<p><strong>ಉಳ್ಳಾಲ:</strong> ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಗಳ ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಆರ್ ಟಿ ಪಿಸಿ ಆರ್ ವರದಿ ಕೈಯಲ್ಲಿದ್ದಲ್ಲಿ ಮಾತ್ರ ನಾಳೆಯಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/district/dakshina-kannada/keralians-protest-in-talapadi-at-mangaluru-after-police-denied-entry-to-karnataka-without-covid-807669.html"><strong>ವರದಿ ಕೈಯಲ್ಲಿದ್ದರೆ ಮಾತ್ರ ರಾಜ್ಯ ಪ್ರವೇಶ: ತಲಪಾಡಿಯಲ್ಲಿ ಕೇರಳಿಗರ ಪ್ರತಿಭಟನೆ</strong></a></p>.<p>ತಪಾಸಣೆ ನಡೆಸಿದಾಗ ಹಲವರ ಬಳಿ ವರದಿ ಇರಲಿಲ್ಲ. ಈ ಸಂದರ್ಭ ಜನರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಕರ್ನಾಟಕದ ವಾಹನಗಳನ್ನು ಕೆಲಕಾಲ ಗಡಿನಾಡು ಕನ್ನಡಿಗರು ತಡೆದಿದ್ದರು. ಹೀಗಾಗಿ, ನಾಳೆಯಿಂದ ಆರ್ಟಿಪಿಸಿಆರ್ ಟೆಸ್ಟ್ ತರುವಂತೆ ಅಧಿಕಾರಿಗಳು ಸೂಚಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>