<p><strong>ಕೋಲಾರ</strong>: ಕೆಂಪೇಗೌಡರ ಜಯಂತಿಗೆ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ಜೆಡಿಎಸ್ ಕಾರ್ಯಕರ್ತರು ಗುರುವಾರ ಕೆಂಪೇಗೌಡರ ಸ್ಥಬ್ದಚಿತ್ರ ಮೆರವಣಿಗೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದರು.</p><p>ಇದರಿಂದಾಗಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮುಂದೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆಯಿತು. ಪರಸ್ಪರ ಹೊಡೆದಾಟಕ್ಕೂ ಮುಂದಾದರು. ಪೊಲೀಸರು ಮಧ್ಯ ಪ್ರವೇಶಿಸಿ ಜಗಳ ತಡೆದರು.</p><p>ಕಾರ್ಯಕ್ರಮದ ವೇದಿಕೆ ಬಳಿ ಸೇರಿದ ಜೆಡಿಎಸ್ನ ಕೆಲ ಕಾರ್ಯಕರ್ತರು ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರು ಹೇಳುವಂತೆ ಸಂಘಟಕರ ಬಳಿ ಒತ್ತಾಯಿಸಿದರು. ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಧಿಕ್ಕಾರ ಕೂಗಿದರು. </p><p>ಆಗ ವೇದಿಕೆಯಿಂದ ಮೇಲೆದ್ದು ಬಂದ ಕಾಂಗ್ರೆಸ್ನ ಎಂಎಲ್ಸಿ ಅನಿಲ್ ಕುಮಾರ್, 'ನೀವಿಲ್ಲಿ ರಾಜಕೀಯ ಮಾಡಲು ಬಂದಿದ್ದರೆ ನನಗೂ ರಾಜಕೀಯ ಮಾಡಲು ಬರುತ್ತದೆ. ನೋಡ್ತೀರಾ' ಎಂದು ಜೆಡಿಎಸ್ ಮುಖಂಡರಿಗೆ ಅವಾಜ್ ಹಾಕಿದರು.</p><p>ಆಗ ಅನಿಲ್ ಕುಮಾರ್ ಅವರತ್ತ ಕೈತೋರಿಸಿ ಜೆಡಿಎಸ್ ಮುಖಂಡರು ಜೋರಾಗಿ ಕೂಗಿದರು.</p><p>ಆಗ ಕಾಂಗ್ರೆಸ್ ಯುವ ಮುಖಂಡ ಜನಪನಹಳ್ಳಿ ನವೀನ್ ಕುಮಾರ್ ಹೊಡೆದಾಟಕ್ಕೆ ಮುಂದಾದರು.</p><p>ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ತಳ್ಳಾಟ, ನೂಕಾಟ ನಡೆಯಿತು.</p><p>ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ಚಿಕ್ಕಬಳ್ಳಾಪುರದ ಮಂಗಳಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.</p><p>'ಜಯಂತಿಯಲ್ಲಿ ಗೊಂದಲ ಮಾಡಿಕೊಂಡರೆ ಕೆಂಪೇಗೌಡರಿಗೆ ಅಗೌರವ ತೋರಿದಂತೆ. ಸಣ್ಣಪುಟ್ಟ ಸಮಸ್ಯೆಯನ್ನು ಹಿರಿಯರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ದೇವೇಗೌಡ ಹಾಗೂ ಕುಮಾರಣ್ಣ ಕೊಡುಗೆ ಅಪಾರ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಕೆಂಪೇಗೌಡರ ಜಯಂತಿಗೆ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ಜೆಡಿಎಸ್ ಕಾರ್ಯಕರ್ತರು ಗುರುವಾರ ಕೆಂಪೇಗೌಡರ ಸ್ಥಬ್ದಚಿತ್ರ ಮೆರವಣಿಗೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದರು.</p><p>ಇದರಿಂದಾಗಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮುಂದೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆಯಿತು. ಪರಸ್ಪರ ಹೊಡೆದಾಟಕ್ಕೂ ಮುಂದಾದರು. ಪೊಲೀಸರು ಮಧ್ಯ ಪ್ರವೇಶಿಸಿ ಜಗಳ ತಡೆದರು.</p><p>ಕಾರ್ಯಕ್ರಮದ ವೇದಿಕೆ ಬಳಿ ಸೇರಿದ ಜೆಡಿಎಸ್ನ ಕೆಲ ಕಾರ್ಯಕರ್ತರು ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರು ಹೇಳುವಂತೆ ಸಂಘಟಕರ ಬಳಿ ಒತ್ತಾಯಿಸಿದರು. ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಧಿಕ್ಕಾರ ಕೂಗಿದರು. </p><p>ಆಗ ವೇದಿಕೆಯಿಂದ ಮೇಲೆದ್ದು ಬಂದ ಕಾಂಗ್ರೆಸ್ನ ಎಂಎಲ್ಸಿ ಅನಿಲ್ ಕುಮಾರ್, 'ನೀವಿಲ್ಲಿ ರಾಜಕೀಯ ಮಾಡಲು ಬಂದಿದ್ದರೆ ನನಗೂ ರಾಜಕೀಯ ಮಾಡಲು ಬರುತ್ತದೆ. ನೋಡ್ತೀರಾ' ಎಂದು ಜೆಡಿಎಸ್ ಮುಖಂಡರಿಗೆ ಅವಾಜ್ ಹಾಕಿದರು.</p><p>ಆಗ ಅನಿಲ್ ಕುಮಾರ್ ಅವರತ್ತ ಕೈತೋರಿಸಿ ಜೆಡಿಎಸ್ ಮುಖಂಡರು ಜೋರಾಗಿ ಕೂಗಿದರು.</p><p>ಆಗ ಕಾಂಗ್ರೆಸ್ ಯುವ ಮುಖಂಡ ಜನಪನಹಳ್ಳಿ ನವೀನ್ ಕುಮಾರ್ ಹೊಡೆದಾಟಕ್ಕೆ ಮುಂದಾದರು.</p><p>ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ತಳ್ಳಾಟ, ನೂಕಾಟ ನಡೆಯಿತು.</p><p>ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ಚಿಕ್ಕಬಳ್ಳಾಪುರದ ಮಂಗಳಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.</p><p>'ಜಯಂತಿಯಲ್ಲಿ ಗೊಂದಲ ಮಾಡಿಕೊಂಡರೆ ಕೆಂಪೇಗೌಡರಿಗೆ ಅಗೌರವ ತೋರಿದಂತೆ. ಸಣ್ಣಪುಟ್ಟ ಸಮಸ್ಯೆಯನ್ನು ಹಿರಿಯರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ದೇವೇಗೌಡ ಹಾಗೂ ಕುಮಾರಣ್ಣ ಕೊಡುಗೆ ಅಪಾರ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>