ಬೆಂಗಳೂರು: ಕೇರಳ ಪ್ರವಾಹ ಸಂತ್ರಸ್ತರಿಗೆ ರೈಲ್ವೆ ಇಲಾಖೆ ಮತ್ತು ಉದ್ಯೋಗಿಗಳು ಸೇರಿ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಆರಂಭಿಸಿದ್ದಾರೆ. ಹೊದಿಕೆ, ಬಟ್ಟೆ, ನೀರು, ಆಹಾರ ಧಾನ್ಯ, ಔಷಧ, ನ್ಯಾಪ್ಕಿನ್ಗಳು, ಸಿದ್ಧ ಆಹಾರ, ಎಣ್ಣೆ, ಈರುಳ್ಳಿ... ಹೀಗೆ ನೂರಾರು ಬಗೆಯ ಸಾಮಗ್ರಿಗಳು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಂಗ್ರಹವಾಗಿವೆ.