<p><strong>ಹೆಸರು:</strong> ಕೆ.ಎಚ್.ಮುನಿಯಪ್ಪ</p><p><strong>ಕ್ಷೇತ್ರ:</strong> ದೇವನಹಳ್ಳಿ (ಎಸ್.ಸಿ ಮೀಸಲು) (ಬೆಂಗಳೂರು ಗ್ರಾಮಾಂತರ)</p><p><strong>ವಿದ್ಯಾರ್ಹತೆ:</strong> ಕಾನೂನು ಪದವೀಧರ</p><p><strong>ವಯಸ್ಸು:</strong> 78 ವರ್ಷ</p><p><strong>ಜಾತಿ ಮತ್ತು ಒಳಜಾತಿ:</strong> ಪರಿಶಿಷ್ಟ ಜಾತಿ (ಎಡಗೈ)</p><p><strong>ಎಷ್ಟನೇ ಬಾರಿಗೆ ಶಾಸಕ:</strong> ಎರಡು ಬಾರಿ</p><p><strong>ಹಿಂದೆ ನಿರ್ವಹಿಸಿದ ಖಾತೆ:</strong> ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು. ಕೇಂದ್ರದಲ್ಲಿ ಹಲವಾರು ಖಾತೆ ನಿರ್ವಹಿಸಿದ ಅನುಭವ ಇದೆ.</p>.<p>ಮುನಿಯಪ್ಪ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯವರು. ತಾಲ್ಲೂಕು ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಆರಂಭದಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿದ್ದರು.</p><p>ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸತತ ಏಳು ಬಾರಿ ಸಂಸದರಾಗಿದ್ದಾರೆ. 1991ರಲ್ಲಿ ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ ಎಸ್. ಮುನಿಸ್ವಾಮಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋತಿದ್ದರು. </p><p>2023ರ ವಿಧಾನಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರು 4,631 ಮತಗಳಿಂದ ಜೆಡಿಎಸ್ನ ಎಲ್.ಎನ್. ನಿಸರ್ಗ ನಾರಾಯಣಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. </p><p>ಯುಪಿಎ ಸರ್ಕಾರದ ಅವಧಿಯಲ್ಲಿ ಹತ್ತು ವರ್ಷ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಅಪಾರ ಆಡಳಿತ ಅನುಭವ ಹೊಂದಿರುವ ಹಿರಿಯ ರಾಜಕಾರಣಿ ಕೆ.ಎಚ್.ಮುನಿಯಪ್ಪ ಸಿದ್ದರಾಮಯ್ಯ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಇದೀಗ ಎರಡನೇ ಬಾರಿ ಶಾಸಕರಾಗಿ ಮಂತ್ರಿ ಮಂಡಲ ಸೇರಿಕೊಂಡಿದ್ದಾರೆ. </p><p>ಅವರ ಪುತ್ರಿ ರೂಪಕಲಾ ಎಂ.ಶಶಿಧರ್ ಕೋಲಾರ ಜಿಲ್ಲೆಯ ಕೆಜಿಎಫ್ ಮೀಸಲು ಕ್ಷೇತ್ರದಲ್ಲಿ ಶಾಸಕಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರು:</strong> ಕೆ.ಎಚ್.ಮುನಿಯಪ್ಪ</p><p><strong>ಕ್ಷೇತ್ರ:</strong> ದೇವನಹಳ್ಳಿ (ಎಸ್.ಸಿ ಮೀಸಲು) (ಬೆಂಗಳೂರು ಗ್ರಾಮಾಂತರ)</p><p><strong>ವಿದ್ಯಾರ್ಹತೆ:</strong> ಕಾನೂನು ಪದವೀಧರ</p><p><strong>ವಯಸ್ಸು:</strong> 78 ವರ್ಷ</p><p><strong>ಜಾತಿ ಮತ್ತು ಒಳಜಾತಿ:</strong> ಪರಿಶಿಷ್ಟ ಜಾತಿ (ಎಡಗೈ)</p><p><strong>ಎಷ್ಟನೇ ಬಾರಿಗೆ ಶಾಸಕ:</strong> ಎರಡು ಬಾರಿ</p><p><strong>ಹಿಂದೆ ನಿರ್ವಹಿಸಿದ ಖಾತೆ:</strong> ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು. ಕೇಂದ್ರದಲ್ಲಿ ಹಲವಾರು ಖಾತೆ ನಿರ್ವಹಿಸಿದ ಅನುಭವ ಇದೆ.</p>.<p>ಮುನಿಯಪ್ಪ ಅವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯವರು. ತಾಲ್ಲೂಕು ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಆರಂಭದಲ್ಲಿ ವಕೀಲ ವೃತ್ತಿಯಲ್ಲಿ ತೊಡಗಿದ್ದರು.</p><p>ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಸತತ ಏಳು ಬಾರಿ ಸಂಸದರಾಗಿದ್ದಾರೆ. 1991ರಲ್ಲಿ ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ ಎಸ್. ಮುನಿಸ್ವಾಮಿ ವಿರುದ್ಧ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋತಿದ್ದರು. </p><p>2023ರ ವಿಧಾನಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರು 4,631 ಮತಗಳಿಂದ ಜೆಡಿಎಸ್ನ ಎಲ್.ಎನ್. ನಿಸರ್ಗ ನಾರಾಯಣಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. </p><p>ಯುಪಿಎ ಸರ್ಕಾರದ ಅವಧಿಯಲ್ಲಿ ಹತ್ತು ವರ್ಷ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಅಪಾರ ಆಡಳಿತ ಅನುಭವ ಹೊಂದಿರುವ ಹಿರಿಯ ರಾಜಕಾರಣಿ ಕೆ.ಎಚ್.ಮುನಿಯಪ್ಪ ಸಿದ್ದರಾಮಯ್ಯ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದರು. ಇದೀಗ ಎರಡನೇ ಬಾರಿ ಶಾಸಕರಾಗಿ ಮಂತ್ರಿ ಮಂಡಲ ಸೇರಿಕೊಂಡಿದ್ದಾರೆ. </p><p>ಅವರ ಪುತ್ರಿ ರೂಪಕಲಾ ಎಂ.ಶಶಿಧರ್ ಕೋಲಾರ ಜಿಲ್ಲೆಯ ಕೆಜಿಎಫ್ ಮೀಸಲು ಕ್ಷೇತ್ರದಲ್ಲಿ ಶಾಸಕಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>