ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಭ್ರೂಣ ಹತ್ಯೆ | ಕೆ.ಆರ್. ಪೇಟೆ: ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ

Published 5 ಡಿಸೆಂಬರ್ 2023, 19:52 IST
Last Updated 5 ಡಿಸೆಂಬರ್ 2023, 19:52 IST
ಅಕ್ಷರ ಗಾತ್ರ

ಮಂಡ್ಯ: ಭ್ರೂಣಹತ್ಯೆ ಜಾಲ‌ ಪತ್ತೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿನ ಸ್ಲ್ಯಾನಿಂಗ್ ಕೇಂದ್ರಗಳ ತಪಾಸಣೆಗೆ ಅಧಿಕಾರಿಗಳು ಮುಂದಾಗಿದ್ದು, ನಿಯಮ ಪಾಲನೆ ಮಾಡದ ಆರೋಪದ ಮೇಲೆ ಕೆ.ಆರ್. ಪೇಟೆಯಲ್ಲಿನ ಹೊಸಹೊಳಲು ರಸ್ತೆಯಲ್ಲಿರುವ ನಾವಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ ಜಡಿದಿದ್ದಾರೆ.

ಉಪ ವಿಭಾಗಾಧಿಕಾರಿ ನಂದೀಶ್ ಹಾಗೂ ಜಿಲ್ಲಾ‌ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಜಿತ್ ನೇತೃತ್ವದ ತಂಡವು ಮಂಗಳವಾರ ಇಲ್ಲಿನ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ತಪಾಸಣೆ ನಡೆಸಿತು.

'ತಜ್ಞ ವೈದ್ಯರಿಲ್ಲದೇ ತಪಾಸಣೆ ನಡೆಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಪರಿಶೀಲನೆ ಕೈಗೊಂಡೆವು. ಆಗ ನಾವಿ ಕೇಂದ್ರದಲ್ಲಿ ಸರಿಯಾಗಿ ದಾಖಲೆಗಳನ್ನು ನಿರ್ವಹಿಸದೆ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದರಿಂದ ಕೇಂದ್ರಕ್ಕೆ ಬೀಗ ಹಾಕಲಾಯಿತು' ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT