<p><strong>ಬೆಂಗಳೂರು:</strong> ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ವಾದಿಗಳ ಪರವಾಗಿ ಆದೇಶ ನೀಡಲು ₹15 ಲಕ್ಷ ಲಂಚ ಪಡೆಯುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಉಪವಿಭಾಗಾಧಿಕಾರಿ (ಉತ್ತರ) ನಾಗಪ್ರಶಾಂತ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ನಗರದ ಯಲಹಂಕ ಸಮೀಪದ ಅಟ್ಟೂರು ನಿವಾಸಿ ರವಿಕುಮಾರ್. ಎಲ್ ಎಂಬುವವರ ಜಮೀನಿನ ಸ್ವಾಧೀನಕ್ಕೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಅಧಿಸೂಚನೆ ಹೊರಡಿಸಿತ್ತು. ಆ ಜಮೀನಿನ ಒಡೆತನಕ್ಕೆ ಸಂಬಂಧಿಸಿದಂತೆ ಮಂಡಳಿಯಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು. ಆ ಪ್ರಕರಣದಲ್ಲಿ ರವಿಕುಮಾರ್ ಪರವಾಗಿ ಆದೇಶ ನೀಡಲು ನಾಗಪ್ರಶಾಂತ್ ಅವರು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ರವಿಕುಮಾರ್ ಅವರು ಈ ಮೊದಲೇ ₹15 ಲಕ್ಷವನ್ನು ನಾಗಪ್ರಶಾಂತ್ ಅವರ ಚಾಲಕ (ಹೊರಗುತ್ತಿಗೆ) ಕುಮಾರ್ ಅವರಿಗೆ ನೀಡಿದ್ದರು. ಜತೆಗೆ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ರೂಪಿಸಲಾಗಿತ್ತು.</p>.<p>ಅದರಂತೆ ರವಿ ಅವರು, ನಾಗಪ್ರಶಾಂತ್ ಅವರ ಚಾಲಕ ಕುಮಾರ್ ಅವರಿಗೆ ಬುಧವಾರ ಮತ್ತೆ ₹15 ಲಕ್ಷ ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಲಾಯಿತು. ಆರೋಪಿಗಳು ಒಟ್ಟು ₹30 ಲಕ್ಷ ಪಡೆದಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿಗೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ವಾದಿಗಳ ಪರವಾಗಿ ಆದೇಶ ನೀಡಲು ₹15 ಲಕ್ಷ ಲಂಚ ಪಡೆಯುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಉಪವಿಭಾಗಾಧಿಕಾರಿ (ಉತ್ತರ) ನಾಗಪ್ರಶಾಂತ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ನಗರದ ಯಲಹಂಕ ಸಮೀಪದ ಅಟ್ಟೂರು ನಿವಾಸಿ ರವಿಕುಮಾರ್. ಎಲ್ ಎಂಬುವವರ ಜಮೀನಿನ ಸ್ವಾಧೀನಕ್ಕೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಅಧಿಸೂಚನೆ ಹೊರಡಿಸಿತ್ತು. ಆ ಜಮೀನಿನ ಒಡೆತನಕ್ಕೆ ಸಂಬಂಧಿಸಿದಂತೆ ಮಂಡಳಿಯಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು. ಆ ಪ್ರಕರಣದಲ್ಲಿ ರವಿಕುಮಾರ್ ಪರವಾಗಿ ಆದೇಶ ನೀಡಲು ನಾಗಪ್ರಶಾಂತ್ ಅವರು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ರವಿಕುಮಾರ್ ಅವರು ಈ ಮೊದಲೇ ₹15 ಲಕ್ಷವನ್ನು ನಾಗಪ್ರಶಾಂತ್ ಅವರ ಚಾಲಕ (ಹೊರಗುತ್ತಿಗೆ) ಕುಮಾರ್ ಅವರಿಗೆ ನೀಡಿದ್ದರು. ಜತೆಗೆ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ರೂಪಿಸಲಾಗಿತ್ತು.</p>.<p>ಅದರಂತೆ ರವಿ ಅವರು, ನಾಗಪ್ರಶಾಂತ್ ಅವರ ಚಾಲಕ ಕುಮಾರ್ ಅವರಿಗೆ ಬುಧವಾರ ಮತ್ತೆ ₹15 ಲಕ್ಷ ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಲಾಯಿತು. ಆರೋಪಿಗಳು ಒಟ್ಟು ₹30 ಲಕ್ಷ ಪಡೆದಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>