ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲ್ಲಾಳಿಗಳಿಗೆ ಪ್ರವೇಶ ಇಲ್ಲ: ಕೆಐಎಡಿಬಿ ಸುತ್ತೋಲೆ

Published 23 ಜುಲೈ 2023, 18:29 IST
Last Updated 23 ಜುಲೈ 2023, 18:29 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ– ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಎಚ್ಚರಿಕೆ ನೀಡಿರುವ ಬೆನ್ನಲೇ, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.

ಈ ಕುರಿತು ಮಾತನಾಡಿರುವ ಅವರು, ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳ ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ ಅಹವಾಲು ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.

ಸರ್ಕಾರವು ಹೊರಡಿಸಿರುವ ಸುತ್ತೋಲೆಯನ್ನು ಕೆಐಎಡಿಬಿ ಕಚೇರಿಗಳಲ್ಲಿ ಕೂಡಲೇ ಕಡ್ಡಾಯವಾಗಿ ಪ್ರದರ್ಶಿಸಬೇಕು. ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವ ಶಕ್ತಿಗಳಿಗೆ ಅಂಕುಶ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೆಐಎಡಿಬಿ ಕಚೇರಿ ಇದರ ಅನುಸರಣ ಕಾರ್ಯವನ್ನೂ ಮಾಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT