ಬಾಲಕನ ಸಾಹಸ: ಕೆಲ ತಿಂಗಳ ಹಿಂದೆ ಬಾಲಕ ಕೀರ್ತಿ ತನ್ನ ಕುಟುಂಬದ ಸದಸ್ಯರೊಂದಿಗೆ ಜಗಳೂರು ತಾಲ್ಲೂಕಿನ ಅಗಸನಹಳ್ಳಿ ಗ್ರಾಮದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿ ರಸ್ತೆ ಪಕ್ಕದ ತಗ್ಗಿಗೆ ಉರುಳಿ ಬಿದ್ದಿತ್ತು. ಅಲ್ಪಸ್ವಲ್ಪ ಗಾಯಗೊಂಡಿದ್ದ ಬಾಲಕ ಕಾರ್ನಿಂದ ಹೊರಬಂದು, ಗಂಭೀರವಾಗಿ ಗಾಯಗೊಂಡಿದ್ದ ತಂದೆ ಹಾಗೂ ತಾಯಿಯನ್ನು ಹೊರಗೆ ಕರೆತಂದಿದ್ದ. ಜೊತೆಗೆ ಪೊಲೀಸರಿಗೂ ಕರೆ ಮಾಡಿ ಅಪಘಾತದ ಬಗ್ಗೆ ಮಾಹಿತಿ ನೀಡಿ ಸಹಾಯ ಕೋರಿದ್ದ