ಶ್ಯಾಮಿಲಿ ಸಭಾಂಗಣದ ಕಾರ್ಯಕ್ರಮ ಮುಗಿಸಿದ ಸಿದ್ದರಾಮಯ್ಯ ಅಲ್ಲಿಂದ ಮಂಗಳೂರಿಗೂ ಖಾದರ್ ಅವರ ಕಾರಿನಲ್ಲೇ ಹೊರಟರು. ಸ್ವತಃ ಖಾದರ್ ಕಾರನ್ನು ಚಲಾಯಿಸುವ ಮೂಲಕ ಎಲ್ಲರ ಗಮನ ಸೆಳೆದರು. ಈ ಕಾರಿನಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಐವನ್ ಡಿಸೋಜ ಕೂಡ ಇದ್ದರು. ಅದೇ ರೀತಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಕೂಡ ಖಾಸಗಿ ಕಾರಿನಲ್ಲಿ ತೆರಳಿದರು.