<p><strong>ಚಿಕ್ಕಬಳ್ಳಾಪುರ</strong>: ಇರಾನ್ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಗೌರಿಬಿದನೂರು ತಾಲ್ಲೂಕಿನ ಅಲೀಪುರದ ಶಿಯಾ ಮುಸ್ಲಿಮರು ಕಣ್ಣೀರು ಹಾಕಿದರು. ಪಟ್ಟಣದಲ್ಲಿ ಅಘೋಷಿತ ಬಂದ್ ಸ್ಥಿತಿ ಇತ್ತು. </p><p>ಖಮೇನಿ ಅವರ ಹತ್ಯೆ ಸುದ್ದಿ ತಿಳಿದು ಭಾನುವಾರ ಬೆಳಿಗ್ಗೆ ಎಲ್ಲರೂ ಸ್ವಯಂ ಪ್ರೇರಿತವಾಗಿ ಅಂಗಡಿಗಳು ಬಾಗಿಲು ಮುಚ್ಚಿದರು. ಅಂಜುಮನ್ ಎ ಜಾಫರಿಯಾ ಸಮಿತಿ ಪ್ರತಿಭಟನೆಗೆ ಕರೆ ನೀಡಿತ್ತು. </p><p>ಜನರು ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಹಿಡಿದು ಮಸೀದಿ ಬಳಿ ದೊಡ್ಡ ಸಂಖ್ಯೆಯಲ್ಲಿ ಸೇರಿದರು. ಖಮೇನಿ ಅವರ ಭಾವಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದರು. ಕುರ್ಆನ್ ಪಠಿಸಿದರು. ಈ ವೇಳೆ ಬಹಳಷ್ಟು ಜನರು ಅವರನ್ನು ನೆನೆದು ಕಣ್ಣೀರು ಹಾಕಿದರು. ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p><p>ಮಧ್ಯಾಹ್ನ ಮಸೀದಿಯಿಂದ ಸೈಯದ್ ಮುಸ್ತಫಾ ಹುಸೇನ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಹಾಡಿನ ಮೂಲಕ ಅವರ ಸಾಧನೆ ಸ್ಮರಿಸಲಾಯಿತು.</p><p>ಭಾನುವಾರ ಸೇರಿ ಮೂರು ದಿನ ಅಲೀಪುರ ಪಟ್ಟಣದಲ್ಲಿ ಶೋಕಾಚರಣೆ ಇರಲಿದೆ. ಇಡೀ ದಿನ ಪಟ್ಟಣದಲ್ಲಿ ವ್ಯಾಪಕವಾದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಲೀಪುರದಲ್ಲಿ 25 ಸಾವಿರ ಮತ್ತು ಪಕ್ಕದ ಪೋತೇನಹಳ್ಳಿಯಲ್ಲಿ ಒಂದು ಸಾವಿರ ಶಿಯಾ ಮುಸ್ಲಿಮರು ವಾಸವಾಗಿದ್ದಾರೆ.</p>.<div><div class="bigfact-title">ಹತ್ಯೆಯಲ್ಲ ಬಲಿದಾನ</div><div class="bigfact-description">‘ಅಯಾತೊಲ್ಲಾ ಅಲಿ ಖಮೇನಿ ಅವರದ್ದು ಹತ್ಯೆಯಲ್ಲ, ಬಲಿದಾನ. ಅವರು ಸತ್ಯ, ನ್ಯಾಯದ ಪರವಾಗಿ ಇದ್ದರು. ಮಾನವತೆ ಪರವಾಗಿ ಇದ್ದರು. ಅಮೆರಿಕ ಮತ್ತು ಇಸ್ರೇಲ್ ಜಗತ್ತಿನ ಮೇಲೆ ದಬ್ಬಾಳಿಕೆ ನಡೆಸುತ್ತಿವೆ. ಅವರು ನಾಶವಾಗಲಿದ್ದಾರೆ’ ಎಂದು ಅಂಜುಮನ್ ಎ ಜಾಫರಿಯಾ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.</div></div>.<p><strong>ಬೆಳ್ಳಿಕುಂಟೆ ಅಲೀಪುರವಾಯಿತು:</strong> ಅಲೀಪುರದ ಮೂಲ ಹೆಸರು ಬೆಳ್ಳಿಕುಂಟೆ. ಈ ಹಿಂದೆ ಬಿಜಾಪುರ ಆದಿಲ್ಶಾಹಿಗಳ ಅವಧಿಯಲ್ಲಿ ಅಲ್ಲಿನ ಜನರು ಇಲ್ಲಿಗೆ ವಲಸೆ ಬಂದರು. ಮುಸ್ಲಿಮರ ಸಂಖ್ಯೆ ಹೆಚ್ಚಿದಂತೆ ಬೆಳ್ಳುಕುಂಟೆ ಅಲೀಪುರವಾಗಿ ರೂಪಾಂತರವಾಯಿತು.</p><p>ಗ್ರಾಮದ ಬಹುತೇಕ ಮಂದಿ ಇರಾನ್, ಅರಬ್ ದೇಶಗಳು ಸೇರಿದಂತೆ ಜಗತ್ತಿನ ವಿವಿಧ ದೇಶಗಳ ಜೊತೆ ವ್ಯಾಪಾರ, ವಹಿವಾಟು, ಶಿಕ್ಷಣದ ಕಾರಣಕ್ಕೆ ಸಂಪರ್ಕ ಹೊಂದಿದ್ದಾರೆ. ಗ್ರಾಮದಲ್ಲಿ ಅಂಜುಮನ್ ಜಾಫರಿಯಾ ಸಮಿತಿ ಪ್ರತ್ಯೇಕವಾದ ಕೇಬಲ್ ಚಾನಲ್ ಹೊಂದಿದೆ. ‘ಅಲಿ ಟಿವಿ’ ಹೆಸರಿನ ಈ ಚಾನಲ್ನಲ್ಲಿ ಮಸೀದಿಯ ಪ್ರಾರ್ಥನೆಗಳು, ಕುರ್ಆನ್ ಪಠಣ ಧಾರ್ಮಿಕ ವಿಚಾರಗಳು ಪ್ರಸಾರವಾಗುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಇರಾನ್ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಗೌರಿಬಿದನೂರು ತಾಲ್ಲೂಕಿನ ಅಲೀಪುರದ ಶಿಯಾ ಮುಸ್ಲಿಮರು ಕಣ್ಣೀರು ಹಾಕಿದರು. ಪಟ್ಟಣದಲ್ಲಿ ಅಘೋಷಿತ ಬಂದ್ ಸ್ಥಿತಿ ಇತ್ತು. </p><p>ಖಮೇನಿ ಅವರ ಹತ್ಯೆ ಸುದ್ದಿ ತಿಳಿದು ಭಾನುವಾರ ಬೆಳಿಗ್ಗೆ ಎಲ್ಲರೂ ಸ್ವಯಂ ಪ್ರೇರಿತವಾಗಿ ಅಂಗಡಿಗಳು ಬಾಗಿಲು ಮುಚ್ಚಿದರು. ಅಂಜುಮನ್ ಎ ಜಾಫರಿಯಾ ಸಮಿತಿ ಪ್ರತಿಭಟನೆಗೆ ಕರೆ ನೀಡಿತ್ತು. </p><p>ಜನರು ಕಪ್ಪು ಬಟ್ಟೆ ಧರಿಸಿ, ಕಪ್ಪು ಬಾವುಟ ಹಿಡಿದು ಮಸೀದಿ ಬಳಿ ದೊಡ್ಡ ಸಂಖ್ಯೆಯಲ್ಲಿ ಸೇರಿದರು. ಖಮೇನಿ ಅವರ ಭಾವಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದರು. ಕುರ್ಆನ್ ಪಠಿಸಿದರು. ಈ ವೇಳೆ ಬಹಳಷ್ಟು ಜನರು ಅವರನ್ನು ನೆನೆದು ಕಣ್ಣೀರು ಹಾಕಿದರು. ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p><p>ಮಧ್ಯಾಹ್ನ ಮಸೀದಿಯಿಂದ ಸೈಯದ್ ಮುಸ್ತಫಾ ಹುಸೇನ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಹಾಡಿನ ಮೂಲಕ ಅವರ ಸಾಧನೆ ಸ್ಮರಿಸಲಾಯಿತು.</p><p>ಭಾನುವಾರ ಸೇರಿ ಮೂರು ದಿನ ಅಲೀಪುರ ಪಟ್ಟಣದಲ್ಲಿ ಶೋಕಾಚರಣೆ ಇರಲಿದೆ. ಇಡೀ ದಿನ ಪಟ್ಟಣದಲ್ಲಿ ವ್ಯಾಪಕವಾದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಲೀಪುರದಲ್ಲಿ 25 ಸಾವಿರ ಮತ್ತು ಪಕ್ಕದ ಪೋತೇನಹಳ್ಳಿಯಲ್ಲಿ ಒಂದು ಸಾವಿರ ಶಿಯಾ ಮುಸ್ಲಿಮರು ವಾಸವಾಗಿದ್ದಾರೆ.</p>.<div><div class="bigfact-title">ಹತ್ಯೆಯಲ್ಲ ಬಲಿದಾನ</div><div class="bigfact-description">‘ಅಯಾತೊಲ್ಲಾ ಅಲಿ ಖಮೇನಿ ಅವರದ್ದು ಹತ್ಯೆಯಲ್ಲ, ಬಲಿದಾನ. ಅವರು ಸತ್ಯ, ನ್ಯಾಯದ ಪರವಾಗಿ ಇದ್ದರು. ಮಾನವತೆ ಪರವಾಗಿ ಇದ್ದರು. ಅಮೆರಿಕ ಮತ್ತು ಇಸ್ರೇಲ್ ಜಗತ್ತಿನ ಮೇಲೆ ದಬ್ಬಾಳಿಕೆ ನಡೆಸುತ್ತಿವೆ. ಅವರು ನಾಶವಾಗಲಿದ್ದಾರೆ’ ಎಂದು ಅಂಜುಮನ್ ಎ ಜಾಫರಿಯಾ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.</div></div>.<p><strong>ಬೆಳ್ಳಿಕುಂಟೆ ಅಲೀಪುರವಾಯಿತು:</strong> ಅಲೀಪುರದ ಮೂಲ ಹೆಸರು ಬೆಳ್ಳಿಕುಂಟೆ. ಈ ಹಿಂದೆ ಬಿಜಾಪುರ ಆದಿಲ್ಶಾಹಿಗಳ ಅವಧಿಯಲ್ಲಿ ಅಲ್ಲಿನ ಜನರು ಇಲ್ಲಿಗೆ ವಲಸೆ ಬಂದರು. ಮುಸ್ಲಿಮರ ಸಂಖ್ಯೆ ಹೆಚ್ಚಿದಂತೆ ಬೆಳ್ಳುಕುಂಟೆ ಅಲೀಪುರವಾಗಿ ರೂಪಾಂತರವಾಯಿತು.</p><p>ಗ್ರಾಮದ ಬಹುತೇಕ ಮಂದಿ ಇರಾನ್, ಅರಬ್ ದೇಶಗಳು ಸೇರಿದಂತೆ ಜಗತ್ತಿನ ವಿವಿಧ ದೇಶಗಳ ಜೊತೆ ವ್ಯಾಪಾರ, ವಹಿವಾಟು, ಶಿಕ್ಷಣದ ಕಾರಣಕ್ಕೆ ಸಂಪರ್ಕ ಹೊಂದಿದ್ದಾರೆ. ಗ್ರಾಮದಲ್ಲಿ ಅಂಜುಮನ್ ಜಾಫರಿಯಾ ಸಮಿತಿ ಪ್ರತ್ಯೇಕವಾದ ಕೇಬಲ್ ಚಾನಲ್ ಹೊಂದಿದೆ. ‘ಅಲಿ ಟಿವಿ’ ಹೆಸರಿನ ಈ ಚಾನಲ್ನಲ್ಲಿ ಮಸೀದಿಯ ಪ್ರಾರ್ಥನೆಗಳು, ಕುರ್ಆನ್ ಪಠಣ ಧಾರ್ಮಿಕ ವಿಚಾರಗಳು ಪ್ರಸಾರವಾಗುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>