<p><strong>ಬೆಂಗಳೂರು</strong>: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ನದಿಗಳು ಸಮುದ್ರ ಸೇರುವ ಜಾಗದಲ್ಲಿ ತಡೆಗೋಡೆ ನಿರ್ಮಿಸುವ ₹1,500 ಕೋಟಿಯ ‘ಕಾರ್ಲ್ಯಾಂಡ್’ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ.</p>.<p>ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಈ ಯೋಜನೆಯಡಿ ತಡೆಗೋಡೆ ನಿರ್ಮಿಸುವುದರಿಂದಸಮುದ್ರದ ನೀರು ನದಿಗೆ ನುಗ್ಗಿ ಉಪ್ಪಾಗುವುದನ್ನು ತಡೆಯಲಾಗುತ್ತದೆ. ಸಂಗ್ರಹವಾಗುವ ಸಿಹಿ ನೀರನ್ನು ಕೃಷಿ, ಸಿಗಡಿ ಸಾಕಾಣಿಕೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಉದ್ದೇಶಿಸಲಾಗಿದೆ. ಈ ಯೋಜನೆಯಡಿ ಮೂರು ತಾಲ್ಲೂಕುಗಳಿಗೆ ತಲಾ ₹100 ಕೋಟಿಯಂತೆ ಒಟ್ಟು ₹300 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದರು.</p>.<p>ಇದು ಯಶಸ್ವಿಯಾದರೆ, ಮುಂದಿನ ಹಂತದಲ್ಲಿ ಮಾಸ್ಟರ್ ಪ್ಲ್ಯಾನ್ ಯೋಜನೆಯಡಿ ₹1,500 ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು. ಇದರಿಂದ ಸುಮಾರು 2–3 ತಿಂಗಳು ಸಿಹಿ ನೀರು ಶೇಖರಣೆಯಾಗುತ್ತದೆ ಎಂದು ಹೇಳಿದರು.</p>.<p><strong>ಪ್ರಮುಖ ತೀರ್ಮಾನಗಳು</strong></p>.<p>*ಉಡುಪಿ –ಖಾನಾಪುರ ಹೆದ್ದಾರಿಯಲ್ಲಿ 5 ಕಿ.ಮೀ ದ್ವಿಪಥ ನಿರ್ಮಿಸಲು ₹15 ಕೋಟಿ ಅನುದಾನಕ್ಕೆ ಒಪ್ಪಿಗೆ.</p>.<p>* ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 32 ಎಕರೆ ಪ್ರದೇಶವನ್ನು ಪವನ ವಿದ್ಯುತ್ ಘಟಕ ಸ್ಥಾಪಿಸಲು ರೋಹನ್ ಸೋಲಾರ್ ಕಂಪನಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಅನುಮೋದನೆ.</p>.<p>* ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನಲ್ಲಿ ಒಂದು ಹೋಬಳಿ ಸೃಷ್ಟಿಸಲು ಒಪ್ಪಿಗೆ.</p>.<p>* ಸಂಧ್ಯಾ ಸುರಕ್ಷಾ ಯೋಜನೆಯಡಿ 60 ವರ್ಷದವರಿಗೆ ನೀಡುತ್ತಿರುವ ₹600 ಮಾಸಾಶನವನ್ನು ₹800 ಕ್ಕೂ 65 ವರ್ಷ ಮೇಲ್ಪಟ್ಟವರಿಗೆ ನೀಡುವ ₹1,000 ಮಾಸಾಶನವನ್ನು ₹1,200 ಕ್ಕೆ ಹೆಚ್ಚಿಸುವ ಕಾರ್ಯಕ್ರಮಕ್ಕೆ ಘಟನೋತ್ತರ ಅನುಮತಿ. 36 ಲಕ್ಷ ಜನರಿಗೆ ಇದರಿಂದ ಅನುಕೂಲವಾಗಲಿದ್ದು, ಸರ್ಕಾರಕ್ಕೆ ₹207 ಕೋಟಿ ವೆಚ್ಚವಾಗಲಿದೆ.</p>.<p>*ಮೈಸೂರು ಸಾಬೂನು ಮತ್ತು ಮಾರ್ಜಕ ಕಾರ್ಖನೆ ವತಿಯಿಂದ ಶಾಲಾ ವಿದ್ಯಾರ್ಥಿನಿಯರಿಗೆ ಶುಚಿ ಕಿಟ್ ಪೂರೈಕೆಗೆ ನಿರ್ಧಾರ.</p>.<p>*ಹಿಪ್ಪರಗಿ ಬ್ಯಾರೇಜ್ ರಕ್ಷಣೆಗೆ ತಡೆಗೋಡೆ ನಿರ್ಮಿಸಲು ₹28.2 ಕೋಟಿ ಅನುದಾನಕ್ಕೆ ಒಪ್ಪಿಗೆ.</p>.<p>*ಪೊಲೀಸ್ ಆಧುನೀಕರಣ ಯೋಜನೆ ಅಡಿ ₹14.5 ಕೋಟಿ ವೆಚ್ಚದಲ್ಲಿ ಇಲಾಖೆಗೆ ನಿಸ್ತಂತು ಸಂಪರ್ಕ ಜಾಲವನ್ನು ಮೇಲ್ದರ್ಜೆಗೇರಿಸಲು ಅನುಮತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ನದಿಗಳು ಸಮುದ್ರ ಸೇರುವ ಜಾಗದಲ್ಲಿ ತಡೆಗೋಡೆ ನಿರ್ಮಿಸುವ ₹1,500 ಕೋಟಿಯ ‘ಕಾರ್ಲ್ಯಾಂಡ್’ ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ.</p>.<p>ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಈ ಯೋಜನೆಯಡಿ ತಡೆಗೋಡೆ ನಿರ್ಮಿಸುವುದರಿಂದಸಮುದ್ರದ ನೀರು ನದಿಗೆ ನುಗ್ಗಿ ಉಪ್ಪಾಗುವುದನ್ನು ತಡೆಯಲಾಗುತ್ತದೆ. ಸಂಗ್ರಹವಾಗುವ ಸಿಹಿ ನೀರನ್ನು ಕೃಷಿ, ಸಿಗಡಿ ಸಾಕಾಣಿಕೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಉದ್ದೇಶಿಸಲಾಗಿದೆ. ಈ ಯೋಜನೆಯಡಿ ಮೂರು ತಾಲ್ಲೂಕುಗಳಿಗೆ ತಲಾ ₹100 ಕೋಟಿಯಂತೆ ಒಟ್ಟು ₹300 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ ಎಂದರು.</p>.<p>ಇದು ಯಶಸ್ವಿಯಾದರೆ, ಮುಂದಿನ ಹಂತದಲ್ಲಿ ಮಾಸ್ಟರ್ ಪ್ಲ್ಯಾನ್ ಯೋಜನೆಯಡಿ ₹1,500 ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು. ಇದರಿಂದ ಸುಮಾರು 2–3 ತಿಂಗಳು ಸಿಹಿ ನೀರು ಶೇಖರಣೆಯಾಗುತ್ತದೆ ಎಂದು ಹೇಳಿದರು.</p>.<p><strong>ಪ್ರಮುಖ ತೀರ್ಮಾನಗಳು</strong></p>.<p>*ಉಡುಪಿ –ಖಾನಾಪುರ ಹೆದ್ದಾರಿಯಲ್ಲಿ 5 ಕಿ.ಮೀ ದ್ವಿಪಥ ನಿರ್ಮಿಸಲು ₹15 ಕೋಟಿ ಅನುದಾನಕ್ಕೆ ಒಪ್ಪಿಗೆ.</p>.<p>* ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ 32 ಎಕರೆ ಪ್ರದೇಶವನ್ನು ಪವನ ವಿದ್ಯುತ್ ಘಟಕ ಸ್ಥಾಪಿಸಲು ರೋಹನ್ ಸೋಲಾರ್ ಕಂಪನಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಅನುಮೋದನೆ.</p>.<p>* ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನಲ್ಲಿ ಒಂದು ಹೋಬಳಿ ಸೃಷ್ಟಿಸಲು ಒಪ್ಪಿಗೆ.</p>.<p>* ಸಂಧ್ಯಾ ಸುರಕ್ಷಾ ಯೋಜನೆಯಡಿ 60 ವರ್ಷದವರಿಗೆ ನೀಡುತ್ತಿರುವ ₹600 ಮಾಸಾಶನವನ್ನು ₹800 ಕ್ಕೂ 65 ವರ್ಷ ಮೇಲ್ಪಟ್ಟವರಿಗೆ ನೀಡುವ ₹1,000 ಮಾಸಾಶನವನ್ನು ₹1,200 ಕ್ಕೆ ಹೆಚ್ಚಿಸುವ ಕಾರ್ಯಕ್ರಮಕ್ಕೆ ಘಟನೋತ್ತರ ಅನುಮತಿ. 36 ಲಕ್ಷ ಜನರಿಗೆ ಇದರಿಂದ ಅನುಕೂಲವಾಗಲಿದ್ದು, ಸರ್ಕಾರಕ್ಕೆ ₹207 ಕೋಟಿ ವೆಚ್ಚವಾಗಲಿದೆ.</p>.<p>*ಮೈಸೂರು ಸಾಬೂನು ಮತ್ತು ಮಾರ್ಜಕ ಕಾರ್ಖನೆ ವತಿಯಿಂದ ಶಾಲಾ ವಿದ್ಯಾರ್ಥಿನಿಯರಿಗೆ ಶುಚಿ ಕಿಟ್ ಪೂರೈಕೆಗೆ ನಿರ್ಧಾರ.</p>.<p>*ಹಿಪ್ಪರಗಿ ಬ್ಯಾರೇಜ್ ರಕ್ಷಣೆಗೆ ತಡೆಗೋಡೆ ನಿರ್ಮಿಸಲು ₹28.2 ಕೋಟಿ ಅನುದಾನಕ್ಕೆ ಒಪ್ಪಿಗೆ.</p>.<p>*ಪೊಲೀಸ್ ಆಧುನೀಕರಣ ಯೋಜನೆ ಅಡಿ ₹14.5 ಕೋಟಿ ವೆಚ್ಚದಲ್ಲಿ ಇಲಾಖೆಗೆ ನಿಸ್ತಂತು ಸಂಪರ್ಕ ಜಾಲವನ್ನು ಮೇಲ್ದರ್ಜೆಗೇರಿಸಲು ಅನುಮತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>