<p><strong>ಬೆಂಗಳೂರು:</strong> ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಕಾವೇರಿದ ಜಟಾಪಟಿಗೆ ಕಾರಣವಾಯಿತು. </p>.<p>ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಕೆರಗೋಡು ವಿಚಾರ ಪ್ರಸ್ತಾಪಿಸಿದರು. ಆಗ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಕಾಂಗ್ರೆಸ್ನ ಗಣಿಗ ರವಿಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕೆರಗೋಡಿನಲ್ಲಿ ರಾಷ್ಟ್ರೀಯ ಹಬ್ಬಗಳಂದು ರಾಷ್ಟ್ರಧ್ವಜವನ್ನೂ, ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ಬಾವುಟ ಮತ್ತು ಉಳಿದ ಸಂದರ್ಭಗಳಲ್ಲಿ ಹನುಮಧ್ವಜ ಹಾರಿಸುತ್ತಾರೆ. ಆದರೆ, ಇತ್ತೀಚೆಗೆ ಸರ್ಕಾರ ಏಕಾಏಕಿ ಹನುಮ ಧ್ವಜವನ್ನು ಇಳಿಸಿ ರಾಷ್ಟ್ರಧ್ವಜ ಅನಾವರಣಗೊಳಿಸಿದೆ. ರಾಷ್ಟ್ರಧ್ವಜಕ್ಕೂ ಸಂಹಿತೆ ಇದೆ. ಅವೆಲ್ಲವನ್ನೂ ಗಾಳಿಗೆ ತೂರಿ ಮಧ್ಯಾಹ್ನ 3 ಗಂಟೆಗೆ ಹಾರಿಸಿದ್ದಾರೆ. ಹನುಮ ಧ್ವಜದ ಕುರಿತು ಇರುವ ದ್ವೇಷದ ಕಾರಣಕ್ಕಾಗಿಯೇ ಈ ರೀತಿ ಮಾಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸಲು ಬಿಜೆಪಿ ಹೊರಟಾಗ ಕಾಂಗ್ರೆಸ್ ಸರ್ಕಾರಗಳು ವಿರೋಧಿಸಿದ್ದವು ಎಂದು ಅಶೋಕ ಕಿಡಿಕಾರಿದರು.</p>.<p>‘ಈ ಸ್ತಂಭವನ್ನು ಗ್ರಾಮದ ಜನರೇ ಹಣ ಹಾಕಿ ಸ್ಥಾಪಿಸಿದ್ದಾರೆ. ಗ್ರಾಮ ಪಂಚಾಯಿತಿ ಸಭೆಯಲ್ಲೂ ಈ ಸಂಬಂಧ ಬಹುಮತದ ನಿರ್ಣಯವನ್ನೂ ತೆಗೆದುಕೊಳ್ಳಲಾಗಿದೆ. ಇದನ್ನು ಸಹಿಸದ ಕಾಂಗ್ರೆಸ್ ಅಲ್ಲಿ ಜನರನ್ನು ರೊಚ್ಚಿಗೆಬ್ಬಿಸುವ ಕೆಲಸ ಮಾಡಿ, ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ’ ಎಂದು ಹೇಳಿದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗಣಿಗ ರವಿಕುಮಾರ್, ಬಿಜೆಪಿ ಉದ್ದೇಶ ಪೂರ್ವಕವಾಗಿಯೇ ಅಲ್ಲಿ ಹನುಮಧ್ವಜದ ವಿವಾದವನ್ನು ಸೃಷ್ಟಿಸಿದೆ. ಇದರ ಹಿಂದೆ ರಾಜಕೀಯ ಕಾರಣವೂ ಇದೆ. ಇವರಿಗೆ ರಾಷ್ಟ್ರಧ್ವಜ ಹಾರಿಸುವುದು ಬೇಕಿಲ್ಲ ಎಂದರು.</p>.<p>ಇದಕ್ಕೆ ಧ್ವನಿಗೂಡಿಸಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಯವರು ರಾಷ್ಟ್ರಧ್ವಜ ಕಿತ್ತು ಹಾಕುವ ಮಾತು ಆಡುತ್ತಾರೆ. ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದೂ ಹೇಳುತ್ತಾರೆ. ಅವರದು ಸಂವಿಧಾನ ವಿರೋಧಿ ಹೇಳಿಕೆ ಎಂದು ಕಿಡಿ ಕಾರಿದರು.</p>.<p>ಕಾಂಗ್ರೆಸ್ನ ನಯನಾ ಮೋಟಮ್ಮ ಮಾತನಾಡಿ, ‘ನಿಮಗೆ ರಾಷ್ಟ್ರಧ್ವಜ ಬೇಕಾ, ಹನುಮಧ್ವಜ ಬೇಕಾ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು. ಆಗ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಯಾರೂ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಬಾರದು ಎಂದು ಹೇಳಿದರು. ಈ ಹಂತದಲ್ಲಿ ಬಿಜೆಪಿ– ಕಾಂಗ್ರೆಸ್ ಮಧ್ಯೆ ಜಟಾಪಟಿ ನಡೆಯಿತು. ಬಿಜೆಪಿ ಸದಸ್ಯರು ಜೈಶ್ರೀರಾಮ್ ಎಂದು ಘೋಷಣೆ ಕೂಗಿದರು.</p>.<p><strong>ರಾಮ ದ್ವೇಷ ಹೇಗೆ ಸಾಧ್ಯ?:</strong></p>.<p>‘ನಮಗೆ ರಾಮ– ಹನುಮರ ಮೇಲೆ ದ್ವೇಷ ಏಕೆ ಇರಬೇಕು ಹೇಳಿ? ನಾವು ರಾಮ–ಹನುಮರನ್ನು ಪೂಜಿಸುವವರು. ನೀವೂ ಪೂಜಿಸುತ್ತೀರಿ. ಆದರೆ, ನೀವು ಪ್ರಚಾರ ತೆಗೆದುಕೊಳ್ಳುತ್ತೀರಿ ಅಷ್ಟೇ’ ಎಂದು ಕಾಂಗ್ರೆಸ್ನ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಆಗ ಮಧ್ಯ ಪ್ರವೇಶಿಸಿದ ಗಣಿಗ ರವಿಕುಮಾರ್, ‘ನಾನು ರಾಮನ ಸ್ತೋತ್ರ ಹೇಳುತ್ತೇನೆ, ನಿಮಗೆ ಬರುತ್ತದೆಯೇ’ ಎಂದು ಅಶೋಕ ಅವರನ್ನು ಪ್ರಶ್ನಿಸಿ, ಕೆಲವು ಸಾಲುಗಳನ್ನೂ ಪಠಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಪ್ರಕರಣ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಕಾವೇರಿದ ಜಟಾಪಟಿಗೆ ಕಾರಣವಾಯಿತು. </p>.<p>ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಕೆರಗೋಡು ವಿಚಾರ ಪ್ರಸ್ತಾಪಿಸಿದರು. ಆಗ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಕಾಂಗ್ರೆಸ್ನ ಗಣಿಗ ರವಿಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಕೆರಗೋಡಿನಲ್ಲಿ ರಾಷ್ಟ್ರೀಯ ಹಬ್ಬಗಳಂದು ರಾಷ್ಟ್ರಧ್ವಜವನ್ನೂ, ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ಬಾವುಟ ಮತ್ತು ಉಳಿದ ಸಂದರ್ಭಗಳಲ್ಲಿ ಹನುಮಧ್ವಜ ಹಾರಿಸುತ್ತಾರೆ. ಆದರೆ, ಇತ್ತೀಚೆಗೆ ಸರ್ಕಾರ ಏಕಾಏಕಿ ಹನುಮ ಧ್ವಜವನ್ನು ಇಳಿಸಿ ರಾಷ್ಟ್ರಧ್ವಜ ಅನಾವರಣಗೊಳಿಸಿದೆ. ರಾಷ್ಟ್ರಧ್ವಜಕ್ಕೂ ಸಂಹಿತೆ ಇದೆ. ಅವೆಲ್ಲವನ್ನೂ ಗಾಳಿಗೆ ತೂರಿ ಮಧ್ಯಾಹ್ನ 3 ಗಂಟೆಗೆ ಹಾರಿಸಿದ್ದಾರೆ. ಹನುಮ ಧ್ವಜದ ಕುರಿತು ಇರುವ ದ್ವೇಷದ ಕಾರಣಕ್ಕಾಗಿಯೇ ಈ ರೀತಿ ಮಾಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸಲು ಬಿಜೆಪಿ ಹೊರಟಾಗ ಕಾಂಗ್ರೆಸ್ ಸರ್ಕಾರಗಳು ವಿರೋಧಿಸಿದ್ದವು ಎಂದು ಅಶೋಕ ಕಿಡಿಕಾರಿದರು.</p>.<p>‘ಈ ಸ್ತಂಭವನ್ನು ಗ್ರಾಮದ ಜನರೇ ಹಣ ಹಾಕಿ ಸ್ಥಾಪಿಸಿದ್ದಾರೆ. ಗ್ರಾಮ ಪಂಚಾಯಿತಿ ಸಭೆಯಲ್ಲೂ ಈ ಸಂಬಂಧ ಬಹುಮತದ ನಿರ್ಣಯವನ್ನೂ ತೆಗೆದುಕೊಳ್ಳಲಾಗಿದೆ. ಇದನ್ನು ಸಹಿಸದ ಕಾಂಗ್ರೆಸ್ ಅಲ್ಲಿ ಜನರನ್ನು ರೊಚ್ಚಿಗೆಬ್ಬಿಸುವ ಕೆಲಸ ಮಾಡಿ, ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ’ ಎಂದು ಹೇಳಿದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗಣಿಗ ರವಿಕುಮಾರ್, ಬಿಜೆಪಿ ಉದ್ದೇಶ ಪೂರ್ವಕವಾಗಿಯೇ ಅಲ್ಲಿ ಹನುಮಧ್ವಜದ ವಿವಾದವನ್ನು ಸೃಷ್ಟಿಸಿದೆ. ಇದರ ಹಿಂದೆ ರಾಜಕೀಯ ಕಾರಣವೂ ಇದೆ. ಇವರಿಗೆ ರಾಷ್ಟ್ರಧ್ವಜ ಹಾರಿಸುವುದು ಬೇಕಿಲ್ಲ ಎಂದರು.</p>.<p>ಇದಕ್ಕೆ ಧ್ವನಿಗೂಡಿಸಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಯವರು ರಾಷ್ಟ್ರಧ್ವಜ ಕಿತ್ತು ಹಾಕುವ ಮಾತು ಆಡುತ್ತಾರೆ. ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದೂ ಹೇಳುತ್ತಾರೆ. ಅವರದು ಸಂವಿಧಾನ ವಿರೋಧಿ ಹೇಳಿಕೆ ಎಂದು ಕಿಡಿ ಕಾರಿದರು.</p>.<p>ಕಾಂಗ್ರೆಸ್ನ ನಯನಾ ಮೋಟಮ್ಮ ಮಾತನಾಡಿ, ‘ನಿಮಗೆ ರಾಷ್ಟ್ರಧ್ವಜ ಬೇಕಾ, ಹನುಮಧ್ವಜ ಬೇಕಾ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿದರು. ಆಗ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಯಾರೂ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಬಾರದು ಎಂದು ಹೇಳಿದರು. ಈ ಹಂತದಲ್ಲಿ ಬಿಜೆಪಿ– ಕಾಂಗ್ರೆಸ್ ಮಧ್ಯೆ ಜಟಾಪಟಿ ನಡೆಯಿತು. ಬಿಜೆಪಿ ಸದಸ್ಯರು ಜೈಶ್ರೀರಾಮ್ ಎಂದು ಘೋಷಣೆ ಕೂಗಿದರು.</p>.<p><strong>ರಾಮ ದ್ವೇಷ ಹೇಗೆ ಸಾಧ್ಯ?:</strong></p>.<p>‘ನಮಗೆ ರಾಮ– ಹನುಮರ ಮೇಲೆ ದ್ವೇಷ ಏಕೆ ಇರಬೇಕು ಹೇಳಿ? ನಾವು ರಾಮ–ಹನುಮರನ್ನು ಪೂಜಿಸುವವರು. ನೀವೂ ಪೂಜಿಸುತ್ತೀರಿ. ಆದರೆ, ನೀವು ಪ್ರಚಾರ ತೆಗೆದುಕೊಳ್ಳುತ್ತೀರಿ ಅಷ್ಟೇ’ ಎಂದು ಕಾಂಗ್ರೆಸ್ನ ಆರ್.ವಿ.ದೇಶಪಾಂಡೆ ಹೇಳಿದರು.</p>.<p>ಆಗ ಮಧ್ಯ ಪ್ರವೇಶಿಸಿದ ಗಣಿಗ ರವಿಕುಮಾರ್, ‘ನಾನು ರಾಮನ ಸ್ತೋತ್ರ ಹೇಳುತ್ತೇನೆ, ನಿಮಗೆ ಬರುತ್ತದೆಯೇ’ ಎಂದು ಅಶೋಕ ಅವರನ್ನು ಪ್ರಶ್ನಿಸಿ, ಕೆಲವು ಸಾಲುಗಳನ್ನೂ ಪಠಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>