‘ಬಿಜೆಪಿಯವರಿಗೆ ಸಂಸ್ಕಾರವೇ ಇಲ್ಲ. ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿಗಳು, ಯಾರು ಕಾರ್ಯಕ್ರಮದಲ್ಲಿ ಇರಬೇಕು ಎಂಬುದೇ ಗೊತ್ತಿಲ್ಲ. ನಾವು ಪ್ರಧಾನಿಗೆ ಪತ್ರ ಬರೆದು, ಕೋವಿಡ್ ಕಾಲದ ಪರಿಹಾರದಿಂದ ಹಿಡಿದು ಅವರು ನೀಡಿದ್ದ ಭರವಸೆಗಳವರೆಗೆ ಹಲವು ಪ್ರಶ್ನೆಗಳನ್ನು ಕೇಳಿದ್ದೆವು. ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸದೆ ಕೇವಲ ಪ್ರಮುಖ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋಗಿದ್ದಾರೆ. ಇದು ಡಬಲ್ ಎಂಜಿನ್ ಸರ್ಕಾರವಲ್ಲ, ಟ್ರಬಲ್ ಎಂಜಿನ್ ಸರ್ಕಾರ’ ಎಂದು ಆಕ್ರೋಶ ವ್ಯಕ್ತಪಡಿಸಿದರು.