ದಾವಣಗೆರೆಯಲ್ಲಿ ಗುರುವಾರ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ನಟ ಕಿಚ್ಚ ಸುದೀಪ್ ಆಗಮಿಸಿಲ್ಲವೆಂದು ಆಕ್ರೋಶಗೊಂಡ ಅಭಿಮಾನಿಗಳು ನೂಕಾಟ-ತಳ್ಳಾಟ ನಡೆಸಿದ್ದರಿಂದ ನಿಯಂತ್ರಣಕ್ಕೆ ಪೊಲೀಸರು ಲಘು ಲಾಟಿ ಪ್ರಹಾರ ನಡೆಸಿದರು. ಇದಕ್ಟೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸುದೀಪ್ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಆಹ್ವಾನಿಸಿರುವ ಫೋಟೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.