಪರಿಷತ್ತು ನಡೆಸುವ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಯ ಅಂಕಗಳ ಆಧಾರದಲ್ಲೇ ಪ್ರವೇಶ ನೀಡಲು ನಿರ್ಧರಿಸಿದೆ.</p><p>‘ಪ್ರಾಧಿಕಾರ ಇನ್ನುಮುಂದೆ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಆಸಕ್ತ ವಿದ್ಯಾರ್ಥಿಗಳು ವಾಸ್ತುಶಿಲ್ಪಶಾಸ್ತ್ರ ಪರಿಷತ್ತು ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ತೆಗೆದುಕೊಂಡು, ಇಲ್ಲಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.</p><p>ಕಳೆದ ವರ್ಷ ಈ ಕೋರ್ಸ್ನಲ್ಲಿ 136 ಸೀಟು ಲಭ್ಯವಿದ್ದವು. 127 ಅರ್ಜಿ ಸಲ್ಲಿಕೆಯಾಗಿದ್ದವು. ಪ್ರವೇಶ ಪಡೆದಿದ್ದು 28 ವಿದ್ಯಾರ್ಥಿಗಳು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>