<p><strong>ಬೆಂಗಳೂರು:</strong> ‘ಸಚಿವ ಕೆ.ಎಚ್. ಮುನಿಯಪ್ಪ ಅವರು ಮುಖ್ಯಮಂತ್ರಿ ಆದರೆ ಸಂತೋಷ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p><p>‘ಮುನಿಯಪ್ಪ ಮುಖ್ಯಮಂತ್ರಿ ಆಗಲಿ’ ಎಂದು ಶಿವಮೊಗ್ಗದಲ್ಲಿ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ ‘ಮುನಿಯಪ್ಪ ಅವರು ಏಳು ಬಾರಿ ಸಂಸದರಾಗಿದ್ದವರು. ಇದು ಸಾಮಾನ್ಯವಲ್ಲ. ಪಕ್ಷದಲ್ಲಿ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿ ದ್ದರು. ಅವರು ಸಮರ್ಥರಿದ್ದು, ಅರ್ಹತೆಯೂ ಇದೆ’ ಎಂದರು.</p><p>‘ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದೇವೆ. ಆ ವರ್ಗಕ್ಕೆ ಅವಕಾಶ ಸಿಕ್ಕಿತಲ್ಲ ಎಂದೂ ಸಂತೋಷ ಆಗುತ್ತದೆ. ಯಾವ ವರ್ಗ ತುಳಿತಕ್ಕೆ ಒಳಗಾಗಿತ್ತು, ಆ ವರ್ಗಕ್ಕೆ ಆಡಳಿತ ಸಿಗುತ್ತದೆ ಅಂದರೆ ಸಂತೋಷ ಅಲ್ಲವೇ? ಆದರೆ, ನಾವು ಇಲ್ಲಿ ಕುಳಿತುಕೊಂಡು ನಾಲ್ಕು ಜನ ಹೇಳಿದರೆ ಆಗುವುದಿಲ್ಲ. ಹೈಕಮಾಂಡ್ನವರು ವಿಶ್ಲೇಷಣೆ ಮಾಡುತ್ತಾರೆ’ ಎಂದರು.</p><p>‘ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ನಿಂದ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುನ್ಸೂಚನೆಯೂ ಇಲ್ಲ. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕೂ ಮಹತ್ವ ಇರುವುದಿಲ್ಲ’ ಎಂದರು.</p>.ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಚಿವ ಕೆ.ಎಚ್. ಮುನಿಯಪ್ಪ ಅವರು ಮುಖ್ಯಮಂತ್ರಿ ಆದರೆ ಸಂತೋಷ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p><p>‘ಮುನಿಯಪ್ಪ ಮುಖ್ಯಮಂತ್ರಿ ಆಗಲಿ’ ಎಂದು ಶಿವಮೊಗ್ಗದಲ್ಲಿ ಘೋಷಣೆ ಕೂಗಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ ‘ಮುನಿಯಪ್ಪ ಅವರು ಏಳು ಬಾರಿ ಸಂಸದರಾಗಿದ್ದವರು. ಇದು ಸಾಮಾನ್ಯವಲ್ಲ. ಪಕ್ಷದಲ್ಲಿ ಹಿರಿಯರು, ಕೇಂದ್ರದಲ್ಲಿ ಸಚಿವರಾಗಿ ದ್ದರು. ಅವರು ಸಮರ್ಥರಿದ್ದು, ಅರ್ಹತೆಯೂ ಇದೆ’ ಎಂದರು.</p><p>‘ನಾವೆಲ್ಲ ಒಂದು ವರ್ಗಕ್ಕೆ ಸೇರಿದ್ದೇವೆ. ಆ ವರ್ಗಕ್ಕೆ ಅವಕಾಶ ಸಿಕ್ಕಿತಲ್ಲ ಎಂದೂ ಸಂತೋಷ ಆಗುತ್ತದೆ. ಯಾವ ವರ್ಗ ತುಳಿತಕ್ಕೆ ಒಳಗಾಗಿತ್ತು, ಆ ವರ್ಗಕ್ಕೆ ಆಡಳಿತ ಸಿಗುತ್ತದೆ ಅಂದರೆ ಸಂತೋಷ ಅಲ್ಲವೇ? ಆದರೆ, ನಾವು ಇಲ್ಲಿ ಕುಳಿತುಕೊಂಡು ನಾಲ್ಕು ಜನ ಹೇಳಿದರೆ ಆಗುವುದಿಲ್ಲ. ಹೈಕಮಾಂಡ್ನವರು ವಿಶ್ಲೇಷಣೆ ಮಾಡುತ್ತಾರೆ’ ಎಂದರು.</p><p>‘ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ನಿಂದ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುನ್ಸೂಚನೆಯೂ ಇಲ್ಲ. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕೂ ಮಹತ್ವ ಇರುವುದಿಲ್ಲ’ ಎಂದರು.</p>.ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>