ನೆಲಮಂಗಲ ತಾಲ್ಲೂಕಿನ ಹನುಮಂತಪುರ, ಬಿದ್ಲೂರು, ಕೋಡಿಪಾಳ್ಯ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ಕಂಡುಬಂದಿದ್ದು, ನಿಯಮಗಳ ಪ್ರಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿದಾಗ ಜಮೀನುಗಳಲ್ಲಿ ಇರುವ ಗಿಡಮರಗಳು, ಕಟ್ಟಡಗಳಿಗೆ ಮಾತ್ರ ಪರಿಹಾರ ನೀಡಲಾಗುವುದು. ಆದರೆ, ಕೆಲವೆಡೆ ಹೆಚ್ಚಿನ ಪರಿಹಾರಕ್ಕಾಗಿ ಬೇರೆ ಜಮೀನುಗಳಲ್ಲಿ ಬೆಳೆದ ಗಿಡಗಳು, ದೊಡ್ಡ ಮರಗಳನ್ನು ತಂದು ನೆಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಅದಕ್ಕಾಗಿ ತನಿಖೆಗೆ ಸೂಚಿಸಲಾಗಿದೆ. ತನಿಖಾ ತಂಡದಲ್ಲಿ ಕೆಐಎಡಿಬಿ ಮುಖ್ಯ ಎಂಜಿನಿಯರ್ ಇರುತ್ತಾರೆ ಎಂದು ಹೇಳಿದ್ದಾರೆ.