ಈ ಹಿನ್ನೆಲೆಯಲ್ಲಿ ರಾಜ್ಯ ಉಣ್ಣೆ ಮತ್ತು ಅರಳೆ ಖಾದಿ ಕೈಮಗ್ಗ ನೇಕಾರರ ಸಹಕಾರ ಸಂಘ ಪ್ರೋತ್ಸಾಹ ಮಜೂರಿಯನ್ನು ಬಿಡುಗಡೆ ಮಾಡಿ ನೆರವಾಗುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಅವರಿಗೆ ಮನವಿ ಸಲ್ಲಿಸಿತ್ತು. ಅದಕ್ಕೆ ಸಂದಿಸಿದ ಸಚಿವರು ಮುಖ್ಯಮಂತ್ರಿಗಳ ಗಮನ ಸೆಳೆದು ಬಾಕಿ ಹಣ ಬಿಡುಗಡೆ ಮಾಡುವಂತೆ ವಿನಂತಿಸಿದ್ದರು.