<p><strong>ಬೆಂಗಳೂರು</strong>: ಕಾಲ್ಸೆಂಟರ್ (ಬಿಪಿಒ) ಮೇಲೆ ಪೊಲೀಸರ ಸೋಗಿನಲ್ಲಿ ದಾಳಿ ಮಾಡಿ ನಾಲ್ವರು ಉದ್ಯೋಗಿಗಳನ್ನು ಅಪಹರಿಸಿ, ₹18.90 ಲಕ್ಷ ಸುಲಿಗೆ ಮಾಡಿರುವ ಪ್ರಕರಣ ಸಂಬಂಧ ಕೋರಮಂಗಲ ಠಾಣೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.</p>.<p>ಮಾಲೂರು ಟೌನ್ ಠಾಣೆಯ ಕಾನ್ಸ್ಟೆಬಲ್ ಚಲಪತಿ, ಪವನ್, ಜಬಿವುಲ್ಲಾ, ಅತೀಕ್, ಭರತ್, ಪ್ರಶಾಂತ್ ಕುಮಾರ್, ಶಹಬಾಜ್ ಅಹಮದ್, ತೇಜಸ್ ದೇವ್ ಎಂಬುವವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನಾಲ್ಕು ದಿನ ಕಸ್ಟಡಿಗೆ ನೀಡಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಕೋರಮಂಗಲ ವ್ಯಾಪ್ತಿಯಲ್ಲಿ ಗ್ಲೋಬರ್ ಕನೆಕ್ಟ್ ಟೆಲಿಕಾಂ ಪ್ರೈವೆಟ್ ಲಿಮಿಟೆಡ್ ಹೆಸರಿನ ಕಾಲ್ಸೆಂಟರ್ ಕಾರ್ಯನಿರ್ವಹಿಸುತ್ತಿದೆ. ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ವ್ಯವಹಾರ ಹಾಗೂ ಗ್ರಾಹಕರನ್ನು ಹೊಂದಿದೆ. ಶನಿವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾಲ್ ಸೆಂಟರ್ ಬಳಿ ತೆರಳಿದ್ದ ಆರೋಪಿಗಳು, ಸೈಬರ್ ವಂಚನೆ ಮಾಡಲಾಗುತ್ತಿದೆ ಎಂದು ಹೆದರಿಸಿ ಉದ್ಯೋಗಿಗಳಾದ ಪವನ್, ರಾಜ್ವೀರ್, ಆಕಾಶ್, ಅನಸ್ ಎಂಬುವವರನ್ನು ಅಪಹರಿಸಿ, ಕಾರಿನಲ್ಲಿ ಕರೆದೊಯ್ದಿದ್ದರು. ಬಳಿಕ ಠಾಣೆಗೆ ಕರೆದೊಯ್ಯುವ ನೆಪದಲ್ಲಿ ಮಾಲೂರಿಗೆ ಕರೆದೊಯ್ದು, ₹25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<p>ಕಂಪನಿಯ ಉದ್ಯೋಗಿಗಳ ಖಾತೆಯಿಂದ ₹ 18 ಲಕ್ಷ ವರ್ಗಾಯಿಸಿಕೊಂಡಿದ್ದರು. ಬಳಿಕ ಮುಂಜಾನೆ 4 ಗಂಟೆಗೆ ಕಾಲ್ ಸೆಂಟರ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆಗಿಳಿದ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆ ನಡೆಸಿ, ಆರೋಪಿಗಳ ಜಾಡು ಪತ್ತೆ ಹಚ್ಚಿ ಉದ್ಯೋಗಿಗಳನ್ನು ರಕ್ಷಿಸಿದ್ದರು. ಜತೆಗೆ, ಕೃತ್ಯದಲ್ಲಿ ಶಾಮೀಲಾಗಿದ್ದ ಎಂಟು ಮಂದಿಯನ್ನು ಬಂಧಿಸಿ, ಎರಡು ಕಾರುಗಳನ್ನು ಜಪ್ತಿ ಮಾಡಿದ್ದರು.</p>.<p>ರಿಯಲ್ ಎಸ್ಟೇಟ್ ಸೇರಿ ಬೇರೆ ಕೆಲಸ ಮಾಡಿಕೊಂಡಿದ್ದ ಪವನ್, ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ. ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ಚಲಪತಿ ಜೊತೆ ಸೇರಿ ಅಪಹರಣ ಮಾಡಿದ್ದಾನೆ. ಆರೋಪಿಗಳಿಂದ ₹ 14 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಲ್ಸೆಂಟರ್ (ಬಿಪಿಒ) ಮೇಲೆ ಪೊಲೀಸರ ಸೋಗಿನಲ್ಲಿ ದಾಳಿ ಮಾಡಿ ನಾಲ್ವರು ಉದ್ಯೋಗಿಗಳನ್ನು ಅಪಹರಿಸಿ, ₹18.90 ಲಕ್ಷ ಸುಲಿಗೆ ಮಾಡಿರುವ ಪ್ರಕರಣ ಸಂಬಂಧ ಕೋರಮಂಗಲ ಠಾಣೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.</p>.<p>ಮಾಲೂರು ಟೌನ್ ಠಾಣೆಯ ಕಾನ್ಸ್ಟೆಬಲ್ ಚಲಪತಿ, ಪವನ್, ಜಬಿವುಲ್ಲಾ, ಅತೀಕ್, ಭರತ್, ಪ್ರಶಾಂತ್ ಕುಮಾರ್, ಶಹಬಾಜ್ ಅಹಮದ್, ತೇಜಸ್ ದೇವ್ ಎಂಬುವವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನಾಲ್ಕು ದಿನ ಕಸ್ಟಡಿಗೆ ನೀಡಿದ್ದು, ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಕೋರಮಂಗಲ ವ್ಯಾಪ್ತಿಯಲ್ಲಿ ಗ್ಲೋಬರ್ ಕನೆಕ್ಟ್ ಟೆಲಿಕಾಂ ಪ್ರೈವೆಟ್ ಲಿಮಿಟೆಡ್ ಹೆಸರಿನ ಕಾಲ್ಸೆಂಟರ್ ಕಾರ್ಯನಿರ್ವಹಿಸುತ್ತಿದೆ. ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ವ್ಯವಹಾರ ಹಾಗೂ ಗ್ರಾಹಕರನ್ನು ಹೊಂದಿದೆ. ಶನಿವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಕಾಲ್ ಸೆಂಟರ್ ಬಳಿ ತೆರಳಿದ್ದ ಆರೋಪಿಗಳು, ಸೈಬರ್ ವಂಚನೆ ಮಾಡಲಾಗುತ್ತಿದೆ ಎಂದು ಹೆದರಿಸಿ ಉದ್ಯೋಗಿಗಳಾದ ಪವನ್, ರಾಜ್ವೀರ್, ಆಕಾಶ್, ಅನಸ್ ಎಂಬುವವರನ್ನು ಅಪಹರಿಸಿ, ಕಾರಿನಲ್ಲಿ ಕರೆದೊಯ್ದಿದ್ದರು. ಬಳಿಕ ಠಾಣೆಗೆ ಕರೆದೊಯ್ಯುವ ನೆಪದಲ್ಲಿ ಮಾಲೂರಿಗೆ ಕರೆದೊಯ್ದು, ₹25 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<p>ಕಂಪನಿಯ ಉದ್ಯೋಗಿಗಳ ಖಾತೆಯಿಂದ ₹ 18 ಲಕ್ಷ ವರ್ಗಾಯಿಸಿಕೊಂಡಿದ್ದರು. ಬಳಿಕ ಮುಂಜಾನೆ 4 ಗಂಟೆಗೆ ಕಾಲ್ ಸೆಂಟರ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆಗಿಳಿದ ಪೊಲೀಸರು, ಹಲವು ಆಯಾಮಗಳಲ್ಲಿ ತನಿಖೆ ನಡೆಸಿ, ಆರೋಪಿಗಳ ಜಾಡು ಪತ್ತೆ ಹಚ್ಚಿ ಉದ್ಯೋಗಿಗಳನ್ನು ರಕ್ಷಿಸಿದ್ದರು. ಜತೆಗೆ, ಕೃತ್ಯದಲ್ಲಿ ಶಾಮೀಲಾಗಿದ್ದ ಎಂಟು ಮಂದಿಯನ್ನು ಬಂಧಿಸಿ, ಎರಡು ಕಾರುಗಳನ್ನು ಜಪ್ತಿ ಮಾಡಿದ್ದರು.</p>.<p>ರಿಯಲ್ ಎಸ್ಟೇಟ್ ಸೇರಿ ಬೇರೆ ಕೆಲಸ ಮಾಡಿಕೊಂಡಿದ್ದ ಪವನ್, ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ. ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ಚಲಪತಿ ಜೊತೆ ಸೇರಿ ಅಪಹರಣ ಮಾಡಿದ್ದಾನೆ. ಆರೋಪಿಗಳಿಂದ ₹ 14 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>